AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಿಗ್ನಲ್ ಲೈಟ್​ನಲ್ಲಿ ನಟಿ ಕರೀನಾ ಕಪೂರ್ ವಿಡಿಯೋ, “ನನ್ನನ್ನು ತಿರುಗಿ ನೋಡದವನು ಯಾರು?”; ಮೀಮ್ ವಿಡಿಯೋ ವೈರಲ್

ಸಿಗ್ನಲ್ ಲೈಟ್​ನಲ್ಲಿನ ಕೆಂಪು ದೀಪಕ್ಕೆ ಕರೀನಾ ಕಪೂರ್ ಅವರ ಪೂ ಪಾತ್ರದ ಕ್ಲಿಪ್ ಅನ್ನು ಎಡಿಟ್ ಮಾಡಿದ ಮೀಮ್ ಅನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ದೆಹಲಿ ಪೊಲೀಸರು ವಾಹನ ಸವಾರರಲ್ಲಿ ವಿಶೇಷವಾದ ಜಾಗೃತಿಯನ್ನು ಮೂಡಿಸಿದ್ದಾರೆ. ಆ ಮೀಮ್ ವಿಡಿಯೋ ಇಲ್ಲಿದೆ.

Viral Video: ಸಿಗ್ನಲ್ ಲೈಟ್​ನಲ್ಲಿ ನಟಿ ಕರೀನಾ ಕಪೂರ್ ವಿಡಿಯೋ, ನನ್ನನ್ನು ತಿರುಗಿ ನೋಡದವನು ಯಾರು?; ಮೀಮ್ ವಿಡಿಯೋ ವೈರಲ್
ವೈರಲ್ ಮೀಮ್
TV9 Web
| Edited By: Rakesh Nayak Manchi|

Updated on:Jul 17, 2022 | 11:46 AM

Share

ಸಂಚಾರಿ ನಿಯಮಗಳ ಉಲ್ಲಂಘನೆ ವಿರುದ್ಧ ಪೊಲೀಸರು ಎಷ್ಟೇ ಕ್ರಮ ಕೈಗೊಂಡರೂ, ಎಷ್ಟೇ ಜಾಗೃತಿ ಮೂಡಿಸಿದರೂ ಅಲ್ಲೊಂದು ಇಲ್ಲೊಂದು ನಿಯಮ ಉಲ್ಲಂಘನೆ ನಡೆಯುತ್ತಲೇ ಇರುತ್ತದೆ. ಅದಾಗ್ಯೂ ಪೊಲೀಸರು ವಾಹನ ಸವಾರರನ್ನು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಿನ್ನ ವಿಭಿನ್ನ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಇದೀಗ ದೆಹಲಿ ಪೊಲೀಸ್ ಇಲಾಖೆಯು ಸಿಗ್ನಲ್ ಜಂಪ್ ವಿಚಾರದಲ್ಲಿ ವಾಹನ ಸವಾರರನ್ನು ಜಾಗೃತಿ ಮೂಡಿಸುವ ವಿಶೇಷ ಮೀಮ್ (Meme) ಒಂದನ್ನು ಹಂಚಿಕೊಂಡಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಮೀಮ್ ವಿಡಿಯೋ ವೈರಲ್ (Viral Video) ಆಗುತ್ತಿದೆ. ವಿಡಿಯೋ ನೀಡಲು ಹಾಸ್ಯವಾಗಿದ್ದರೂ ಇದರ ಒಳಾರ್ಥ ಚೆನ್ನಾಗಿದೆ.

ಮೀಮ್ ಮೂಲಕ ದೆಹಲಿ ಪೊಲೀಸರು ಸಂಚಾರ ನಿಯಮಗಳನ್ನು ಅನುಸರಿಸಲು ಮತ್ತು ರಸ್ತೆ ಸುರಕ್ಷತೆಯನ್ನು ಅಭ್ಯಾಸ ಮಾಡಲು ಜನಸಾಮಾನ್ಯರನ್ನು ಒತ್ತಾಯಿಸಿದ್ದಾರೆ. ವೇಗದ ಕಾರಿನೊಂದಿಗೆ ಪ್ರಾರಂಭವಾಗುವ ಮೀಮ್ ವಿಡಿಯೋದಲ್ಲಿ ಕಭಿ ಖುಷಿ ಕಭಿ ಗಮ್ ಚಿತ್ರದಲ್ಲಿ ಕರೀನಾ ಕಪೂರ್ ಅವರ ಪೂ ಎಂಬ ಸಾಂಪ್ರದಾಯಿಕ ಪಾತ್ರದ ಕ್ಲಿಪ್ ಅನ್ನು ಸಿಗ್ನಲ್ ಲೈಟ್ ಕೆಂಪು ದೀಪಕ್ಕೆ ಎಡಿಟ್ ಮಾಡಲಾಗಿದೆ. “ಕೌನ್ ಹೈ ಯೇ, ಜಿಸ್ನೆ ದೋಬಾರಾ ಮುಝೆ ನಹೀ ದೇಖಾ (ಅವನು ಯಾರು, ನನ್ನತ್ತ ತಿರುಗಿ ನೋಡದವನು ಯಾರು?)” ಎಂಬ ಪ್ರಸಿದ್ಧ ಡೈಲಾಗ್ ಅನ್ನು ಕರೀನಾ ಹೇಳುವುದನ್ನು ಕೇಳಿಸಬಹುದು.

ಈ ವಿಡಿಯೋವನ್ನು ದೆಹಲಿ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಆ ಸಂಚಾರ ನಿಯಮ ಉಲ್ಲಂಘಿಸುವವರು ಯಾರು? ಪೂ ನೋಡುವುದನ್ನು ಇಷ್ಟಪಡುತ್ತಾರೆ, ಆದ್ದರಿಂದ ನೀವು ಟ್ರಾಫಿಕ್ ದೀಪಗಳನ್ನು ನೋಡಿ” ಎಂದು ಶೀರ್ಷಿಕೆ ಬರೆದಿದ್ದಾರೆ. ಮೀಮ್ ನೋಡಿದ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಇದಕ್ಕೂ ಮೊದಲು, ಮೇ ತಿಂಗಳಲ್ಲಿ ಹ್ಯಾರಿ ಪಾಟರ್ ಡೇ ಸಂದರ್ಭದಲ್ಲಿ ದೆಹಲಿ ಪೊಲೀಸರು ಕೋವಿಡ್-19 ಪ್ರೋಟೋಕಾಲ್‌ಗಳನ್ನು ಅನುಸರಿಸಲು ಜನರನ್ನು ಪ್ರೇರೇಪಿಸುವ ಸಲುವಾಗಿ JK ರೌಲಿಂಗ್ ಅವರ ಫ್ಯಾಂಟಸಿ ಸರಣಿಯ ಪಾತ್ರಗಳನ್ನು ಒಳಗೊಂಡ ಒಂದು ಮೀಮ್​ ಹಂಚಿಕೊಂಡಿದ್ದರು.

Published On - 11:44 am, Sun, 17 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ