Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೈಕಲ್​ಗೆ ಬಿಸಿಲು ಬೀಳದಂತೆ ತಡೆಯಲು ಅಜ್ಜ ಮಾಡಿದ ಉಪಾಯ ನೋಡಿ, ಓಡಿಸುವುದೂ ನಿಲ್ಲಿಲ್ಲ, ಬಿಸಿಲ ಬೇಗೆಯೂ ಇಲ್ಲ

ನಿತ್ಯ ದುಡಿದರೇ ಅನ್ನ, ಒಂದು ಹೊತ್ತು ಕೆಲಸ ಬಿಟ್ಟರೂ ಅಂದು ಉಪವಾಸವೆಂಬ ಪರಿಸ್ಥಿತಿ. ಹೀಗಿರುವಾಗ ಸೈಕಲ್​ನಲ್ಲಿ ಅದೂ ಇಳಿ ವಯಸ್ಸಿನಲ್ಲಿ ಸೈಕಲ್ ಏರಿ ಹೋಗುವಷ್ಟು ಶಕ್ತಿಯೂ ಇಲ್ಲ, ಹೀಗಾಗಿ ಈ ಅಜ್ಜ ಒಂದು ಅದ್ಭುತ ಉಪಾಯ ಮಾಡಿದ್ದಾರೆ.

Viral Video: ಸೈಕಲ್​ಗೆ ಬಿಸಿಲು ಬೀಳದಂತೆ ತಡೆಯಲು ಅಜ್ಜ ಮಾಡಿದ ಉಪಾಯ ನೋಡಿ, ಓಡಿಸುವುದೂ ನಿಲ್ಲಿಲ್ಲ, ಬಿಸಿಲ ಬೇಗೆಯೂ ಇಲ್ಲ
ಸೈಕಲ್Image Credit source: ABP Live
Follow us
ನಯನಾ ರಾಜೀವ್
|

Updated on: May 25, 2023 | 2:40 PM

ನಿತ್ಯ ದುಡಿದರೇ ಅನ್ನ, ಒಂದು ಹೊತ್ತು ಕೆಲಸ ಬಿಟ್ಟರೂ ಅಂದು ಉಪವಾಸವೆಂಬ ಪರಿಸ್ಥಿತಿ. ಹೀಗಿರುವಾಗ ಬಿಸಿಲಲ್ಲಿ ಅದೂ ಇಳಿ ವಯಸ್ಸಿನಲ್ಲಿ ಸೈಕಲ್ ಏರಿ ಹೋಗುವಷ್ಟು ಶಕ್ತಿಯೂ ಇಲ್ಲ, ಹೀಗಾಗಿ ಈ ಅಜ್ಜ ಒಂದು ಅದ್ಭುತ ಉಪಾಯ ಮಾಡಿದ್ದಾರೆ. ಜನರು ಈ ಬಿಸಿಲಿನಲ್ಲಿ ಕಾರಿನಲ್ಲಿ ಓಡಾಡಲೂ ಹಿಂಜರಿಯುತ್ತಿರುವ ಈ ಸಂದರ್ಭದಲ್ಲಿ ಈ ಅಜ್ಜ ತುಂಬಾ ತಲೆ ಖರ್ಚು ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನು ಸಾಮಾನ್ಯರು ಊಹಿಸಲೂ ಅಸಾಧ್ಯ, ಕೆಲವು ಮರದ ಕಂಬಗಳನ್ನು ಬಳಸಿಕೊಂಡು ಬಿಸಿಲು ಸೈಕಲ್​ಗೆ ತಾಗದಂತೆ ಮಾಡಿದ್ದಾರೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಸುಡುವ ಬಿಸಿಲಿನಲ್ಲಿ ವಯಸ್ಸಾದ ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಸೈಕಲ್ ತುಳಿಯುವುದನ್ನು ನಾವು ನೋಡಬಹುದು.

ಸದ್ಯ ಬಿರು ಬಿಸಿಲಿನಲ್ಲಿ ಸೈಕಲ್ ತುಳಿಯುವುದೇ ಸುಸ್ತು, ಅಂತಹ ಪರಿಸ್ಥಿತಿಯಲ್ಲಿ, ವ್ಯಕ್ತಿಯು ಆ ಸೈಕಲ್​ ಸುತ್ತಲೂ ಮರದ ಚೌಕಟ್ಟನ್ನು ನಿರ್ಮಿಸಿದ್ದಾರೆ, ಅದರ ಅಡಿಯಲ್ಲಿ ಸಣ್ಣ ಟೈರ್​ಗಳನ್ನು ಅಳವಡಿಸಲಾಗಿದೆ. ಇದರಿಂದ ವ್ಯಕ್ತಿಗೆ ಸೈಕಲ್ ಸವಾರಿ ಮಾಡುವಾಗ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ.

ಮತ್ತಷ್ಟು ಓದಿ: Viral Video: ಎಲ್ಲಿಂದ ಬಂದರೋ ಎಲ್ಲಿಗೆ ಹೊರಟಿರುವರೋ ಈ ಅಜ್ಜಿ; ನಿಮಗೇನಾದರೂ ಗೊತ್ತೆ?

ಆ ಮರದ ಚೌಕಟ್ಟಿಗೆ ಬಟ್ಟೆಯನ್ನು ಹಾಕಿದ್ದಾರೆ, ಇದು ನಡೆಯುವಾಗ ಸೂರ್ಯನ ಶಾಖದಿಂದ ಪರಿಹಾರ ನೀಡುತ್ತದೆ. ಇದೇ ಕಾರಣಕ್ಕೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ, ಇಲ್ಲಿಯವರೆಗೂ 31 ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳು ಬಂದಿದ್ದು, 2.2 ಮಿಲಿಯನ್ ಮಂದಿ ವೀಕ್ಷಿಸಿದ್ದಾರೆ. ಕಷ್ಟ ಬಂದಾಗ ಆ ದಾರಿಯೇ ಸರಿ ಇಲ್ಲ ಎಂದು ಬಿಡುವುದಲ್ಲ, ಕಷ್ಟವನ್ನು ಮೆಟ್ಟಿ ಮುಂದೆ ಸಾಗಬೇಕು, ಆಲೋಚಿಸಿದರೆ ಏನಾದರೂ ಮಾರ್ಗ ಸಿಗುವುದು ಎಂಬುದು ಸಾಬೀತಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ