AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕದ ಜನ ಇಂತಹ ಜಾಗಗಳನ್ನು ಹುಡುಕುತ್ತಿದ್ದಾರೆ

ರಾಜ್ಯದಲ್ಲಿ ಸೆಕೆ ವಿಪರೀತವಾಗಿದೆ. ಹೆಚ್ಚುತ್ತಿರುವ ತಾಪದಿಂದ ತಪ್ಪಿಸಿಕೊಳ್ಳಲು ಜನರು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ವ್ಯಕ್ತಿಯೊಬ್ಬನು ಹರಿಯುತ್ತಿರುವ ನೀರಿನಲ್ಲಿ ಹಾಯಾಗಿ ಮಲಗಿದ್ದು ಪಕ್ಕಕ್ಕೆ ಪ್ಯಾನ್ ಕೂಡ ಇಟ್ಟುಕೊಂಡಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ.

Viral Video : ಸದ್ಯದ ಪರಿಸ್ಥಿತಿಯಲ್ಲಿ ಕರ್ನಾಟಕದ ಜನ ಇಂತಹ ಜಾಗಗಳನ್ನು ಹುಡುಕುತ್ತಿದ್ದಾರೆ
ಸಾಯಿನಂದಾ
| Edited By: |

Updated on: Apr 06, 2024 | 3:17 PM

Share

ದೇಶಾದ್ಯಂತ ಬಿಸಿಲಿನ ಧಗೆ ದಿನದಿಂದ ಹೆಚ್ಚುತ್ತಲೇ ಇದೆ. ಅದರಲ್ಲೂ, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರ ತಾಪಕ್ಕೆ ಜನರು ಪರದಾಡುತ್ತಿದ್ದಾರೆ. ಮನೆಯೊಳಗೆ ಇರಲು ಆಗದೇ, ಹೊರಗಡೆ ಕಾಲಿಡಲು ಆಗುತ್ತಿಲ್ಲ. ಇತ್ತ ಫ್ಯಾನಿನಡಿಯಲ್ಲಿ ಕುಳಿತುಕೊಳ್ಳುವ ಎಂದರೆ ಬಿಸಿ ಗಾಳಿಯನ್ನು ತಡೆದುಕೊಳ್ಳಲು ಆಗುತ್ತಿಲ್ಲ. ಇಲ್ಲೊಬ್ಬ ವ್ಯಕ್ತಿಯು ಹಚ್ಚ ಹಸಿರಿನ ಪರಿಸರದ ನಡುವೆ ಹರಿಯುತ್ತಿರುವ ನೀರಿನಲ್ಲಿ ಹಾಯಾಗಿ ಮಲಗಿದ್ದು, ಪಕ್ಕದಲ್ಲೇ ಪ್ಯಾನ್ ಅನ್ನು ಇಟ್ಟುಕೊಂಡಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈ ವಿಡಿಯೋವನ್ನು ಕುಮಾರ್ ಎಸ್ ಹೆಸರಿನ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, ‘ಸದ್ಯ ಕರ್ನಾಟಕದ ಜನ ಇಂತಹ ಜಾಗಗಳ ಹುಡುಕಾಟದಲ್ಲಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಕೆಲವೇ ಕೆಲವು ಸೆಕೆಂಡಿನ ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬನುಯೊಬ್ಬನು ಹರಿಯುವ ನೀರಿನಲ್ಲಿ ಮೈಯೊಡ್ಡಿ ಮಲಗಿರುವುದನ್ನು ಕಾಣಬಹುದು. ಅದಲ್ಲದೇ ಪಕ್ಕದಲ್ಲೇ ಫ್ಯಾನ್ ಕೂಡ ಇಟ್ಟಿದ್ದಾನೆ. ಈ ಕ್ಲಿಪಿಂಗ್ಸ್ ನೋಡಿದರೆ ವಿಪರೀತ ತಾಪದಿಂದ ಮುಕ್ತಿ ಹೊಂದಲು ಹೇಳಿ ಮಾಡಿಸಿದ ಐಡಿಯಾ ಇದು ಎನ್ನುವಂತಿದೆ.

ಇದನ್ನೂ ಓದಿ: ಕಾರಿಗೆ ಚಿಪ್ಸ್ ಪ್ಯಾಕೆಟ್​​​​ನಿಂದ ಅಲಂಕಾರ, ಮಂಟಪಕ್ಕೆ ಭರ್ಜರಿ ಎಂಟ್ರಿ ಕೊಟ್ಟ ಮದುಮಗ

ವೈರಲ್​​ ವಿಡಿಯೋ ಇಲ್ಲಿದೆ

ಈ ವಿಡಿಯೋವೊಂದನ್ನು ಶೇರ್ ಮಾಡಿಕೊಳ್ಳುತ್ತಿದ್ದಂತೆ ನಲವತ್ತೊಂದು ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಕಂಡಿದ್ದು, ನೆಟ್ಟಿಗರು ಈತನ ಈ ಐಡಿಯಾವನ್ನು ಮೆಚ್ಚಿಕೊಂಡಿದ್ದು, ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ.

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!