AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಂಗಗಳಿಗೆ ಮಾವಿನ ಹಣ್ಣು ತಿನ್ನಿಸಿದ ಕಾನ್​ಸ್ಟೆಬಲ್​, ಇದುವೇ ಮಾನವೀಯತೆ ಎಂದ ನೆಟ್ಟಿಗರು

ಮಂಗಗಳಿಗೆ ಮಾವಿನ ಹಣ್ಣು ತಿನ್ನಿಸಿದ ಉತ್ತರಪ್ರದೇಶ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಇಲಾಖೆಯು ತನ್ನ ಅಧಿಕೃತ ಟ್ವಿಟರ್ ಖಾತೆಲ್ಲಿ ವಿಡಿಯೋ ಹಂಚಿಕೊಂಡು ಶ್ಲಾಘಿಸಿದೆ.

Viral Video: ಮಂಗಗಳಿಗೆ ಮಾವಿನ ಹಣ್ಣು ತಿನ್ನಿಸಿದ ಕಾನ್​ಸ್ಟೆಬಲ್​, ಇದುವೇ ಮಾನವೀಯತೆ ಎಂದ ನೆಟ್ಟಿಗರು
ಕೋತಿಗೆ ಆಹಾರ ನೀಡಿದ ಪೊಲೀಸ್ ಸಿಬ್ಬಂದಿ
TV9 Web
| Edited By: |

Updated on: Jun 14, 2022 | 12:51 PM

Share

ಬೇಸಿಗೆ ಕಾಲದಲ್ಲಿ ಸಾಮಾನ್ಯವಾಗಿ ನೀರಿನ ದಾಹ ಹೆಚ್ಚಾಗಿರುತ್ತದೆ. ಪ್ರಾಣಿಗಳು ಕುಡಿಯಲು ನೀರು ಸಿಗದೆ, ತಿನ್ನಲು ಆಹಾರ ಸಿಗದೆ ಕಂಗೆಡುತ್ತವೆ. ಇಂಥ ಸಂದರ್ಭದಲ್ಲಿ ಪ್ರಾಣಿಗಳಿಗೆ ಆಹಾರ, ನೀರು ನೀಡುವುದು ಮಾನವೀಯತೆಯೇ ಸರಿ. ಉತ್ತರಪ್ರದೇಶದ ಪೊಲೀಸ್ ಕಾನ್​ಸ್ಟೆಬಲ್  ನ್ಸ್ಟೇಬಲ್ ಒಬ್ಬರು ವಾಹನದಲ್ಲಿ ಕುಳಿತುಕೊಂಡು ಮಗಗಳಿಗೆ ಆಹಾರ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪೊಲೀಸ್ ಸಿಬ್ಬಂದಿಯ ಈ ಕಾರ್ಯಕ್ಕೆ ಮೆಚ್ಚೆಗೆ ವ್ಯಕ್ತಪಡಿಸಿದ ನೆಟ್ಟಿಗರು ಇದುವೇ ಮಾನವೀಯತೆ ಎಂದು ಹೇಳಿದ್ದಾರೆ.

ವೈರಲ್ ಆಗತ್ತಿರುವ 17 ಸೆಕೆಂಡ್‌ಗಳ ವಿಡಿಯೋ ಕ್ಲಿಪ್‌ನಲ್ಲಿ, ಪೊಲೀಸ್ ಸಿಬ್ಬಂದಿಯೊಬ್ಬರು ವಾಹನದಲ್ಲಿ ಕುಳಿತುಕೊಂಡು ಚಾಕು ತೆಗೆದುಕೊಂಡು ಮಾವಿನ ಹಣ್ಣನ್ನು ಕಟ್ ಮಾಡಿ ತಿನ್ನಲು ಮುಂದಾಗುವುದನ್ನು ಕಾಣಬಹುದು. ಈ ವೇಳೆ ಬೆನ್ನಿನ ಮೇಲೆ ಮರಿಯನ್ನು ಹೊತ್ತುಕೊಂಡಿದ್ದ ಕೋತಿಯೊಂದು ಸಿಬ್ಬಂದಿಯನ್ನು ನೋಡುತ್ತದೆ ಮತ್ತು ಹಣ್ಣಿಗಾಗಿ ಕೈಚಾಚುತ್ತದೆ. ಅದರಂತೆ ಆ ಸಿಬ್ಬಂದಿ ಮಾವಿನ ಹಣ್ಣನ್ನು ಕಟ್ ಮಾಡಿ ಕೋತಿಗೆ ನೀಡುತ್ತಾರೆ. ಮತ್ತೊಂದು ತುಂಡನ್ನು ದೂರದಲ್ಲಿರುವ ಕೋತಿಗೆ ಎಸೆಯುವುದನ್ನು ಕಾಣಬಹುದು. ಮೊದಲೇ ಕೋತಿಗಳಿಗೆ ಮಾವಿನ ಹಣ್ಣು ಎಂದರೆ ಪಂಚಪ್ರಾಣ, ಹೀಗಿದ್ದಾಗ ಸಿಬ್ಬಂದಿ ರಸಭರಿತ ಮಾವಿನ ಹಣ್ಣನ್ನು ನೀಡಿದಾಗ ಸುಮ್ಮನೆ ಇರುತ್ತದೆಯೇ? ಚಪ್ಪರಿಸಿಕೊಂಡು ಹಣ್ಣನ್ನು ಸವಿದಿದೆ.

ಇದರ ವಿಡಿಯೋವನ್ನು ಉತ್ತರ ಪ್ರದೇಶ ಪೊಲೀಸರು ತಮ್ಮ ಅಧಿಕೃತ ಟ್ವೀಟರ್​ ಖಾತೆಯಲ್ಲಿ ಹಂಚಿಕೊಂಡು ಶಹಜಹಾಪುರದ ಸಿಬ್ಬಂದಿ ಮೋಹಿತ್ ಅವರ ಒಳ್ಳೆಯ ಕಾರ್ಯವನ್ನು ಶ್ಲಾಘಿಸಿದ್ದಾರೆ. ಅಲ್ಲದೆ ”UP 112, सबके ‘Mon-key’ समझे..” ಶೀರ್ಷಿಕೆ ನೀಡಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗುತ್ತಿದ್ದು, 40,000 ಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ. ಅನೇಕ ನೆಟಿಜನ್‌ಗಳು ಪೊಲೀಸ್ ಕಾನ್ಸ್‌ಟೇಬಲ್ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ವೀಡಿಯೊ ಕುರಿತು ಪ್ರತಿಕ್ರಿಯಿಸಿದ ಟ್ವಿಟರ್ ಬಳಕೆದಾರರು, “ಮಾನವೀಯತೆಯು ಒಳಗಿನಿಂದ ಬರುತ್ತದೆ. ಇದು ಮಾನವೀಯತೆ” ಎಂದು ಹೇಳಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ