AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಿಗ್ನಲ್ ಲೈಟ್​ನಲ್ಲಿ ನಟಿ ಕರೀನಾ ಕಪೂರ್ ವಿಡಿಯೋ, “ನನ್ನನ್ನು ತಿರುಗಿ ನೋಡದವನು ಯಾರು?”; ಮೀಮ್ ವಿಡಿಯೋ ವೈರಲ್

ಸಿಗ್ನಲ್ ಲೈಟ್​ನಲ್ಲಿನ ಕೆಂಪು ದೀಪಕ್ಕೆ ಕರೀನಾ ಕಪೂರ್ ಅವರ ಪೂ ಪಾತ್ರದ ಕ್ಲಿಪ್ ಅನ್ನು ಎಡಿಟ್ ಮಾಡಿದ ಮೀಮ್ ಅನ್ನು ಟ್ವಿಟರ್​ನಲ್ಲಿ ಹಂಚಿಕೊಂಡ ದೆಹಲಿ ಪೊಲೀಸರು ವಾಹನ ಸವಾರರಲ್ಲಿ ವಿಶೇಷವಾದ ಜಾಗೃತಿಯನ್ನು ಮೂಡಿಸಿದ್ದಾರೆ. ಆ ಮೀಮ್ ವಿಡಿಯೋ ಇಲ್ಲಿದೆ.

Viral Video: ಸಿಗ್ನಲ್ ಲೈಟ್​ನಲ್ಲಿ ನಟಿ ಕರೀನಾ ಕಪೂರ್ ವಿಡಿಯೋ, ನನ್ನನ್ನು ತಿರುಗಿ ನೋಡದವನು ಯಾರು?; ಮೀಮ್ ವಿಡಿಯೋ ವೈರಲ್
ವೈರಲ್ ಮೀಮ್
Follow us
TV9 Web
| Updated By: Rakesh Nayak Manchi

Updated on:Jul 17, 2022 | 11:46 AM

ಸಂಚಾರಿ ನಿಯಮಗಳ ಉಲ್ಲಂಘನೆ ವಿರುದ್ಧ ಪೊಲೀಸರು ಎಷ್ಟೇ ಕ್ರಮ ಕೈಗೊಂಡರೂ, ಎಷ್ಟೇ ಜಾಗೃತಿ ಮೂಡಿಸಿದರೂ ಅಲ್ಲೊಂದು ಇಲ್ಲೊಂದು ನಿಯಮ ಉಲ್ಲಂಘನೆ ನಡೆಯುತ್ತಲೇ ಇರುತ್ತದೆ. ಅದಾಗ್ಯೂ ಪೊಲೀಸರು ವಾಹನ ಸವಾರರನ್ನು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭಿನ್ನ ವಿಭಿನ್ನ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಇದೀಗ ದೆಹಲಿ ಪೊಲೀಸ್ ಇಲಾಖೆಯು ಸಿಗ್ನಲ್ ಜಂಪ್ ವಿಚಾರದಲ್ಲಿ ವಾಹನ ಸವಾರರನ್ನು ಜಾಗೃತಿ ಮೂಡಿಸುವ ವಿಶೇಷ ಮೀಮ್ (Meme) ಒಂದನ್ನು ಹಂಚಿಕೊಂಡಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ಮೀಮ್ ವಿಡಿಯೋ ವೈರಲ್ (Viral Video) ಆಗುತ್ತಿದೆ. ವಿಡಿಯೋ ನೀಡಲು ಹಾಸ್ಯವಾಗಿದ್ದರೂ ಇದರ ಒಳಾರ್ಥ ಚೆನ್ನಾಗಿದೆ.

ಮೀಮ್ ಮೂಲಕ ದೆಹಲಿ ಪೊಲೀಸರು ಸಂಚಾರ ನಿಯಮಗಳನ್ನು ಅನುಸರಿಸಲು ಮತ್ತು ರಸ್ತೆ ಸುರಕ್ಷತೆಯನ್ನು ಅಭ್ಯಾಸ ಮಾಡಲು ಜನಸಾಮಾನ್ಯರನ್ನು ಒತ್ತಾಯಿಸಿದ್ದಾರೆ. ವೇಗದ ಕಾರಿನೊಂದಿಗೆ ಪ್ರಾರಂಭವಾಗುವ ಮೀಮ್ ವಿಡಿಯೋದಲ್ಲಿ ಕಭಿ ಖುಷಿ ಕಭಿ ಗಮ್ ಚಿತ್ರದಲ್ಲಿ ಕರೀನಾ ಕಪೂರ್ ಅವರ ಪೂ ಎಂಬ ಸಾಂಪ್ರದಾಯಿಕ ಪಾತ್ರದ ಕ್ಲಿಪ್ ಅನ್ನು ಸಿಗ್ನಲ್ ಲೈಟ್ ಕೆಂಪು ದೀಪಕ್ಕೆ ಎಡಿಟ್ ಮಾಡಲಾಗಿದೆ. “ಕೌನ್ ಹೈ ಯೇ, ಜಿಸ್ನೆ ದೋಬಾರಾ ಮುಝೆ ನಹೀ ದೇಖಾ (ಅವನು ಯಾರು, ನನ್ನತ್ತ ತಿರುಗಿ ನೋಡದವನು ಯಾರು?)” ಎಂಬ ಪ್ರಸಿದ್ಧ ಡೈಲಾಗ್ ಅನ್ನು ಕರೀನಾ ಹೇಳುವುದನ್ನು ಕೇಳಿಸಬಹುದು.

ಈ ವಿಡಿಯೋವನ್ನು ದೆಹಲಿ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಆ ಸಂಚಾರ ನಿಯಮ ಉಲ್ಲಂಘಿಸುವವರು ಯಾರು? ಪೂ ನೋಡುವುದನ್ನು ಇಷ್ಟಪಡುತ್ತಾರೆ, ಆದ್ದರಿಂದ ನೀವು ಟ್ರಾಫಿಕ್ ದೀಪಗಳನ್ನು ನೋಡಿ” ಎಂದು ಶೀರ್ಷಿಕೆ ಬರೆದಿದ್ದಾರೆ. ಮೀಮ್ ನೋಡಿದ ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಇದಕ್ಕೂ ಮೊದಲು, ಮೇ ತಿಂಗಳಲ್ಲಿ ಹ್ಯಾರಿ ಪಾಟರ್ ಡೇ ಸಂದರ್ಭದಲ್ಲಿ ದೆಹಲಿ ಪೊಲೀಸರು ಕೋವಿಡ್-19 ಪ್ರೋಟೋಕಾಲ್‌ಗಳನ್ನು ಅನುಸರಿಸಲು ಜನರನ್ನು ಪ್ರೇರೇಪಿಸುವ ಸಲುವಾಗಿ JK ರೌಲಿಂಗ್ ಅವರ ಫ್ಯಾಂಟಸಿ ಸರಣಿಯ ಪಾತ್ರಗಳನ್ನು ಒಳಗೊಂಡ ಒಂದು ಮೀಮ್​ ಹಂಚಿಕೊಂಡಿದ್ದರು.

Published On - 11:44 am, Sun, 17 July 22

ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮ ಬೇಡವೆಂದರೂ ಸಿಎಂ ಒತ್ತಾಯಿಸಿದರು: ಅಶೋಕ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ನಿನ್ನೆ ಗುಡ್ಡ ಕುಸಿದರೂ ಸ್ವಲ್ಪದರಲ್ಲೇ ಅಪಾಯದಿಂದ ಪಾರಾದ ಜನ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಅಪ್ಪನಿಗೇ ಆವಾಜ್ ಹಾಕಿದ ನಯನತಾರಾ ಮಗ; ಇಲ್ಲಿದೆ ಫನ್ನಿ ವಿಡಿಯೋ
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್
ಮಾಧ್ಯಮಗಳ ಜೊತೆ ಮಾತಾಡುವ ಮೊದಲು ಸೈಕ್ಲಿಂಗ್ ಮಾಡಿದ ಶಿವಕುಮಾರ್