Viral video: ರೈಲಿನಲ್ಲಿ ಸೀಟಿಗಾಗಿ ಕೂದಲು ಎಳೆದಾಡಿ ಜಗಳವಾಡಿದ ಮಹಿಳೆಯರು, ಆಂಟಿ ಚೋಡ್ ದೋ ಎಂದ ಪ್ರಯಾಣಿಕರು

ರೈಲಿನಲ್ಲಿ ಸೀಟಿಗಾಗಿ ಮೂವರು ಮಹಿಳೆಯರ ನಡುವೆ ಆರಂಭವಾದ ವಾಗ್ವಾದ ತಾರಕಕ್ಕೇರಿ ಪರಸ್ಪರ ಕೈಕೈ ಮಿಲಾಯಿಸಿಕೊಂಡ ಘಟನೆ ಮುಂಬೈನ ಸ್ಥಳೀಯ ರೈಲಿನಲ್ಲಿ ನಡೆದಿದೆ. ಇದರ ವಿಡಿಯೋ ಇಂಟರ್ನೆಟ್​ನಲ್ಲಿ ಕಾಣಿಸಿಕೊಂಡಿದೆ.

Viral video: ರೈಲಿನಲ್ಲಿ ಸೀಟಿಗಾಗಿ ಕೂದಲು ಎಳೆದಾಡಿ ಜಗಳವಾಡಿದ ಮಹಿಳೆಯರು, ಆಂಟಿ ಚೋಡ್ ದೋ ಎಂದ ಪ್ರಯಾಣಿಕರು
ರೈಲಿನಲ್ಲಿ ಮಹಿಳೆಯರ ಜಗಳ
Follow us
| Updated By: Rakesh Nayak Manchi

Updated on: Oct 18, 2022 | 12:27 PM

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರ ಫೈಟಿಂಗ್ ವಿಡಿಯೋ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಒಂದಲ್ಲಾ ಒಂದು ವಿಚಾರದಲ್ಲಿ ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ಕಿತ್ತಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಒಬ್ಬ ಯುವಕನಿಗಾಗಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಜಗಳ ಮಾಡಿಕೊಂಡ ವಿಡಿಯೋ ಭಾರೀ ವೈರಲ್ ಆಗಿತ್ತು. ಇದೀಗ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದ್ದು, ಇದು ಕ್ಷುಲ್ಲಕ ಕಾರಣಕ್ಕೆ ರೈಲಿನಲ್ಲಿ ನಡೆದ ಜಗಳವಾಗಿದೆ. ವೈರಲ್ ವಿಡಿಯೋದಲ್ಲಿ ಇರುವಂತೆ, ಆಸನಗಳು ಭರ್ತಿಯಾಗಿದ್ದ ರೈಲಿನಲ್ಲಿ ಸೀಟಿಗಾಗಿ ಮೂವರು ಮಹಿಳೆಯರ ನಡುವೆ ವಾಗ್ವಾದ ಆರಂಭಗೊಳ್ಳುತ್ತದೆ. ಇದು ತಾರಕಕ್ಕೇರಿ ಪರಸ್ಪರ ಕೂದಲು ಎಳೆದುಕೊಂಡು ಮುಖಕ್ಕೆ ಹೊಡೆದಾಡಿಕೊಂಡಿದ್ದಾರೆ. ಇವರ ಜಗಳದ ಗಂಭೀರತೆಯನ್ನು ಅರಿತ ಪ್ರಯಾಣಿಕರು ಕಿತ್ತಾಡಿಕೊಳ್ಳುತ್ತಿದ್ದವರನ್ನು ಬೇರ್ಪಡಿಸಲು ಮುಂದಾಗುತ್ತಾರೆ. ಆಂಟಿ ಚೋಡ್ ದೋ ಅಂತ ಪ್ರಯಾಣಿಕರು ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕೇಳಿಸಬಹುದು.

ರೋಡ್ಸ್ ಆಫ್ ಮುಂಬೈ ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಸ್ಪಿರಿಟ್ ಆಫ್ ಮುಂಬೈ – ಭಾಗ 4 ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ಎರಡು ದಿನಗಳ ಹಿಂದೆ ಹಂಚಿಕೊಂಡಿರುವ ಈ ವಿಡಿಯೋವನ್ನು ಈವರೆಗೆ 5.35 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದು, 6 ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ.

ಮುಂಬೈ ಸ್ಥಳೀಯ ರೈಲುಗಳಲ್ಲಿ ಹೊಡೆದಾಟ ನಡೆದಿರುವುದು ಇದೇ ಮೊದಲಲ್ಲ. ಕೆಲವು ದಿನಗಳ ಹಿಂದೆ ಇದೇ ರೀತಿಯ ಘಟನೆ ನಡೆದಿತ್ತು. ಇದರಲ್ಲಿ ಮುಂಬೈ ರೈಲಿನ ಮಹಿಳಾ ಕಂಪಾರ್ಟ್‌ಮೆಂಟ್ ಸಹ ಪ್ರಯಾಣಿಕರ ನಡುವಿನ ಕಾದಾಟ ನಡೆದಿತ್ತು. ಥಾಣೆ-ಪನ್ವೇಲ್ ಲೋಕಲ್ ರೈಲಿನಲ್ಲಿ ಮಹಿಳೆಯರು ಪರಸ್ಪರ ಘರ್ಷಣೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್