AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆ ದಾಟುವ ಹುಲಿಗಳ ಹಿಂಡಿನ ಅಪರೂಪದ ದೃಶ್ಯಾವಳಿ ಸೆರೆ ಹಿಡಿದ ಪ್ರವಾಸಿಗರು

ಆರು ಹುಲಿಗಳಿರುವ ಗುಂಪೊಂದು ಮಣ್ಣಿನ ರಸ್ತೆ ದಾಟುವ ಅಪರೂಪದ ದೃಶ್ಯಾವಳಿಯನ್ನು ಪ್ರವಾಸಿಗರು ಸೆರೆಹಿಡಿದಿದ್ದಾರೆ. ಇದರ ವಿಡಿಯೋವನ್ನು ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಸಂತ ನಂದಾ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

Viral Video: ರಸ್ತೆ ದಾಟುವ ಹುಲಿಗಳ ಹಿಂಡಿನ ಅಪರೂಪದ ದೃಶ್ಯಾವಳಿ ಸೆರೆ ಹಿಡಿದ ಪ್ರವಾಸಿಗರು
ರಸ್ತೆ ದಾಟುತ್ತಿರುವ ಹುಲಿಗಳು
TV9 Web
| Edited By: Rakesh Nayak Manchi|

Updated on: Jun 13, 2022 | 2:39 PM

Share

ಹುಲಿಗಳು (Tigers) ಕಾಣಸಿಗುವುದು ತೀರ ಅಪರೂಪ (Rare). ಮೃಗಾಲಯಗಳಲ್ಲಿ ಒಂದೋ ಎರಡೋ ಸಂಖ್ಯೆಯಲ್ಲಿ ಇರುತ್ತದೆ. ಆದಾಗ್ಯೂ ಬೆರಳೆಣಿಕೆಯ ಹುಲಿಗಳು ಹಳ್ಳಿಗಳಿಗೆ ನುಗ್ಗಿದ ಸುದ್ದಿಗಳನ್ನು ನೋಡುತ್ತೇವೆ. ಆದರೆ ಯಾವತ್ತಾದರೂ ನೀವು ಹುಲಿಗಳು ಗುಂಪಾಗಿ ಹೋಗುವುದನ್ನು ಕಂಡಿದ್ದೀರಾ? ತೀರ ಅಪರೂಪದ ಇಂಥ ದೃಶ್ಯಾವಳಿಯನ್ನು ಪ್ರವಾಸಿಗರು ಕ್ಯಾಮರಾ ಮೂಲಕ ಸೆರೆಹಿಡಿದಿದ್ದು, ವಿಡಿಯೋ (Video) ವೀಕ್ಷಿಸಿದರೆ ಅಚ್ಚರಿ ಉಂಟಾಗುತ್ತದೆ.

ಇದನ್ನೂ ಓದಿ: Viral Video: ರಸ್ತೆ ಮಧ್ಯೆ ವಾಹನಕ್ಕೆ ಅಡ್ಡ ಹಾಕಿ, ಆಹಾರಕ್ಕಾಗಿ ಹುಡುಕಾಡಿದ ಆನೆ; ವಿಡಿಯೋ ವೈರಲ್

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಹುಲಿಯ ಹಿಂಡಿನ ವಿಡಿಯೋ ಎಲ್ಲಿ ಸೆರೆಹಿಡಿದಿರುವುದು ಮತ್ತು ಯಾವಾಗ ಸೆರೆ ಹಿಡಿಯಲಾಗಿದೆ ಎಂದು ಸ್ಪಷ್ಟವಾಗಿಲ್ಲ. ಆದರೆ ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಸಂತ ನಂದಾ ಅವರು ತಮ್ಮ ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಂಚಿಕೊಂಡಿದ್ದಾರೆ. ಇವರು ನೈಸರ್ಗಿಕ ಆವಾಸಸ್ಥಾನದಲ್ಲಿ ಪ್ರಾಣಿಗಳನ್ನು ತೋರಿಸುವ ವಿಡಿಯೋಗಳನ್ನು ಆಗ್ಗಾಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಚಿರಪರಿಚಿತರಾಗಿದ್ದಾರೆ.

ವಿಡಿಯೋವನ್ನು ಗಮನಿಸಿದಂತೆ, ಪ್ರವಾಸಿಗರು ಎರಡ್ಮೂರು ಜೀಪ್​ಗಳಲ್ಲಿ ಕ್ಯಾಮಾರಾಗಳನ್ನು ಹಿಡಿದುಕೊಂಡು ದೃಶ್ಯಾವಳಿಗಳನ್ನು ಸೆರೆಹಿಡಿಯುವುದುನ್ನು ಕಾಣಬಹುದು. ಅದಾಗ್ಯೂ ಓಕಕಾಲದಲ್ಲಿ ಐದಾರು ಹುಲಿಗಳು ಮಣ್ಣಿನ ರಸ್ತೆ ದಾಟಿ ಮತ್ತೊಂದು ಪ್ರದೇಶಕ್ಕೆ ಹೋಗಿವೆ. ಇದೇ ವೇಳೆ ಹುಲಿಯೊಂದು ವಿಡಿಯೋ ಮಾಡುತ್ತಿದ್ದ ಪ್ರವಾಸಿಗರ ಜೀಪ್​ವೊಂದರ ಪಕ್ಕಕ್ಕೆ ಬಂದು ಮರಳಿ ಹೋಗುವುದನ್ನು ಕಾಣಬಹುದು.

ಇದನ್ನೂ ಓದಿ: Viral: ಸಾರ್ವಜನಿಕವಾಗಿ ಕಾಣಿಸಿಕೊಂಡ ಅಪರೂಪದ ಅಲ್ಬಿನೋ ಗ್ಯಾಲಪಗೋಸ್ ದೈತ್ಯ ಆಮೆ

ವಿಡಿಯೋ ಹಂಚಿಕೊಳ್ಳುವಾಗ ಸುಸಂತ ನಂದಾ ಅವರು, ”ನೀವು ಹುಲಿ ಹಿಂಡನ್ನು ನೋಡಿಲ್ಲದಿದ್ದರೆ, ಅದು ಇಲ್ಲಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ, ಹುಲಿಯ ಹಿಂಡು ಸಾಮಾನ್ಯವಾಗಿ 2 ರಿಂದ 4 ಮಾತ್ರ ಒಳಗೊಂಡಿರುತ್ತದೆ. ಐದು ಅಸಾಮಾನ್ಯ ಮತ್ತು ಎಲ್ಲಾ ಮರಿಗಳ ಬದುಕುಳಿಯುವಿಕೆಯು ಅಪರೂಪ. ಆವಾಸಸ್ಥಾನದಲ್ಲಿ ಬೇಟೆಯಾಡುವ ಪ್ರಾಣಿಗಳ ಹೆಚ್ಚಿನ ಸಾಂದ್ರತೆ ಮತ್ತು ಅದರ ಮೇಲೆ ಕಡಿಮೆ ಮಾನವ ಪ್ರಭಾವವನ್ನು ಇದು ಸೂಚಿಸುತ್ತದೆ” ಎಂದು ಬರೆದುಕೊಂಡಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!