AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಕೆ ಮ್ಯಾರಥಾನ್‌ನಲ್ಲಿ ಸೀರೆಯುಟ್ಟು ಓಡಿದ ಒಡಿಯಾ ಮಹಿಳೆ; ವಿಡಿಯೋ ವೈರಲ್​​​​

ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಸಾಂಪ್ರದಾಯಿಕ ಉಡುಗೆಯನ್ನು ಪ್ರತಿನಿಧಿಸುವ ಸಲುವಾಗಿ ಒಡಿಯಾ ಮಹಿಳೆ 42.5 ಕಿ.ಮೀ ಮ್ಯಾರಥಾನ್​​ನಲ್ಲಿ ಓಡಿ ಎಲ್ಲರ ಗಮನ ಸೆಳೆದಿದ್ದಾರೆ.

ಯುಕೆ ಮ್ಯಾರಥಾನ್‌ನಲ್ಲಿ ಸೀರೆಯುಟ್ಟು ಓಡಿದ ಒಡಿಯಾ ಮಹಿಳೆ; ವಿಡಿಯೋ ವೈರಲ್​​​​
Image Credit source: Twitter
ಅಕ್ಷತಾ ವರ್ಕಾಡಿ
|

Updated on:Apr 19, 2023 | 12:24 PM

Share

ಮುಖ್ಯಾಂಶಗಳು

  • ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಸಾಂಪ್ರದಾಯಿಕ ಉಡುಗೆಯನ್ನು ಪ್ರತಿನಿಧಿಸುವ ಸಲುವಾಗಿ ಒಡಿಯಾ ಮಹಿಳೆ 42.5 ಕಿ.ಮೀ ಮ್ಯಾರಥಾನ್​​ನಲ್ಲಿ ಓಡಿ ಎಲ್ಲರ ಗಮನ ಸೆಳೆದಿದ್ದಾರೆ.
  • ಯುಕೆಯ ಮ್ಯಾಂಚೆಸ್ಟರ್‌ನಲ್ಲಿ ವಾಸಿಸುತ್ತಿರುವ ಭಾರತೀಯ ಮೂಲದವರಾದ ಮಧುಸ್ಮಿತಾ ಭಾರತೀಯ ಸಂಸ್ಕೃತಿಯ ಬಗ್ಗೆ ಅಪಾರ ಹೆಮ್ಮೆಯನ್ನು ಹೊಂದಿದ್ದಾರೆ.
  • @FISI_UK ಟ್ವಿಟರ್​​ ಖಾತೆಯಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸೀರೆಯಲ್ಲಿ ಆರಾಮವಾಗಿ ಓಡುತ್ತಿರುವಾಗ ಆಕೆಯ ಸ್ನೇಹಿತರು ಆಕೆಗಾಗಿ ಹುರಿದುಂಬಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ವಿದೇಶದಲ್ಲಿ ಮಹಿಳೆಯೊಬ್ಬರು ಒರಿಸ್ಸಾ ಕೈ ಮಗ್ಗದ ಸಂಬಲ್ಪುರಿ  ಸೀರೆಯಲ್ಲಿ ಮ್ಯಾರಥಾನ್‌ನಲ್ಲಿ ಓಡಿರುವುದು ಇದೀಗಾ ಭಾರೀ ವೈರಲ್​​ ಆಗಿದೆ. ಹೌದು ಒಡಿಯಾ ಮಹಿಳೆ 42.5 ಕಿ.ಮೀ ಮ್ಯಾರಥಾನ್​​ನಲ್ಲಿ ಓಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಧುಸ್ಮಿತಾ ಜೆನಾ ದಾಸ್(41) 4 ಗಂಟೆ 50 ನಿಮಿಷಗಳಲ್ಲಿ ಮ್ಯಾರಥಾನ್ ಪೂರ್ಣಗೊಳಿಸಿದ್ದಾರೆ. ಸುಂದರವಾದ ಕೆಂಪು ಸೀರೆ ಮತ್ತು ಕಿತ್ತಳೆ ಬಣ್ಣದ ಸ್ನೀಕರ್ಸ್ ಧರಿಸಿ ಮ್ಯಾರಥಾನ್‌ನಲ್ಲಿ ಎಲ್ಲರ ಗಮನ ಸೆಳೆದ್ದಿದ್ದಾರೆ.

@FISI_UK ಟ್ವಿಟರ್​​ ಖಾತೆಯಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸೀರೆಯಲ್ಲಿ ಆರಾಮವಾಗಿ ಓಡುತ್ತಿರುವಾಗ ಆಕೆಯ ಸ್ನೇಹಿತರು ಆಕೆಗಾಗಿ ಹುರಿದುಂಬಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ಇದನ್ನೂ ಓದಿ: ನವಿಲಿನ ಮೊಟ್ಟೆ ಕದಿಯಲು ಬಂದವರಿಗೆ ತಾಯಿ ನವಿಲು ಮಾಡಿದ್ದೇನು ನೋಡಿ; ವಿಡಿಯೋ ವೈರಲ್

ಯುಕೆಯ ಮ್ಯಾಂಚೆಸ್ಟರ್‌ನಲ್ಲಿ ವಾಸಿಸುತ್ತಿರುವ ಭಾರತೀಯ ಮೂಲದವರಾದ ಮಧುಸ್ಮಿತಾ ಭಾರತೀಯ ಸಂಸ್ಕೃತಿಯ ಬಗ್ಗೆ ಅಪಾರ ಹೆಮ್ಮೆಯನ್ನು ಹೊಂದಿದ್ದಾರೆ. ಮೂಲತಃ ಒರಿಸ್ಸಾದ ಮೂಲದವರಾದ ಇವರು ವಿದೇಶದಲ್ಲಿ ನೆಲೆಸಿದ್ದಾರೆ. ಇತ್ತೀಚೆಗಷ್ಟೇ 2023ರ ಮ್ಯಾಂಚೆಸ್ಟರ್‌ ಮ್ಯಾರಥಾನ್‌ ಭಾಗಿಯಾಗಿದ್ದು, ತನ್ನ ಭಾರತ ಸಂಸ್ಕೃತಿಯನ್ನು ಪ್ರತಿನಿಧಿಸುವ ಹಿನ್ನೆಯಲ್ಲಿ ಕೈ ಮಗ್ಗದದಿಂದ ವಿನ್ಯಾಸಗೊಳಿಸಲಾದ ಒರಿಸ್ಸಾದ ಸಂಬಲ್ಪುರಿ ಸೀರೆಯುಟ್ಟು ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಭಾರೀ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ನಮ್ಮ ಭಾರತದ ಗರಿಮೆಯನ್ನು ವಿದೇಶದಲ್ಲಿಯೂ ಬಿತ್ತರಿಸಿರುವುದು ಹೆಮ್ಮೆಯ ವಿಷಯ ಒಂದು ಬಳಕೆದಾರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:23 pm, Wed, 19 April 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ