AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೈಕಲ್​ಗೆ ಬಿಸಿಲು ಬೀಳದಂತೆ ತಡೆಯಲು ಅಜ್ಜ ಮಾಡಿದ ಉಪಾಯ ನೋಡಿ, ಓಡಿಸುವುದೂ ನಿಲ್ಲಿಲ್ಲ, ಬಿಸಿಲ ಬೇಗೆಯೂ ಇಲ್ಲ

ನಿತ್ಯ ದುಡಿದರೇ ಅನ್ನ, ಒಂದು ಹೊತ್ತು ಕೆಲಸ ಬಿಟ್ಟರೂ ಅಂದು ಉಪವಾಸವೆಂಬ ಪರಿಸ್ಥಿತಿ. ಹೀಗಿರುವಾಗ ಸೈಕಲ್​ನಲ್ಲಿ ಅದೂ ಇಳಿ ವಯಸ್ಸಿನಲ್ಲಿ ಸೈಕಲ್ ಏರಿ ಹೋಗುವಷ್ಟು ಶಕ್ತಿಯೂ ಇಲ್ಲ, ಹೀಗಾಗಿ ಈ ಅಜ್ಜ ಒಂದು ಅದ್ಭುತ ಉಪಾಯ ಮಾಡಿದ್ದಾರೆ.

Viral Video: ಸೈಕಲ್​ಗೆ ಬಿಸಿಲು ಬೀಳದಂತೆ ತಡೆಯಲು ಅಜ್ಜ ಮಾಡಿದ ಉಪಾಯ ನೋಡಿ, ಓಡಿಸುವುದೂ ನಿಲ್ಲಿಲ್ಲ, ಬಿಸಿಲ ಬೇಗೆಯೂ ಇಲ್ಲ
ಸೈಕಲ್Image Credit source: ABP Live
ನಯನಾ ರಾಜೀವ್
|

Updated on: May 25, 2023 | 2:40 PM

Share

ನಿತ್ಯ ದುಡಿದರೇ ಅನ್ನ, ಒಂದು ಹೊತ್ತು ಕೆಲಸ ಬಿಟ್ಟರೂ ಅಂದು ಉಪವಾಸವೆಂಬ ಪರಿಸ್ಥಿತಿ. ಹೀಗಿರುವಾಗ ಬಿಸಿಲಲ್ಲಿ ಅದೂ ಇಳಿ ವಯಸ್ಸಿನಲ್ಲಿ ಸೈಕಲ್ ಏರಿ ಹೋಗುವಷ್ಟು ಶಕ್ತಿಯೂ ಇಲ್ಲ, ಹೀಗಾಗಿ ಈ ಅಜ್ಜ ಒಂದು ಅದ್ಭುತ ಉಪಾಯ ಮಾಡಿದ್ದಾರೆ. ಜನರು ಈ ಬಿಸಿಲಿನಲ್ಲಿ ಕಾರಿನಲ್ಲಿ ಓಡಾಡಲೂ ಹಿಂಜರಿಯುತ್ತಿರುವ ಈ ಸಂದರ್ಭದಲ್ಲಿ ಈ ಅಜ್ಜ ತುಂಬಾ ತಲೆ ಖರ್ಚು ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನು ಸಾಮಾನ್ಯರು ಊಹಿಸಲೂ ಅಸಾಧ್ಯ, ಕೆಲವು ಮರದ ಕಂಬಗಳನ್ನು ಬಳಸಿಕೊಂಡು ಬಿಸಿಲು ಸೈಕಲ್​ಗೆ ತಾಗದಂತೆ ಮಾಡಿದ್ದಾರೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಸುಡುವ ಬಿಸಿಲಿನಲ್ಲಿ ವಯಸ್ಸಾದ ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಸೈಕಲ್ ತುಳಿಯುವುದನ್ನು ನಾವು ನೋಡಬಹುದು.

ಸದ್ಯ ಬಿರು ಬಿಸಿಲಿನಲ್ಲಿ ಸೈಕಲ್ ತುಳಿಯುವುದೇ ಸುಸ್ತು, ಅಂತಹ ಪರಿಸ್ಥಿತಿಯಲ್ಲಿ, ವ್ಯಕ್ತಿಯು ಆ ಸೈಕಲ್​ ಸುತ್ತಲೂ ಮರದ ಚೌಕಟ್ಟನ್ನು ನಿರ್ಮಿಸಿದ್ದಾರೆ, ಅದರ ಅಡಿಯಲ್ಲಿ ಸಣ್ಣ ಟೈರ್​ಗಳನ್ನು ಅಳವಡಿಸಲಾಗಿದೆ. ಇದರಿಂದ ವ್ಯಕ್ತಿಗೆ ಸೈಕಲ್ ಸವಾರಿ ಮಾಡುವಾಗ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ.

ಮತ್ತಷ್ಟು ಓದಿ: Viral Video: ಎಲ್ಲಿಂದ ಬಂದರೋ ಎಲ್ಲಿಗೆ ಹೊರಟಿರುವರೋ ಈ ಅಜ್ಜಿ; ನಿಮಗೇನಾದರೂ ಗೊತ್ತೆ?

ಆ ಮರದ ಚೌಕಟ್ಟಿಗೆ ಬಟ್ಟೆಯನ್ನು ಹಾಕಿದ್ದಾರೆ, ಇದು ನಡೆಯುವಾಗ ಸೂರ್ಯನ ಶಾಖದಿಂದ ಪರಿಹಾರ ನೀಡುತ್ತದೆ. ಇದೇ ಕಾರಣಕ್ಕೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ, ಇಲ್ಲಿಯವರೆಗೂ 31 ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳು ಬಂದಿದ್ದು, 2.2 ಮಿಲಿಯನ್ ಮಂದಿ ವೀಕ್ಷಿಸಿದ್ದಾರೆ. ಕಷ್ಟ ಬಂದಾಗ ಆ ದಾರಿಯೇ ಸರಿ ಇಲ್ಲ ಎಂದು ಬಿಡುವುದಲ್ಲ, ಕಷ್ಟವನ್ನು ಮೆಟ್ಟಿ ಮುಂದೆ ಸಾಗಬೇಕು, ಆಲೋಚಿಸಿದರೆ ಏನಾದರೂ ಮಾರ್ಗ ಸಿಗುವುದು ಎಂಬುದು ಸಾಬೀತಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು