AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕದ ಜನ ಇಂತಹ ಜಾಗಗಳನ್ನು ಹುಡುಕುತ್ತಿದ್ದಾರೆ

ರಾಜ್ಯದಲ್ಲಿ ಸೆಕೆ ವಿಪರೀತವಾಗಿದೆ. ಹೆಚ್ಚುತ್ತಿರುವ ತಾಪದಿಂದ ತಪ್ಪಿಸಿಕೊಳ್ಳಲು ಜನರು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ಹರಿಯುತ್ತಿರುವ ನೀರಿನಲ್ಲಿ ಹಾಯಾಗಿ ಮಲಗಿದ್ದು ಪಕ್ಕಕ್ಕೆ ಪ್ಯಾನ್ ಕೂಡ ಇಟ್ಟುಕೊಂಡಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ.

Viral Video : ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕದ ಜನ ಇಂತಹ ಜಾಗಗಳನ್ನು ಹುಡುಕುತ್ತಿದ್ದಾರೆ
ಸಾಯಿನಂದಾ
| Edited By: |

Updated on: Apr 06, 2024 | 3:17 PM

Share

ದೇಶಾದ್ಯಂತ ಬಿಸಿಲಿನ ಧಗೆ ದಿನದಿಂದ ಹೆಚ್ಚುತ್ತಲೇ ಇದೆ. ಅದರಲ್ಲೂ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರ ತಾಪಕ್ಕೆ ಜನರು ಪರದಾಡುತ್ತಿದ್ದಾರೆ. ಮನೆಯೊಳಗೆ ಇರಲು ಆಗದೇ, ಹೊರಗಡೆ ಕಾಲಿಡಲು ಆಗುತ್ತಿಲ್ಲ. ಇತ್ತ ಫ್ಯಾನಿನಡಿಯಲ್ಲಿ ಕುಳಿತುಕೊಳ್ಳುವ ಎಂದರೆ ಬಿಸಿ ಗಾಳಿಯನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಇಲ್ಲೊಬ್ಬ ವ್ಯಕ್ತಿಯು ಹಚ್ಚ ಹಸಿರಿನ ಪರಿಸರದ ನಡುವೆ ಹರಿಯುತ್ತಿರುವ ನೀರಿನಲ್ಲಿ ಹಾಯಾಗಿ ಮಲಗಿದ್ದು, ಪಕ್ಕದಲ್ಲೇ ಪ್ಯಾನ್ ಅನ್ನು ಇಟ್ಟುಕೊಂಡಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈ ವಿಡಿಯೋವನ್ನು ಕುಮಾರ್ ಎಸ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, ‘ಸದ್ಯ ಕರ್ನಾಟಕದ ಜನ ಇಂತಹ ಜಾಗಗಳ ಹುಡುಕಾಟದಲ್ಲಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಕೆಲವೇ ಕೆಲವು ಸೆಕೆಂಡಿನ ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬನುಯೊಬ್ಬನು ಹರಿಯುವ ನೀರಿನಲ್ಲಿ ಮೈಯೊಡ್ಡಿ ಮಲಗಿರುವುದನ್ನು ಕಾಣಬಹುದು. ಅದಲ್ಲದೇ ಪಕ್ಕದಲ್ಲೇ ಫ್ಯಾನ್ ಕೂಡ ಇಟ್ಟಿದ್ದಾನೆ. ಈ ಕ್ಲಿಪಿಂಗ್ಸ್ ನೋಡಿದರೆ ವಿಪರೀತ ತಾಪದಿಂದ ಮುಕ್ತಿ ಹೊಂದಲು ಹೇಳಿ ಮಾಡಿಸಿದ ಐಡಿಯಾ ಇದು ಎನ್ನುವಂತಿದೆ.

ಇದನ್ನೂ ಓದಿ: ಕಾರಿಗೆ ಚಿಪ್ಸ್ ಪ್ಯಾಕೆಟ್​​​​ನಿಂದ ಅಲಂಕಾರ, ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ಮದುಮಗ

ವೈರಲ್​​ ವಿಡಿಯೋ ಇಲ್ಲಿದೆ

ಈ ವಿಡಿಯೋವೊಂದನ್ನು ಶೇರ್ ಮಾಡಿಕೊಳ್ಳುತ್ತಿದ್ದಂತೆ ನಲವತ್ತೊಂದು ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಕಂಡಿದ್ದು, ನೆಟ್ಟಿಗರು ಈತನ ಈ ಐಡಿಯಾವನ್ನು ಮೆಚ್ಚಿಕೊಂಡಿದ್ದು, ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ