AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೈಓವರ್​​ನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ; ಅದನ್ನು ಪೊಲೀಸ್​ ಕಾನ್‌ಸ್ಟೆಬಲ್ ತಡೆದಿದ್ದು ಹೇಗೆ? ನೀವೇ ನೋಡಿ!

ಅಂತಹ ಜೀವನಾಘಾತ ಎದುರಾದಾಗ ವ್ಯಕ್ತಿ ದೌರ್ಬಲ್ಯದಿಂದ ಆತ್ಮಹತ್ಯಗೆ ಎದುರಾಗಿದ್ದು, ಅದನ್ನು ಪೊಲೀಸ್​​ ಸಿಬ್ಬಂದಿಯೊಬ್ಬರು ತಕ್ಷಣವೇ ಚಾಕಚಕ್ಯತೆಯಿಂದ ವರ್ತಿಸಿ, ಆ ಮನುಷ್ಯನನ್ನು ಕಾಪಾಡಿ, ಮರುಜನ್ಮ ನೀಡಿದ್ದಾರೆ.

Follow us
ಸಾಧು ಶ್ರೀನಾಥ್​
|

Updated on:May 24, 2023 | 10:59 AM

ಸಾಮಾನ್ಯವಾಗಿ ಅನೇಕ ಮಂದಿ ಜೀವನದಲ್ಲಿ ಯಾವುದೇ ಅಪಘಾತಗಳು, ಆಘಾತಗಳು, ಆತಂಕಗಳು, ಅಪಾಯಗಳು ಎದುರಾದಾಗ ಗೊಂದಲಕ್ಕೊಳಗಾಗುತ್ತಾರೆ. ಹೇಗೆ… ಹೇಗೆ… ಜೀವನ ನಡೆಸಬೇಕು ಎಂದು ಹೈರಾಣಗೊಳ್ಳುತ್ತಾರೆ. ಆಗ ಯಾರೇ ಆಗಲಿ ಮಾನಸಿಕವಾಗಿ ದೃಢಚಿತ್ತದಿಂದ ಸಮಯಕ್ಕೆ ಸರಿಯಾಗಿ ಸರಿಯಾದ ನಿರ್ಧಾರ ತೆಗೆದುಕೊಂಡು ಆ ಕೆಟ್ಟ ಘಳಿಗೆಯಿಂದ ಪಾರಾಗಬೇಕು. ಆ ಒಂದೇ ಒಂದು ಕ್ಷಣ ಶಾಂತವಾಗಿ ಯೋಚಿಸಿದರೆ ಸಮಸ್ಯೆ ಬಗೆಹರಿಯುತ್ತದೆ. ಹಾನಿ, ಅಪಾಯ ಅನಾಹುತಗಳು ತಪ್ಪುತ್ತವೆ ಎಂದು ಹೇಳುತ್ತಾ ತಾಜಾ ಘಟನೆಯೊಂದನ್ನು ನಿಮ್ಮ ಮುಂದಿಡುವ ಪ್ರಯತ್ನ ಇಲ್ಲಿದೆ.

ಅಂತಹ ಜೀವನಾಘಾತ ಎದುರಾದಾಗ ವ್ಯಕ್ತಿ ದೌರ್ಬಲ್ಯದಿಂದ ಆತ್ಮಹತ್ಯಗೆ ಎದುರಾಗಿದ್ದು, ಅದನ್ನು ಪೊಲೀಸ್​​ ಸಿಬ್ಬಂದಿಯೊಬ್ಬರು ತಕ್ಷಣವೇ ಚಾಕಚಕ್ಯತೆಯಿಂದ ವರ್ತಿಸಿ, ಆ ಮನುಷ್ಯನನ್ನು ಕಾಪಾಡಿ, ಮರುಜನ್ಮ ನೀಡಿದ್ದಾರೆ.

ಹಣಕಾಸಿನ ತೊಂದರೆಯಿಂದ ವ್ಯಕ್ತಿಯೊಬ್ಬರು ಹೈದರಾಬಾದ್‌ನ ಎಲ್‌ಬಿ ನಗರದಲ್ಲಿ ಫೈವ್‌ಓವರ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಮೀಪದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಕಾನ್ಸ್​​ಟೇಬಲ್​​ ಸತೀಶ್ ಹಾಗೂ ಮತ್ತೊಬ್ಬ ವ್ಯಕ್ತಿ ಆತನನ್ನು ಗಮನಿಸಿದ್ದಾರೆ. ತಕ್ಷಣ ಕಾನ್‌ಸ್ಟೆಬಲ್ ಸತೀಶ್ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸ್​ ಸತೀಶ್ ಬಹಳ ಜಾಣತನದಿಂದ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಗೆ ಕಿಂಚಿತ್ತೂ ಅನುಮಾನ ಬಾರದಂತೆ, ಆತ್ಮಹತ್ಯೆಗೆ ಸಜ್ಜಾಗುತ್ತಿದ್ದ ವ್ಯಕ್ತಿಯ ಬಗ್ಗೆ ತಲೆ ಕೆಡಿಸಿಕೊಳ್ಳದವರಂತೆ ಫೋನ್ ನಲ್ಲಿ ಮಾತನಾಡುತ್ತಾ, ಆತನ ಸಮೀಪಕ್ಕೆ ತೆರಳಿದ್ದಾರೆ. ಆ ವ್ಯಕ್ತಿ ಹತ್ತಿರ ಹೋದ ಕೂಡಲೇ ಅವನ ಕತ್ತಿನಲ್ಲಿದ್ದ ಟವೆಲ್ ಹಿಡಿದು ಅವನನ್ನು ಕೆಳಗೆ ಎಳೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:52 am, Wed, 24 May 23

ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ವಿರಾಟ್ ಕೊಹ್ಲಿಯನ್ನು ಹೀಯಾಳಿಸಿದ ಬೆನ್ನಲ್ಲೇ ಕೆಎಲ್ ರಾಹುಲ್ ಔಟ್..!
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಮಾತಾಡಿದ್ದು ನಾನೇ ಅಂತ ಪಾಟೀಲ್ ಹೇಳಿದರೂ ಸರ್ಕಾರದ ಧೋರಣೆ ಅರ್ಥಹೀನ
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ಡಿಕ್ಕಿ ಹೊಡೆದು ಬಿದ್ದ ಬ್ಯಾಟರ್​ಗಳು... ಆದರೂ ರನೌಟ್ ಮಾಡಲು ಸಾಧ್ಯವಾಗಿಲ್ಲ!
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ತಾನು ಬಾಯಿ ತೆರೆದರೆ ಸರ್ಕಾರವೇ ಅಲ್ಲಾಡುತ್ತದೆ ಎಂದಿದ್ದ ಬಿಅರ್ ಪಾಟೀಲ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್
ನೆಲಮಂಗಲ: ಹೆದ್ದಾರಿ ಮಧ್ಯದಲ್ಲೇ ಲಾರಿ ಪಲ್ಟಿ, 5-6 ಕಿ.ಮೀ ಟ್ರಾಫಿಕ್ ಜಾಮ್
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಅಧ್ಯಕ್ಷನಾಗಿ ಮುಂದುವರಿಯುವ ಬಗ್ಗೆ ಖಚಿತವಾಗಿ ಹೇಳದ ವಿಜಯೇಂದ್ರ
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ್ದು ಪ್ರಧಾನಿ ಮೋದಿ: ಪವನ್ ಕಲ್ಯಾಣ್