AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಿಗ್ನಲ್ ಲೈಟ್​ನಲ್ಲಿ ನಟಿ ಕರೀನಾ ಕಪೂರ್ ವಿಡಿಯೋ, “ನನ್ನನ್ನು ತಿರುಗಿ ನೋಡದವನು ಯಾರು?”; ಮೀಮ್ ವಿಡಿಯೋ ವೈರಲ್

ಸಿಗ್ನಲ್ ಲೈಟ್​ನಲ್ಲಿನ ಕೆಂಪು ದೀಪಕ್ಕೆ ಕರೀನಾ ಕಪೂರ್ ಅವರ ಪೂ ಪಾತ್ರದ ಕ್ಲಿಪ್ ಅನ್ನು ಎಡಿಟ್ ಮಾಡಿದ ಮೀಮ್ ಅನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ದೆಹಲಿ ಪೊಲೀಸರು ವಾಹನ ಸವಾರರಲ್ಲಿ ವಿಶೇಷವಾದ ಜಾಗೃತಿಯನ್ನು ಮೂಡಿಸಿದ್ದಾರೆ. ಆ ಮೀಮ್ ವಿಡಿಯೋ ಇಲ್ಲಿದೆ.

Viral Video: ಸಿಗ್ನಲ್ ಲೈಟ್​ನಲ್ಲಿ ನಟಿ ಕರೀನಾ ಕಪೂರ್ ವಿಡಿಯೋ, ನನ್ನನ್ನು ತಿರುಗಿ ನೋಡದವನು ಯಾರು?; ಮೀಮ್ ವಿಡಿಯೋ ವೈರಲ್
ವೈರಲ್ ಮೀಮ್
TV9 Web
| Edited By: Rakesh Nayak Manchi|

Updated on:Jul 17, 2022 | 11:46 AM

Share

ಸಂಚಾರಿ ನಿಯಮಗಳ ಉಲ್ಲಂಘನೆ ವಿರುದ್ಧ ಪೊಲೀಸರು ಎಷ್ಟೇ ಕ್ರಮ ಕೈಗೊಂಡರೂ, ಎಷ್ಟೇ ಜಾಗೃತಿ ಮೂಡಿಸಿದರೂ ಅಲ್ಲೊಂದು ಇಲ್ಲೊಂದು ನಿಯಮ ಉಲ್ಲಂಘನೆ ನಡೆಯುತ್ತಲೇ ಇರುತ್ತದೆ. ಅದಾಗ್ಯೂ ಪೊಲೀಸರು ವಾಹನ ಸವಾರರನ್ನು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಿನ್ನ ವಿಭಿನ್ನ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಇದೀಗ ದೆಹಲಿ ಪೊಲೀಸ್ ಇಲಾಖೆಯು ಸಿಗ್ನಲ್ ಜಂಪ್ ವಿಚಾರದಲ್ಲಿ ವಾಹನ ಸವಾರರನ್ನು ಜಾಗೃತಿ ಮೂಡಿಸುವ ವಿಶೇಷ ಮೀಮ್ (Meme) ಒಂದನ್ನು ಹಂಚಿಕೊಂಡಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಮೀಮ್ ವಿಡಿಯೋ ವೈರಲ್ (Viral Video) ಆಗುತ್ತಿದೆ. ವಿಡಿಯೋ ನೀಡಲು ಹಾಸ್ಯವಾಗಿದ್ದರೂ ಇದರ ಒಳಾರ್ಥ ಚೆನ್ನಾಗಿದೆ.

ಮೀಮ್ ಮೂಲಕ ದೆಹಲಿ ಪೊಲೀಸರು ಸಂಚಾರ ನಿಯಮಗಳನ್ನು ಅನುಸರಿಸಲು ಮತ್ತು ರಸ್ತೆ ಸುರಕ್ಷತೆಯನ್ನು ಅಭ್ಯಾಸ ಮಾಡಲು ಜನಸಾಮಾನ್ಯರನ್ನು ಒತ್ತಾಯಿಸಿದ್ದಾರೆ. ವೇಗದ ಕಾರಿನೊಂದಿಗೆ ಪ್ರಾರಂಭವಾಗುವ ಮೀಮ್ ವಿಡಿಯೋದಲ್ಲಿ ಕಭಿ ಖುಷಿ ಕಭಿ ಗಮ್ ಚಿತ್ರದಲ್ಲಿ ಕರೀನಾ ಕಪೂರ್ ಅವರ ಪೂ ಎಂಬ ಸಾಂಪ್ರದಾಯಿಕ ಪಾತ್ರದ ಕ್ಲಿಪ್ ಅನ್ನು ಸಿಗ್ನಲ್ ಲೈಟ್ ಕೆಂಪು ದೀಪಕ್ಕೆ ಎಡಿಟ್ ಮಾಡಲಾಗಿದೆ. “ಕೌನ್ ಹೈ ಯೇ, ಜಿಸ್ನೆ ದೋಬಾರಾ ಮುಝೆ ನಹೀ ದೇಖಾ (ಅವನು ಯಾರು, ನನ್ನತ್ತ ತಿರುಗಿ ನೋಡದವನು ಯಾರು?)” ಎಂಬ ಪ್ರಸಿದ್ಧ ಡೈಲಾಗ್ ಅನ್ನು ಕರೀನಾ ಹೇಳುವುದನ್ನು ಕೇಳಿಸಬಹುದು.

ಈ ವಿಡಿಯೋವನ್ನು ದೆಹಲಿ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಆ ಸಂಚಾರ ನಿಯಮ ಉಲ್ಲಂಘಿಸುವವರು ಯಾರು? ಪೂ ನೋಡುವುದನ್ನು ಇಷ್ಟಪಡುತ್ತಾರೆ, ಆದ್ದರಿಂದ ನೀವು ಟ್ರಾಫಿಕ್ ದೀಪಗಳನ್ನು ನೋಡಿ” ಎಂದು ಶೀರ್ಷಿಕೆ ಬರೆದಿದ್ದಾರೆ. ಮೀಮ್ ನೋಡಿದ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಇದಕ್ಕೂ ಮೊದಲು, ಮೇ ತಿಂಗಳಲ್ಲಿ ಹ್ಯಾರಿ ಪಾಟರ್ ಡೇ ಸಂದರ್ಭದಲ್ಲಿ ದೆಹಲಿ ಪೊಲೀಸರು ಕೋವಿಡ್-19 ಪ್ರೋಟೋಕಾಲ್‌ಗಳನ್ನು ಅನುಸರಿಸಲು ಜನರನ್ನು ಪ್ರೇರೇಪಿಸುವ ಸಲುವಾಗಿ JK ರೌಲಿಂಗ್ ಅವರ ಫ್ಯಾಂಟಸಿ ಸರಣಿಯ ಪಾತ್ರಗಳನ್ನು ಒಳಗೊಂಡ ಒಂದು ಮೀಮ್​ ಹಂಚಿಕೊಂಡಿದ್ದರು.

Published On - 11:44 am, Sun, 17 July 22

Follow Us
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ