AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೈಕಲ್​ಗೆ ಬಿಸಿಲು ಬೀಳದಂತೆ ತಡೆಯಲು ಅಜ್ಜ ಮಾಡಿದ ಉಪಾಯ ನೋಡಿ, ಓಡಿಸುವುದೂ ನಿಲ್ಲಿಲ್ಲ, ಬಿಸಿಲ ಬೇಗೆಯೂ ಇಲ್ಲ

ನಿತ್ಯ ದುಡಿದರೇ ಅನ್ನ, ಒಂದು ಹೊತ್ತು ಕೆಲಸ ಬಿಟ್ಟರೂ ಅಂದು ಉಪವಾಸವೆಂಬ ಪರಿಸ್ಥಿತಿ. ಹೀಗಿರುವಾಗ ಸೈಕಲ್​ನಲ್ಲಿ ಅದೂ ಇಳಿ ವಯಸ್ಸಿನಲ್ಲಿ ಸೈಕಲ್ ಏರಿ ಹೋಗುವಷ್ಟು ಶಕ್ತಿಯೂ ಇಲ್ಲ, ಹೀಗಾಗಿ ಈ ಅಜ್ಜ ಒಂದು ಅದ್ಭುತ ಉಪಾಯ ಮಾಡಿದ್ದಾರೆ.

Viral Video: ಸೈಕಲ್​ಗೆ ಬಿಸಿಲು ಬೀಳದಂತೆ ತಡೆಯಲು ಅಜ್ಜ ಮಾಡಿದ ಉಪಾಯ ನೋಡಿ, ಓಡಿಸುವುದೂ ನಿಲ್ಲಿಲ್ಲ, ಬಿಸಿಲ ಬೇಗೆಯೂ ಇಲ್ಲ
ಸೈಕಲ್Image Credit source: ABP Live
ನಯನಾ ರಾಜೀವ್
|

Updated on: May 25, 2023 | 2:40 PM

Share

ನಿತ್ಯ ದುಡಿದರೇ ಅನ್ನ, ಒಂದು ಹೊತ್ತು ಕೆಲಸ ಬಿಟ್ಟರೂ ಅಂದು ಉಪವಾಸವೆಂಬ ಪರಿಸ್ಥಿತಿ. ಹೀಗಿರುವಾಗ ಬಿಸಿಲಲ್ಲಿ ಅದೂ ಇಳಿ ವಯಸ್ಸಿನಲ್ಲಿ ಸೈಕಲ್ ಏರಿ ಹೋಗುವಷ್ಟು ಶಕ್ತಿಯೂ ಇಲ್ಲ, ಹೀಗಾಗಿ ಈ ಅಜ್ಜ ಒಂದು ಅದ್ಭುತ ಉಪಾಯ ಮಾಡಿದ್ದಾರೆ. ಜನರು ಈ ಬಿಸಿಲಿನಲ್ಲಿ ಕಾರಿನಲ್ಲಿ ಓಡಾಡಲೂ ಹಿಂಜರಿಯುತ್ತಿರುವ ಈ ಸಂದರ್ಭದಲ್ಲಿ ಈ ಅಜ್ಜ ತುಂಬಾ ತಲೆ ಖರ್ಚು ಮಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನು ಸಾಮಾನ್ಯರು ಊಹಿಸಲೂ ಅಸಾಧ್ಯ, ಕೆಲವು ಮರದ ಕಂಬಗಳನ್ನು ಬಳಸಿಕೊಂಡು ಬಿಸಿಲು ಸೈಕಲ್​ಗೆ ತಾಗದಂತೆ ಮಾಡಿದ್ದಾರೆ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಸುಡುವ ಬಿಸಿಲಿನಲ್ಲಿ ವಯಸ್ಸಾದ ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಸೈಕಲ್ ತುಳಿಯುವುದನ್ನು ನಾವು ನೋಡಬಹುದು.

ಸದ್ಯ ಬಿರು ಬಿಸಿಲಿನಲ್ಲಿ ಸೈಕಲ್ ತುಳಿಯುವುದೇ ಸುಸ್ತು, ಅಂತಹ ಪರಿಸ್ಥಿತಿಯಲ್ಲಿ, ವ್ಯಕ್ತಿಯು ಆ ಸೈಕಲ್​ ಸುತ್ತಲೂ ಮರದ ಚೌಕಟ್ಟನ್ನು ನಿರ್ಮಿಸಿದ್ದಾರೆ, ಅದರ ಅಡಿಯಲ್ಲಿ ಸಣ್ಣ ಟೈರ್​ಗಳನ್ನು ಅಳವಡಿಸಲಾಗಿದೆ. ಇದರಿಂದ ವ್ಯಕ್ತಿಗೆ ಸೈಕಲ್ ಸವಾರಿ ಮಾಡುವಾಗ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ.

ಮತ್ತಷ್ಟು ಓದಿ: Viral Video: ಎಲ್ಲಿಂದ ಬಂದರೋ ಎಲ್ಲಿಗೆ ಹೊರಟಿರುವರೋ ಈ ಅಜ್ಜಿ; ನಿಮಗೇನಾದರೂ ಗೊತ್ತೆ?

ಆ ಮರದ ಚೌಕಟ್ಟಿಗೆ ಬಟ್ಟೆಯನ್ನು ಹಾಕಿದ್ದಾರೆ, ಇದು ನಡೆಯುವಾಗ ಸೂರ್ಯನ ಶಾಖದಿಂದ ಪರಿಹಾರ ನೀಡುತ್ತದೆ. ಇದೇ ಕಾರಣಕ್ಕೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ, ಇಲ್ಲಿಯವರೆಗೂ 31 ಸಾವಿರಕ್ಕೂ ಹೆಚ್ಚು ಲೈಕ್ಸ್​ಗಳು ಬಂದಿದ್ದು, 2.2 ಮಿಲಿಯನ್ ಮಂದಿ ವೀಕ್ಷಿಸಿದ್ದಾರೆ. ಕಷ್ಟ ಬಂದಾಗ ಆ ದಾರಿಯೇ ಸರಿ ಇಲ್ಲ ಎಂದು ಬಿಡುವುದಲ್ಲ, ಕಷ್ಟವನ್ನು ಮೆಟ್ಟಿ ಮುಂದೆ ಸಾಗಬೇಕು, ಆಲೋಚಿಸಿದರೆ ಏನಾದರೂ ಮಾರ್ಗ ಸಿಗುವುದು ಎಂಬುದು ಸಾಬೀತಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು