AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಓರ್ವನಿಗಾಗಿ ಇಬ್ಬರು ಯುವತಿಯರ ಫೈಟಿಂಗ್​; ರಸ್ತೆಯಲ್ಲೇ ಜಗಳವಾಡಿದ ವಿಡಿಯೋ ವೈರಲ್

ಯುವಕನಿಗಾಗಿ ಇಬ್ಬರು ಯುವತಿಯರು ಹೊಡೆದಾಡಿಕೊಂಡ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

Viral Video: ಓರ್ವನಿಗಾಗಿ ಇಬ್ಬರು ಯುವತಿಯರ ಫೈಟಿಂಗ್​; ರಸ್ತೆಯಲ್ಲೇ ಜಗಳವಾಡಿದ ವಿಡಿಯೋ ವೈರಲ್
TV9 Web
| Edited By: |

Updated on: Oct 27, 2021 | 1:21 PM

Share

ಯುವಕನಿಗಾಗಿ ಇಬ್ಬರು ಯುವತಿಯರು ಹೊಡೆದಾಡಿಕೊಂಡ ದೃಶ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಲಕ್ನೋದ ಬಾರಾಬಿರ್ವಾ ಚೌರ್ಗೆ ಹತ್ತಿರದ ಹೊಟೆಲ್ ಎದುರು ಇಬ್ಬರು ಯುವತಿಯರು ಕಿತ್ತಾಡಿಕೊಂಡಿದ್ದಾರೆ. ಕಳೆದ ಸೋಮವಾರ ರಾತ್ರಿ ಘಟನೆ ನಡೆದಿದೆ. ಓರ್ವ ಯುವಕನನ್ನು ಪ್ರೀತಿಸುತ್ತಿದ್ದ ಇಬ್ಬರು ಯುವತಿಯರು ರಸ್ತೆಯ ಮಧ್ಯದಲ್ಲೇ ನಿಂತು ಜಗಳವಾಡಿದ ದೃಶ್ಯ ಇದೀಗ ವೈರಲ್ ಆಗಿದೆ.

ಕಾರಿನಲ್ಲಿ ಬಂದಿದ್ದ ಯುವತಿ ಯುವಕನಿಗಾಗಿ ರಸ್ತೆಯಲ್ಲಿ ಕಾಯುತ್ತಾ ನಿಂತಿದ್ದಳು. ಅದೇ ವೇಳೆ ಯುವಕನು ಬೇರೊಂದು ಯುವತಿಯ (Ex Girlfriend) ಜೊತೆ ಹೊಟೆಲ್​ನಿಂದ ಹೊರಬರುತ್ತಿರುವ ದೃಶ್ಯ ಕಾರಿನಲ್ಲಿ ಕುಳಿತಿದ್ದ ಯುವತಿಯ ಕಣ್ಣಿಗೆ ಬಿದ್ದಿದೆ. ರಾಬಿನ್ ಎಂಬಾತ ತನ್ನ ಹೊಸ ಗೆಳತಿ ಜೊತೆ ಹೊಟೆಲ್​ನಿಂದ ಹೊರ ಬಂದಿದ್ದಾನೆ. ಹಳೆ ಗೆಳತಿ (ಮಾಜಿ ಗೆಳತಿ) ದೃಶ್ಯವನ್ನು ನೋಡಿದ್ದೇ ಜಗಳಕ್ಕೆ ನಿಂತಿದ್ದಾಳೆ. ಹೊಡೆದಾಡಿಕೊಳ್ಳುವವರೆಗೆ ಇಬ್ಬರ ಜಗಳ ಮುಂದುವರೆದಿದೆ.

ತನ್ನ ಪ್ರಿಯತಮ ಹೊಟೆಲ್​ನಲ್ಲಿ ಬೇರೊಂದು ಯುವತಿಯ ಜೊತೆ ಇದ್ದಾನೆ ಎಂಬ ವಿಷಯ ತಿಳಿದಿದ್ದ ಯುವತಿ ನೇರವಾಗಿ ಸ್ಥಳಕ್ಕೆ ಬಂದಿಳಿದು ಜಗಳಕ್ಕೆ ನಿಂತಿದ್ದಾಳೆ. ಇಬ್ಬರು ಯುವತಿಯರ ನಡುವೆ ಜಗಳ ಹೊಡೆದಾಟದವರೆಗೆ ಮುಂದುವರೆದಿದೆ. ರಾಬಿನ್​ ಹೊಸ ಗೆಳತಿ ಮತ್ತೋರ್ವ ಯುವತಿಯ ಮೇಲೆ ಹಲ್ಲೆ ನಡೆಸಿದರ ಪರಿಣಾಮ ಆಕೆ ಎಚ್ಚರ ತಪ್ಪಿ ಕೆಳ ಬಿದ್ದಿದ್ದಾಳೆ. ಇದರ ಪರಿಣಾಮ ಹಲ್ಲೆಗೊಳಗಾದ ರಾಬಿನ್​ ಹಳೆ ಗೆಳತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಬಿನ್​ನ ಹಳೆ ಗೆಳತಿ ಎಚ್ಚರವಾದ ನಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಈ ಸಂಬಂಧ ಎಫ್ಐಆರ್ ದಾಖಲಾಗಿದೆ. ಹೊಸ ಗೆಳತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸ ಗೆಳತಿ ಮತ್ತು ಪ್ರಿಯಕರ ಮದ್ಯ ಸೇವನೆ ಮಾಡಿದ್ದರು. ಮಾಜಿ ಗೆಳತಿಯ ಮೇಲೆ ಇಬ್ಬರೂ ಸಹ ದಾಳಿ ನಡೆಸಿದ್ದಾರೆ. ಈ ಹಿಂದೆ ಅಕ್ಟೋಬರ್ 10ರಂದು ಮಾಜಿ ಗೆಳತಿ ರಾಬಿನ್ ಮೇಲೆ ದೂರು ದಾಖಲಿಸಿದ್ದಳು. ಈತ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ನೀಡಿದ್ದಳು. ಇದೀಗ ಇಬ್ಬರ ಜಗಳದಿಂದ ಓರ್ವರನ್ನು ಬಂಧಿಸಲಾಗಿದೆ, ಮತ್ತೋರ್ವಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂಬ ಮಾಹಿತಿ ತಿಳಿದು ಬಂದಿದೆ.

ಇದನ್ನೂ ಓದಿ:

Video: ಮದುವೆಗಾಗಿ ದೇವಸ್ಥಾನಕ್ಕೆ ಬಂದ 2 ಕುಟುಂಬಗಳ ಮಧ್ಯೆ ಹೊಡೆದಾಟ; ವಧುವನ್ನು ತಪ್ಪಿಸಲು ಹೋಗಿ ವರನಿಗೆ ಗಾಯ

ಹಾವೇರಿ: ಆಕಸ್ಮಿಕ ಬೆಂಕಿ ಅವಘಡ; ಸುಟ್ಟು ಕರಕಲಾದ ಮನೆ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ