AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆ ದಾಟುವ ಹುಲಿಗಳ ಹಿಂಡಿನ ಅಪರೂಪದ ದೃಶ್ಯಾವಳಿ ಸೆರೆ ಹಿಡಿದ ಪ್ರವಾಸಿಗರು

ಆರು ಹುಲಿಗಳಿರುವ ಗುಂಪೊಂದು ಮಣ್ಣಿನ ರಸ್ತೆ ದಾಟುವ ಅಪರೂಪದ ದೃಶ್ಯಾವಳಿಯನ್ನು ಪ್ರವಾಸಿಗರು ಸೆರೆಹಿಡಿದಿದ್ದಾರೆ. ಇದರ ವಿಡಿಯೋವನ್ನು ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಸಂತ ನಂದಾ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

Viral Video: ರಸ್ತೆ ದಾಟುವ ಹುಲಿಗಳ ಹಿಂಡಿನ ಅಪರೂಪದ ದೃಶ್ಯಾವಳಿ ಸೆರೆ ಹಿಡಿದ ಪ್ರವಾಸಿಗರು
ರಸ್ತೆ ದಾಟುತ್ತಿರುವ ಹುಲಿಗಳು
Follow us
TV9 Web
| Updated By: Rakesh Nayak Manchi

Updated on: Jun 13, 2022 | 2:39 PM

ಹುಲಿಗಳು (Tigers) ಕಾಣಸಿಗುವುದು ತೀರ ಅಪರೂಪ (Rare). ಮೃಗಾಲಯಗಳಲ್ಲಿ ಒಂದೋ ಎರಡೋ ಸಂಖ್ಯೆಯಲ್ಲಿ ಇರುತ್ತದೆ. ಆದಾಗ್ಯೂ ಬೆರಳೆಣಿಕೆಯ ಹುಲಿಗಳು ಹಳ್ಳಿಗಳಿಗೆ ನುಗ್ಗಿದ ಸುದ್ದಿಗಳನ್ನು ನೋಡುತ್ತೇವೆ. ಆದರೆ ಯಾವತ್ತಾದರೂ ನೀವು ಹುಲಿಗಳು ಗುಂಪಾಗಿ ಹೋಗುವುದನ್ನು ಕಂಡಿದ್ದೀರಾ? ತೀರ ಅಪರೂಪದ ಇಂಥ ದೃಶ್ಯಾವಳಿಯನ್ನು ಪ್ರವಾಸಿಗರು ಕ್ಯಾಮರಾ ಮೂಲಕ ಸೆರೆಹಿಡಿದಿದ್ದು, ವಿಡಿಯೋ (Video) ವೀಕ್ಷಿಸಿದರೆ ಅಚ್ಚರಿ ಉಂಟಾಗುತ್ತದೆ.

ಇದನ್ನೂ ಓದಿ: Viral Video: ರಸ್ತೆ ಮಧ್ಯೆ ವಾಹನಕ್ಕೆ ಅಡ್ಡ ಹಾಕಿ, ಆಹಾರಕ್ಕಾಗಿ ಹುಡುಕಾಡಿದ ಆನೆ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಹುಲಿಯ ಹಿಂಡಿನ ವಿಡಿಯೋ ಎಲ್ಲಿ ಸೆರೆಹಿಡಿದಿರುವುದು ಮತ್ತು ಯಾವಾಗ ಸೆರೆ ಹಿಡಿಯಲಾಗಿದೆ ಎಂದು ಸ್ಪಷ್ಟವಾಗಿಲ್ಲ. ಆದರೆ ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಸಂತ ನಂದಾ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಂಚಿಕೊಂಡಿದ್ದಾರೆ. ಇವರು ನೈಸರ್ಗಿಕ ಆವಾಸಸ್ಥಾನದಲ್ಲಿ ಪ್ರಾಣಿಗಳನ್ನು ತೋರಿಸುವ ವಿಡಿಯೋಗಳನ್ನು ಆಗ್ಗಾಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಚಿರಪರಿಚಿತರಾಗಿದ್ದಾರೆ.

ವಿಡಿಯೋವನ್ನು ಗಮನಿಸಿದಂತೆ, ಪ್ರವಾಸಿಗರು ಎರಡ್ಮೂರು ಜೀಪ್​ಗಳಲ್ಲಿ ಕ್ಯಾಮಾರಾಗಳನ್ನು ಹಿಡಿದುಕೊಂಡು ದೃಶ್ಯಾವಳಿಗಳನ್ನು ಸೆರೆಹಿಡಿಯುವುದುನ್ನು ಕಾಣಬಹುದು. ಅದಾಗ್ಯೂ ಓಕಕಾಲದಲ್ಲಿ ಐದಾರು ಹುಲಿಗಳು ಮಣ್ಣಿನ ರಸ್ತೆ ದಾಟಿ ಮತ್ತೊಂದು ಪ್ರದೇಶಕ್ಕೆ ಹೋಗಿವೆ. ಇದೇ ವೇಳೆ ಹುಲಿಯೊಂದು ವಿಡಿಯೋ ಮಾಡುತ್ತಿದ್ದ ಪ್ರವಾಸಿಗರ ಜೀಪ್​ವೊಂದರ ಪಕ್ಕಕ್ಕೆ ಬಂದು ಮರಳಿ ಹೋಗುವುದನ್ನು ಕಾಣಬಹುದು.

ಇದನ್ನೂ ಓದಿ: Viral: ಸಾರ್ವಜನಿಕವಾಗಿ ಕಾಣಿಸಿಕೊಂಡ ಅಪರೂಪದ ಅಲ್ಬಿನೋ ಗ್ಯಾಲಪಗೋಸ್ ದೈತ್ಯ ಆಮೆ

ವಿಡಿಯೋ ಹಂಚಿಕೊಳ್ಳುವಾಗ ಸುಸಂತ ನಂದಾ ಅವರು, ”ನೀವು ಹುಲಿ ಹಿಂಡನ್ನು ನೋಡಿಲ್ಲದಿದ್ದರೆ, ಅದು ಇಲ್ಲಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಹುಲಿಯ ಹಿಂಡು ಸಾಮಾನ್ಯವಾಗಿ 2 ರಿಂದ 4 ಮಾತ್ರ ಒಳಗೊಂಡಿರುತ್ತದೆ. ಐದು ಅಸಾಮಾನ್ಯ ಮತ್ತು ಎಲ್ಲಾ ಮರಿಗಳ ಬದುಕುಳಿಯುವಿಕೆಯು ಅಪರೂಪ. ಆವಾಸಸ್ಥಾನದಲ್ಲಿ ಬೇಟೆಯಾಡುವ ಪ್ರಾಣಿಗಳ ಹೆಚ್ಚಿನ ಸಾಂದ್ರತೆ ಮತ್ತು ಅದರ ಮೇಲೆ ಕಡಿಮೆ ಮಾನವ ಪ್ರಭಾವವನ್ನು ಇದು ಸೂಚಿಸುತ್ತದೆ” ಎಂದು ಬರೆದುಕೊಂಡಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ