AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹಳ್ಳಿಯ ದಾರಿಯಲ್ಲಿ ಬೈಕ್​ನಲ್ಲಿ ಹೋಗುವಾಗ ದಿಢೀರೆಂದು ಎದುರು ಬಂದ ಸಿಂಹಿಣಿ; ಶಾಕಿಂಗ್ ವಿಡಿಯೋ ಇಲ್ಲಿದೆ

Shocking Video: ಅದೃಷ್ಟವಶಾತ್ ಆ ಸಿಂಹಿಣಿ ಬೈಕ್ ಸಮೀಪವೇ ಬಂದರೂ ಆ ಪ್ರಯಾಣಿಕರ ಮೇಲೆ ಯಾವುದೇ ದಾಳಿ ಮಾಡಲಿಲ್ಲ. ಪ್ರಯಾಣಿಕರ ಹತ್ತಿರಕ್ಕೆ ಬಂದ ಆ ಸಿಂಹಿಣಿ ನಂತರ ಪೊದೆಗಳ ಕಡೆಗೆ ಹೋಗುತ್ತದೆ. ನಂತರ ಪೊದೆಗಳ ಹಿಂದೆ ಆ ಸಿಂಹಿಣಿ ಕಣ್ಮರೆಯಾಗುತ್ತದೆ.

Viral Video: ಹಳ್ಳಿಯ ದಾರಿಯಲ್ಲಿ ಬೈಕ್​ನಲ್ಲಿ ಹೋಗುವಾಗ ದಿಢೀರೆಂದು ಎದುರು ಬಂದ ಸಿಂಹಿಣಿ; ಶಾಕಿಂಗ್ ವಿಡಿಯೋ ಇಲ್ಲಿದೆ
ದಾರಿಯಲ್ಲಿ ಎದುರಾದ ಸಿಂಹಿಣಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 16, 2022 | 1:14 PM

ನಗರದ ಜನರಿಗೆ ಹಳ್ಳಿಗಳಲ್ಲಿ ಓಡಾಡುವುದೆಂದರೆ ಒಂಥರಾ ಖುಷಿ, ಹಳ್ಳಿಗಳ ಬಗ್ಗೆ ಕುತೂಹಲ. ಸುತ್ತಲಿನ ಹಸಿರು, ವಿಸ್ತಾರವಾದ ನಿರ್ಮಲ ಆಕಾಶ ಮತ್ತು ತಾಜಾ ಗಾಳಿಯ ಅಲೆಗಳು ಎಂಥವರ ಮನಸನ್ನೂ ಉಲ್ಲಸಿತಗೊಳಿಸುತ್ತವೆ. ಹೀಗೆ ಹಳ್ಳಿಯ ದಟ್ಟ ಕಾಡಿನ ಮಧ್ಯೆ ಹೋಗುತ್ತಿರುವಾಗ ಅಕಸ್ಮಾತ್ ಸಿಂಹ (Lion) ಎದುರು ಬಂದರೆ ಹೇಗಿರುತ್ತದೆ? ಆರಾಮಾಗಿ ಹಳ್ಳಿಯ ವಾತಾವರಣದಲ್ಲಿ ಓಡಾಡಬೇಕು ಎಂದು ಹೋಗಿದ್ದವರಿಗೆ ಎದುರಲ್ಲಿ ಸಿಂಹಿಣಿಯೊಂದು ಎದುರು ಬಂದಿದೆ. ಕಿರಿದಾದ ಹಳ್ಳಿಯ ಹಾದಿಯಲ್ಲಿ ಪ್ರಯಾಣಿಸುವಾಗ ಇಬ್ಬರು ಪ್ರಯಾಣಿಕರಿಗೆ ಸಿಂಹಿಣಿ ಎದುರಾಗಿದೆ.

ವೈರಲ್ ಆಗಿರುವ ಈ ವಿಡಿಯೋವನ್ನು ಐಎಫ್‌ಎಸ್ ಅಧಿಕಾರಿ ಸುಶಾಂತ ನಂದಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಕ್ಲಿಪ್‌ನಲ್ಲಿ ಬೈಕಿನಲ್ಲಿ ಇಬ್ಬರು ಪ್ರಯಾಣಿಕರು ಹಳ್ಳಿಯ ಹಾದಿಯಲ್ಲಿ ಹಾದುಹೋಗುತ್ತಿರುವುದನ್ನು ನೋಡಬಹುದು. ಹಾಗೆ ಹೋಗುತ್ತಿರುವಾಗ ರಸ್ತೆಯಲ್ಲೇ ದೂರದಲ್ಲಿ ಸಿಂಹಿಣಿಯೊಂದು ಚಲಿಸುತ್ತಿರುತ್ತದೆ. ನಂತರ ಆ ಸಿಂಹಿಣಿ ಬೈಕ್‌ನತ್ತ ಬರುತ್ತಿರುವುದನ್ನು ವಿಡಿಯೋದಲ್ಲಿ ರೆಕಾರ್ಡ್​ ಮಾಡಲಾಗಿದೆ. ಈ ಮೈ ಜುಂ ಎನಿಸುವ ವಿಡಿಯೋ ಭಾರೀ ವೈರಲ್ ಆಗಿದೆ.

ಅದೃಷ್ಟವಶಾತ್ ಆ ಸಿಂಹಿಣಿ ಬೈಕ್ ಸಮೀಪವೇ ಬಂದರೂ ಆ ಪ್ರಯಾಣಿಕರ ಮೇಲೆ ಯಾವುದೇ ದಾಳಿ ಮಾಡಲಿಲ್ಲ. ಪ್ರಯಾಣಿಕರ ಹತ್ತಿರಕ್ಕೆ ಬಂದ ಆ ಸಿಂಹಿಣಿ ನಂತರ ಪೊದೆಗಳ ಕಡೆಗೆ ಹೋಗುತ್ತದೆ. ನಂತರ ಪೊದೆಗಳ ಹಿಂದೆ ಆ ಸಿಂಹಿಣಿ ಕಣ್ಮರೆಯಾಗುತ್ತದೆ. ಈ ಘಟನೆ ನಡೆದಿರುವುದು ಗುಜರಾತ್‌ನಲ್ಲಿ. ಈ ವಿಡಿಯೋವನ್ನು 31,000ಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ.

ಈ ವಿಡಿಯೋ ನೋಡಿದವರು ಆ ಇಬ್ಬರು ಪ್ರಯಾಣಿಕರ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಿಂಹ ಹತ್ತಿರದಲ್ಲೇ ಸುಳಿದಾಡುವಾಗ ಹಾಗೆ ನಿಲ್ಲಲು ಸಾಕಷ್ಟು ಧೈರ್ಯ ಬೇಕು ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಹಾಗೇ, ಆ ಸಿಂಹಿಣಿ ಬೈಕ್ ಸವಾರರ ಮೇಲೆ ಏಕೆ ದಾಳಿ ಮಾಡಲಿಲ್ಲ? ಎಂಬ ಕುತೂಹಲವನ್ನೂ ಅನೇಕರು ವ್ಯಕ್ತಪಡಿಸಿದ್ದಾರೆ.

“ಸಿಂಹಗಳು ಪ್ರಚೋದನೆಗೆ ಒಳಗಾಗದ ಹೊರತು ಮನುಷ್ಯರ ಮೇಲೆ ದಾಳಿ ಮಾಡುವುದಿಲ್ಲ” ಎಂದು ಕೆಲವರು ಟ್ವೀಟ್ ಮಾಡಿದ್ದಾರೆ. ಗುಜರಾತ್‌ನ ವಿವಿಧ ಪ್ರದೇಶಗಳಲ್ಲಿ ಸಿಂಹಗಳು ಹೆಚ್ಚಾಗಿವೆ.

ಇದನ್ನೂ ಓದಿ: Shocking News: ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದವರನ್ನು ಕೊಲ್ಲಲು ಗಂಡ ಮಾಡಿದ ಪ್ಲಾನ್ ಅಂತಿಂಥದ್ದಲ್ಲ!

Shocking Video: ಹೋಟೆಲ್ ಊಟದಲ್ಲಿ ಶಿಶ್ನದ ತುಂಡು ಪತ್ತೆ!; ತಿನ್ನೋ ಆಹಾರದಲ್ಲಿ ಗುಪ್ತಾಂಗ ಕಂಡು ಮಹಿಳೆ ಶಾಕ್

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ