AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ರೈಲಿನಲ್ಲಿ ಸೀಟಿಗಾಗಿ ಕೂದಲು ಎಳೆದಾಡಿ ಜಗಳವಾಡಿದ ಮಹಿಳೆಯರು, ಆಂಟಿ ಚೋಡ್ ದೋ ಎಂದ ಪ್ರಯಾಣಿಕರು

ರೈಲಿನಲ್ಲಿ ಸೀಟಿಗಾಗಿ ಮೂವರು ಮಹಿಳೆಯರ ನಡುವೆ ಆರಂಭವಾದ ವಾಗ್ವಾದ ತಾರಕಕ್ಕೇರಿ ಪರಸ್ಪರ ಕೈಕೈ ಮಿಲಾಯಿಸಿಕೊಂಡ ಘಟನೆ ಮುಂಬೈನ ಸ್ಥಳೀಯ ರೈಲಿನಲ್ಲಿ ನಡೆದಿದೆ. ಇದರ ವಿಡಿಯೋ ಇಂಟರ್ನೆಟ್​ನಲ್ಲಿ ಕಾಣಿಸಿಕೊಂಡಿದೆ.

Viral video: ರೈಲಿನಲ್ಲಿ ಸೀಟಿಗಾಗಿ ಕೂದಲು ಎಳೆದಾಡಿ ಜಗಳವಾಡಿದ ಮಹಿಳೆಯರು, ಆಂಟಿ ಚೋಡ್ ದೋ ಎಂದ ಪ್ರಯಾಣಿಕರು
ರೈಲಿನಲ್ಲಿ ಮಹಿಳೆಯರ ಜಗಳ
TV9 Web
| Edited By: |

Updated on: Oct 18, 2022 | 12:27 PM

Share

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರ ಫೈಟಿಂಗ್ ವಿಡಿಯೋ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಒಂದಲ್ಲಾ ಒಂದು ವಿಚಾರದಲ್ಲಿ ಮಹಿಳೆಯರು ಸಾರ್ವಜನಿಕ ಸ್ಥಳಗಳಲ್ಲಿ ಕಿತ್ತಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ಒಬ್ಬ ಯುವಕನಿಗಾಗಿ ಇಬ್ಬರು ಕಾಲೇಜು ವಿದ್ಯಾರ್ಥಿನಿಯರು ಜಗಳ ಮಾಡಿಕೊಂಡ ವಿಡಿಯೋ ಭಾರೀ ವೈರಲ್ ಆಗಿತ್ತು. ಇದೀಗ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದ್ದು, ಇದು ಕ್ಷುಲ್ಲಕ ಕಾರಣಕ್ಕೆ ರೈಲಿನಲ್ಲಿ ನಡೆದ ಜಗಳವಾಗಿದೆ. ವೈರಲ್ ವಿಡಿಯೋದಲ್ಲಿ ಇರುವಂತೆ, ಆಸನಗಳು ಭರ್ತಿಯಾಗಿದ್ದ ರೈಲಿನಲ್ಲಿ ಸೀಟಿಗಾಗಿ ಮೂವರು ಮಹಿಳೆಯರ ನಡುವೆ ವಾಗ್ವಾದ ಆರಂಭಗೊಳ್ಳುತ್ತದೆ. ಇದು ತಾರಕಕ್ಕೇರಿ ಪರಸ್ಪರ ಕೂದಲು ಎಳೆದುಕೊಂಡು ಮುಖಕ್ಕೆ ಹೊಡೆದಾಡಿಕೊಂಡಿದ್ದಾರೆ. ಇವರ ಜಗಳದ ಗಂಭೀರತೆಯನ್ನು ಅರಿತ ಪ್ರಯಾಣಿಕರು ಕಿತ್ತಾಡಿಕೊಳ್ಳುತ್ತಿದ್ದವರನ್ನು ಬೇರ್ಪಡಿಸಲು ಮುಂದಾಗುತ್ತಾರೆ. ಆಂಟಿ ಚೋಡ್ ದೋ ಅಂತ ಪ್ರಯಾಣಿಕರು ಹೇಳುತ್ತಿರುವುದನ್ನು ವಿಡಿಯೋದಲ್ಲಿ ಕೇಳಿಸಬಹುದು.

ರೋಡ್ಸ್ ಆಫ್ ಮುಂಬೈ ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಸ್ಪಿರಿಟ್ ಆಫ್ ಮುಂಬೈ – ಭಾಗ 4 ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ಎರಡು ದಿನಗಳ ಹಿಂದೆ ಹಂಚಿಕೊಂಡಿರುವ ಈ ವಿಡಿಯೋವನ್ನು ಈವರೆಗೆ 5.35 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದು, 6 ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ.

ಮುಂಬೈ ಸ್ಥಳೀಯ ರೈಲುಗಳಲ್ಲಿ ಹೊಡೆದಾಟ ನಡೆದಿರುವುದು ಇದೇ ಮೊದಲಲ್ಲ. ಕೆಲವು ದಿನಗಳ ಹಿಂದೆ ಇದೇ ರೀತಿಯ ಘಟನೆ ನಡೆದಿತ್ತು. ಇದರಲ್ಲಿ ಮುಂಬೈ ರೈಲಿನ ಮಹಿಳಾ ಕಂಪಾರ್ಟ್‌ಮೆಂಟ್ ಸಹ ಪ್ರಯಾಣಿಕರ ನಡುವಿನ ಕಾದಾಟ ನಡೆದಿತ್ತು. ಥಾಣೆ-ಪನ್ವೇಲ್ ಲೋಕಲ್ ರೈಲಿನಲ್ಲಿ ಮಹಿಳೆಯರು ಪರಸ್ಪರ ಘರ್ಷಣೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!