AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಂಗಗಳಿಗೆ ಮಾವಿನ ಹಣ್ಣು ತಿನ್ನಿಸಿದ ಕಾನ್​ಸ್ಟೆಬಲ್​, ಇದುವೇ ಮಾನವೀಯತೆ ಎಂದ ನೆಟ್ಟಿಗರು

ಮಂಗಗಳಿಗೆ ಮಾವಿನ ಹಣ್ಣು ತಿನ್ನಿಸಿದ ಉತ್ತರಪ್ರದೇಶ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಇಲಾಖೆಯು ತನ್ನ ಅಧಿಕೃತ ಟ್ವಿಟರ್ ಖಾತೆಲ್ಲಿ ವಿಡಿಯೋ ಹಂಚಿಕೊಂಡು ಶ್ಲಾಘಿಸಿದೆ.

Viral Video: ಮಂಗಗಳಿಗೆ ಮಾವಿನ ಹಣ್ಣು ತಿನ್ನಿಸಿದ ಕಾನ್​ಸ್ಟೆಬಲ್​, ಇದುವೇ ಮಾನವೀಯತೆ ಎಂದ ನೆಟ್ಟಿಗರು
ಕೋತಿಗೆ ಆಹಾರ ನೀಡಿದ ಪೊಲೀಸ್ ಸಿಬ್ಬಂದಿ
TV9 Web
| Edited By: |

Updated on: Jun 14, 2022 | 12:51 PM

Share

ಬೇಸಿಗೆ ಕಾಲದಲ್ಲಿ ಸಾಮಾನ್ಯವಾಗಿ ನೀರಿನ ದಾಹ ಹೆಚ್ಚಾಗಿರುತ್ತದೆ. ಪ್ರಾಣಿಗಳು ಕುಡಿಯಲು ನೀರು ಸಿಗದೆ, ತಿನ್ನಲು ಆಹಾರ ಸಿಗದೆ ಕಂಗೆಡುತ್ತವೆ. ಇಂಥ ಸಂದರ್ಭದಲ್ಲಿ ಪ್ರಾಣಿಗಳಿಗೆ ಆಹಾರ, ನೀರು ನೀಡುವುದು ಮಾನವೀಯತೆಯೇ ಸರಿ. ಉತ್ತರಪ್ರದೇಶದ ಪೊಲೀಸ್ ಕಾನ್​ಸ್ಟೆಬಲ್  ನ್ಸ್ಟೇಬಲ್ ಒಬ್ಬರು ವಾಹನದಲ್ಲಿ ಕುಳಿತುಕೊಂಡು ಮಗಗಳಿಗೆ ಆಹಾರ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪೊಲೀಸ್ ಸಿಬ್ಬಂದಿಯ ಈ ಕಾರ್ಯಕ್ಕೆ ಮೆಚ್ಚೆಗೆ ವ್ಯಕ್ತಪಡಿಸಿದ ನೆಟ್ಟಿಗರು ಇದುವೇ ಮಾನವೀಯತೆ ಎಂದು ಹೇಳಿದ್ದಾರೆ.

ವೈರಲ್ ಆಗತ್ತಿರುವ 17 ಸೆಕೆಂಡ್‌ಗಳ ವಿಡಿಯೋ ಕ್ಲಿಪ್‌ನಲ್ಲಿ, ಪೊಲೀಸ್ ಸಿಬ್ಬಂದಿಯೊಬ್ಬರು ವಾಹನದಲ್ಲಿ ಕುಳಿತುಕೊಂಡು ಚಾಕು ತೆಗೆದುಕೊಂಡು ಮಾವಿನ ಹಣ್ಣನ್ನು ಕಟ್ ಮಾಡಿ ತಿನ್ನಲು ಮುಂದಾಗುವುದನ್ನು ಕಾಣಬಹುದು. ಈ ವೇಳೆ ಬೆನ್ನಿನ ಮೇಲೆ ಮರಿಯನ್ನು ಹೊತ್ತುಕೊಂಡಿದ್ದ ಕೋತಿಯೊಂದು ಸಿಬ್ಬಂದಿಯನ್ನು ನೋಡುತ್ತದೆ ಮತ್ತು ಹಣ್ಣಿಗಾಗಿ ಕೈಚಾಚುತ್ತದೆ. ಅದರಂತೆ ಆ ಸಿಬ್ಬಂದಿ ಮಾವಿನ ಹಣ್ಣನ್ನು ಕಟ್ ಮಾಡಿ ಕೋತಿಗೆ ನೀಡುತ್ತಾರೆ. ಮತ್ತೊಂದು ತುಂಡನ್ನು ದೂರದಲ್ಲಿರುವ ಕೋತಿಗೆ ಎಸೆಯುವುದನ್ನು ಕಾಣಬಹುದು. ಮೊದಲೇ ಕೋತಿಗಳಿಗೆ ಮಾವಿನ ಹಣ್ಣು ಎಂದರೆ ಪಂಚಪ್ರಾಣ, ಹೀಗಿದ್ದಾಗ ಸಿಬ್ಬಂದಿ ರಸಭರಿತ ಮಾವಿನ ಹಣ್ಣನ್ನು ನೀಡಿದಾಗ ಸುಮ್ಮನೆ ಇರುತ್ತದೆಯೇ? ಚಪ್ಪರಿಸಿಕೊಂಡು ಹಣ್ಣನ್ನು ಸವಿದಿದೆ.

ಇದರ ವಿಡಿಯೋವನ್ನು ಉತ್ತರ ಪ್ರದೇಶ ಪೊಲೀಸರು ತಮ್ಮ ಅಧಿಕೃತ ಟ್ವೀಟರ್​ ಖಾತೆಯಲ್ಲಿ ಹಂಚಿಕೊಂಡು ಶಹಜಹಾಪುರದ ಸಿಬ್ಬಂದಿ ಮೋಹಿತ್ ಅವರ ಒಳ್ಳೆಯ ಕಾರ್ಯವನ್ನು ಶ್ಲಾಘಿಸಿದ್ದಾರೆ. ಅಲ್ಲದೆ ”UP 112, सबके ‘Mon-key’ समझे..” ಶೀರ್ಷಿಕೆ ನೀಡಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗುತ್ತಿದ್ದು, 40,000 ಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ. ಅನೇಕ ನೆಟಿಜನ್‌ಗಳು ಪೊಲೀಸ್ ಕಾನ್ಸ್‌ಟೇಬಲ್ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ವೀಡಿಯೊ ಕುರಿತು ಪ್ರತಿಕ್ರಿಯಿಸಿದ ಟ್ವಿಟರ್ ಬಳಕೆದಾರರು, “ಮಾನವೀಯತೆಯು ಒಳಗಿನಿಂದ ಬರುತ್ತದೆ. ಇದು ಮಾನವೀಯತೆ” ಎಂದು ಹೇಳಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್