AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಡಾನೆಯನ್ನು ಕಾರಿನಲ್ಲಿ ಅಡ್ಡಗಟ್ಟಿ, ಓಡಿಸಿಕೊಂಡು ಹೋದ ಟಿಕ್​ಟಾಕರ್; ವಿಡಿಯೋ ನೋಡಿ ಸಿಟ್ಟಿಗೆದ್ದ ನೆಟ್ಟಿಗರು

ರಾತ್ರಿ ಖಾಲಿ ರಸ್ತೆಯಲ್ಲಿ ಓಡಾಡುತ್ತಿದ್ದ ಆನೆಯನ್ನು ಹೆದರಿಸಿದ ಟಿಕ್​ಟಾಕರ್ ತನ್ನ ಕಾರಿನಿಂದ ಆ ಆನೆಯನ್ನು ಓಡಿಸಿಕೊಂಡು ಹೋಗಿದ್ದಾರೆ. ಇದರಿಂದ ಆ ಆನೆ ಭಯಭೀತವಾಗಿರುವುದು ವಿಡಿಯೋದಲ್ಲಿ ಗೋಚರವಾಗುತ್ತಿದೆ.

Viral Video: ಕಾಡಾನೆಯನ್ನು ಕಾರಿನಲ್ಲಿ ಅಡ್ಡಗಟ್ಟಿ, ಓಡಿಸಿಕೊಂಡು ಹೋದ ಟಿಕ್​ಟಾಕರ್; ವಿಡಿಯೋ ನೋಡಿ ಸಿಟ್ಟಿಗೆದ್ದ ನೆಟ್ಟಿಗರು
ಆನೆಯ ವಿಡಿಯೋ
TV9 Web
| Updated By: ಸುಷ್ಮಾ ಚಕ್ರೆ|

Updated on:Feb 05, 2022 | 2:41 PM

Share

ಕೆಲವು ದಿನಗಳ ಹಿಂದೆ ಶ್ರೀಲಂಕಾದಲ್ಲಿ ನಡೆದ ಘಟನೆಯೊಂದು ಇಂಟರ್​ನೆಟ್​ನಲ್ಲಿ (Online) ಬಿರುಗಾಳಿಯನ್ನೇ ಎಬ್ಬಿಸಿದೆ. ಟಿಕ್​ಟಾಕ್  (TikTok) ವಿಡಿಯೋ ಮಾಡಿ ಪ್ರಸಿದ್ಧಿಯಾಗಿದ್ದ ಟಿಕ್‌ಟಾಕರ್ ಒಬ್ಬ ತನ್ನ ಕಾರಿನಲ್ಲಿ ಆನೆಯನ್ನು ಬೆನ್ನತ್ತಿ ಹೋಗಿ, ಅದಕ್ಕೆ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ. ಕಾಡಿನ ಸಮೀಪವಿರುವ ರಸ್ತೆಯೊಂದರಲ್ಲಿ ವ್ಯಕ್ತಿಯೊಬ್ಬ ಮಧ್ಯರಾತ್ರಿ ಕಾಡಾನೆಗೆ ಕಿರುಕುಳ ನೀಡುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ನೋಡಬಹುದು.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ವಿಡಿಯೋವನ್ನು ಮೊದಲು @shashikagimhandha ಎಂಬ ಬಳಕೆದಾರರು ಟಿಕ್​ಟಾಕ್​ನಲ್ಲಿ ಹಂಚಿಕೊಂಡಿದ್ದರು. ಇದು ವೈರಲ್ ಆದ ನಂತರ ಟ್ವಿಟ್ಟರ್ ಮತ್ತು ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಆ ವಿಡಿಯೋವನ್ನು ಮತ್ತೆ ಹಂಚಿಕೊಳ್ಳಲಾಗಿದೆ.

‘ಕಾಡು ಪ್ರಾಣಿಗಳಿಗೆ ಈ ರೀತಿ ಶಿಕ್ಷೆ ನೀಡುವುದು ಸರಿಯಲ್ಲ ಎಂದು ನಿಮಗೆ ಇನ್ನೂ ಅರ್ಥವಾಗದಿದ್ದರೆ ನಿಮ್ಮ ತಲೆಯಲ್ಲಿ ಮೆದುಳೇ ಇಲ್ಲ ಎಂದು ಅರ್ಥ. ಸೋಷಿಯಲ್ ಮೀಡಿಯಾದಲ್ಲಿ ಪ್ರಸಿದ್ಧಿ ಪಡೆಯಬೇಕೆಂಬ ಕಾರಣಕ್ಕೆ ವನ್ಯಜೀವಿಗಳಿಗೆ ಹಿಂಸೆ ನೀಡಬೇಡಿ. ಅದು ಸರಿಯಲ್ಲ. ಈ ರೀತಿ ಹಿಂಸೆ ಮಾಡಿದ ವ್ಯಕ್ತಿಗೆ ತಕ್ಕ ಶಿಕ್ಷೆಯಾಗಬೇಕು’ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಡಿಯೋದಲ್ಲಿ ಟಿಕ್‌ಟಾಕ್ ಬಳಕೆದಾರರು ತಮ್ಮ ಕಾರಿನೊಂದಿಗೆ ಕಾಡಾನೆಯನ್ನು ಹೆದರಿಸುತ್ತಿರುವುದನ್ನು ನೋಡಬಹುದು. ರಾತ್ರಿ ಖಾಲಿ ರಸ್ತೆಯಲ್ಲಿ ಓಡಾಡುತ್ತಿದ್ದ ಆನೆಯನ್ನು ಹೆದರಿಸಿದ ಟಿಕ್​ಟಾಕರ್ ತನ್ನ ಕಾರಿನಿಂದ ಆ ಆನೆಯನ್ನು ಓಡಿಸಿಕೊಂಡು ಹೋಗಿದ್ದಾರೆ. ಇದರಿಂದ ಆ ಆನೆ ಭಯಭೀತವಾಗಿರುವುದು ವಿಡಿಯೋದಲ್ಲಿ ಗೋಚರವಾಗುತ್ತಿದೆ.

ಈ ವೀಡಿಯೊ ಶ್ರೀಲಂಕಾದ ವನ್ಯಜೀವಿ ಮತ್ತು ಪ್ರಕೃತಿ ಸಂರಕ್ಷಣಾ ಸೊಸೈಟಿಯ ಗಮನ ಸೆಳೆದಿದ್ದು, ಈ ಆತಂಕಕಾರಿ ಘಟನೆಯ ಎಲ್ಲಾ ವಿವರಗಳನ್ನು ಅವರು ವನ್ಯಜೀವಿ ಸಂರಕ್ಷಣಾ ಇಲಾಖೆಗೆ ಸಲ್ಲಿಸಿದ್ದು, ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:Viral Video: ಸಿಎಂ ಜಗನ್ ಮೋಹನ್ ರೆಡ್ಡಿ ಬಂಗಿ ಜಂಪ್ ಮಾಡಿದ ವಿಡಿಯೋ ವೈರಲ್

Shocking News: ಮಾರ್ಗ ಮಧ್ಯೆ ಶಿಫ್ಟ್ ಮುಗಿದಿದ್ದರಿಂದ ವಿಮಾನ ಹಾರಿಸೋದಿಲ್ಲ ಎಂದ ಪೈಲಟ್; ಆಮೇಲೇನಾಯ್ತು?

Published On - 2:10 pm, Sat, 5 February 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್