AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಲೈಓವರ್​​ನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ; ಅದನ್ನು ಪೊಲೀಸ್​ ಕಾನ್‌ಸ್ಟೆಬಲ್ ತಡೆದಿದ್ದು ಹೇಗೆ? ನೀವೇ ನೋಡಿ!

ಅಂತಹ ಜೀವನಾಘಾತ ಎದುರಾದಾಗ ವ್ಯಕ್ತಿ ದೌರ್ಬಲ್ಯದಿಂದ ಆತ್ಮಹತ್ಯಗೆ ಎದುರಾಗಿದ್ದು, ಅದನ್ನು ಪೊಲೀಸ್​​ ಸಿಬ್ಬಂದಿಯೊಬ್ಬರು ತಕ್ಷಣವೇ ಚಾಕಚಕ್ಯತೆಯಿಂದ ವರ್ತಿಸಿ, ಆ ಮನುಷ್ಯನನ್ನು ಕಾಪಾಡಿ, ಮರುಜನ್ಮ ನೀಡಿದ್ದಾರೆ.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 24, 2023 | 10:59 AM

Share

ಸಾಮಾನ್ಯವಾಗಿ ಅನೇಕ ಮಂದಿ ಜೀವನದಲ್ಲಿ ಯಾವುದೇ ಅಪಘಾತಗಳು, ಆಘಾತಗಳು, ಆತಂಕಗಳು, ಅಪಾಯಗಳು ಎದುರಾದಾಗ ಗೊಂದಲಕ್ಕೊಳಗಾಗುತ್ತಾರೆ. ಹೇಗೆ… ಹೇಗೆ… ಜೀವನ ನಡೆಸಬೇಕು ಎಂದು ಹೈರಾಣಗೊಳ್ಳುತ್ತಾರೆ. ಆಗ ಯಾರೇ ಆಗಲಿ ಮಾನಸಿಕವಾಗಿ ದೃಢಚಿತ್ತದಿಂದ ಸಮಯಕ್ಕೆ ಸರಿಯಾಗಿ ಸರಿಯಾದ ನಿರ್ಧಾರ ತೆಗೆದುಕೊಂಡು ಆ ಕೆಟ್ಟ ಘಳಿಗೆಯಿಂದ ಪಾರಾಗಬೇಕು. ಆ ಒಂದೇ ಒಂದು ಕ್ಷಣ ಶಾಂತವಾಗಿ ಯೋಚಿಸಿದರೆ ಸಮಸ್ಯೆ ಬಗೆಹರಿಯುತ್ತದೆ. ಹಾನಿ, ಅಪಾಯ ಅನಾಹುತಗಳು ತಪ್ಪುತ್ತವೆ ಎಂದು ಹೇಳುತ್ತಾ ತಾಜಾ ಘಟನೆಯೊಂದನ್ನು ನಿಮ್ಮ ಮುಂದಿಡುವ ಪ್ರಯತ್ನ ಇಲ್ಲಿದೆ.

ಅಂತಹ ಜೀವನಾಘಾತ ಎದುರಾದಾಗ ವ್ಯಕ್ತಿ ದೌರ್ಬಲ್ಯದಿಂದ ಆತ್ಮಹತ್ಯಗೆ ಎದುರಾಗಿದ್ದು, ಅದನ್ನು ಪೊಲೀಸ್​​ ಸಿಬ್ಬಂದಿಯೊಬ್ಬರು ತಕ್ಷಣವೇ ಚಾಕಚಕ್ಯತೆಯಿಂದ ವರ್ತಿಸಿ, ಆ ಮನುಷ್ಯನನ್ನು ಕಾಪಾಡಿ, ಮರುಜನ್ಮ ನೀಡಿದ್ದಾರೆ.

ಹಣಕಾಸಿನ ತೊಂದರೆಯಿಂದ ವ್ಯಕ್ತಿಯೊಬ್ಬರು ಹೈದರಾಬಾದ್‌ನ ಎಲ್‌ಬಿ ನಗರದಲ್ಲಿ ಫೈವ್‌ಓವರ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಮೀಪದಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಕಾನ್ಸ್​​ಟೇಬಲ್​​ ಸತೀಶ್ ಹಾಗೂ ಮತ್ತೊಬ್ಬ ವ್ಯಕ್ತಿ ಆತನನ್ನು ಗಮನಿಸಿದ್ದಾರೆ. ತಕ್ಷಣ ಕಾನ್‌ಸ್ಟೆಬಲ್ ಸತೀಶ್ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸ್​ ಸತೀಶ್ ಬಹಳ ಜಾಣತನದಿಂದ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಗೆ ಕಿಂಚಿತ್ತೂ ಅನುಮಾನ ಬಾರದಂತೆ, ಆತ್ಮಹತ್ಯೆಗೆ ಸಜ್ಜಾಗುತ್ತಿದ್ದ ವ್ಯಕ್ತಿಯ ಬಗ್ಗೆ ತಲೆ ಕೆಡಿಸಿಕೊಳ್ಳದವರಂತೆ ಫೋನ್ ನಲ್ಲಿ ಮಾತನಾಡುತ್ತಾ, ಆತನ ಸಮೀಪಕ್ಕೆ ತೆರಳಿದ್ದಾರೆ. ಆ ವ್ಯಕ್ತಿ ಹತ್ತಿರ ಹೋದ ಕೂಡಲೇ ಅವನ ಕತ್ತಿನಲ್ಲಿದ್ದ ಟವೆಲ್ ಹಿಡಿದು ಅವನನ್ನು ಕೆಳಗೆ ಎಳೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:52 am, Wed, 24 May 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ