AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಸಿವಿನ ಮಹತ್ವಕ್ಕೆ ಸಾಕ್ಷಿ ಈ ದೃಶ್ಯ, ಊಟ ವ್ಯರ್ಥ ಮಾಡುವ ಮುನ್ನ ಈ ವಿಡಿಯೋ ನೋಡಿ

ಭಾರೀ ಮಳೆಯ ನಡುವೆ ವ್ಯಕ್ತಿಯೊಬ್ಬರು ಆಹಾರ ಸೇವಿಸುತ್ತಿರುವ ಹೃದಯವಿದ್ರಾವಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಂದಗಿ ಗುಲ್ಜಾರ್ ಹೈ ಎಂಬ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Viral Video: ಹಸಿವಿನ ಮಹತ್ವಕ್ಕೆ ಸಾಕ್ಷಿ ಈ ದೃಶ್ಯ, ಊಟ ವ್ಯರ್ಥ ಮಾಡುವ ಮುನ್ನ ಈ ವಿಡಿಯೋ ನೋಡಿ
Viral Video
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Sep 13, 2022 | 4:41 PM

Share

ಭಾರೀ ಮಳೆಯ ನಡುವೆ ವ್ಯಕ್ತಿಯೊಬ್ಬರು ಊಟ ಮಾಡುತ್ತಿರುವ ಹೃದಯವಿದ್ರಾವಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಂದಗಿ ಗುಲ್ಜಾರ್ ಹೈ ಎಂಬ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿ ನಿಮ್ಮ ಕಣ್ಣಿನಲ್ಲಿ ನೀರು ಬರುವುದು ಖಂಡಿತ, ಆ ವ್ಯಕ್ತಿ ಮಳೆಯಲ್ಲಿ ತನ್ನ ಆಹಾರವನ್ನು ವ್ಯರ್ಥವಾಗದಂತೆ ಭದ್ರವಾಗಿ ಕಾಪಾಡಿಕೊಳ್ಳತ್ತಾನೆ. ತನ್ನ ಆಹಾರ ಪ್ಲೇಟ್ ಅನ್ನು ಸ್ಕೂಟರ್ ಅಡಿಯಲ್ಲಿ ಇರಿಸಿರುವುದನ್ನು ಈ ವಿಡಿಯೋದಲ್ಲಿ ನೋಡಬಹುದು.

ಇದೀಗ ವೈರಲ್ ಆಗಿರುವ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಜಿಂದಗಿ ಗುಲ್ಜಾರ್ ಹೈ ಎಂಬ ಪುಟ ಹಂಚಿಕೊಂಡಿದೆ. ಈ ಸಣ್ಣ ಕ್ಲಿಪ್‌ನಲ್ಲಿ, ಒಬ್ಬ ವ್ಯಕ್ತಿಯು ಸುರಿಯುತ್ತಿರುವ ಮಳೆಯಲ್ಲಿ ಊಟವನ್ನು ಸೇವಿಸಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ತನ್ನ ಊಟ ಮಳೆಗೆ ಕೆಡದಂತೆ ರಕ್ಷಿಸಿಸಲು ತಟ್ಟೆಯನ್ನು ಸ್ಕೂಟರ್ ಅಡಿಯಲ್ಲಿ ಇಡುವುದುನ್ನು ಈ ವಿಡಿಯೋದಲ್ಲಿ ಕಾಣಬಹುದು. ಈ ಬದುಕಿನಲ್ಲಿ ಅದೆಷ್ಟೋ ಜನ ಅನ್ನ ಇಲ್ಲದೆ ಇರುವುದಕ್ಕೆ ಇದು ಉದಾಹರಣೆ ಆಗಿದೆ. ಈ ವಿಡಿಯೋದಲ್ಲಿ ಆತನಿಗೆ ಅನ್ನ ಬೆಲೆ ಏನು? ಇದರ ಜೊತೆಗೆ ಅವನಿಗೆ ಎಷ್ಟು ಹಸಿವಾಗಿರಬೇಕು ಎಂಬುದನ್ನು ಈ ವಿಡಿಯೋದಲ್ಲಿ ನೋಡಬಹದು.

ಓ ದೇವರೇ ನಾನು ನಿನ್ನ ಏನೆಲ್ಲ ಕೇಳಿರಬಹದು ಗೊತ್ತಿಲ್ಲ, ಆದರೆ ಈ ದೃಶ್ಯವನ್ನು ನೋಡಿದ ನಂತರ ನಾನು ಬೇಡಿದೆಲ್ಲವನ್ನು ಈಡೇರಿಸದಿದ್ದರು ಪರವಾಗಿಲ್ಲ, ಆದರೆ ಯಾರಿಗೂ ಹಸಿವಿನ ಸಂಕಷ್ಟ ನೀಡಬೇಡ  ಎಂದು ಈ ಪೋಸ್ಟ್‌ನ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ನೋಡಿ ಅನೇಕ ಕಾಮೆಂಟ್ ಮಾಡಿದ್ದಾರೆ, ಜೊತೆಗೆ ಶೇರ್ ಮಾಡಿದ್ದಾರೆ. ನಮ್ಮ ದೇಶದಲ್ಲಿ ಈಗಲೂ ಇಂತಹ ಸ್ಥಿತಿ ಇದೆ ಎಂಬುದಕ್ಕೆ ಇದು ಸಾಕ್ಷಿ ಎಂದಿದ್ದಾರೆ.

Published On - 4:35 pm, Tue, 13 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ