AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಕೆ ಮ್ಯಾರಥಾನ್‌ನಲ್ಲಿ ಸೀರೆಯುಟ್ಟು ಓಡಿದ ಒಡಿಯಾ ಮಹಿಳೆ; ವಿಡಿಯೋ ವೈರಲ್​​​​

ಭಾರತೀಯ ಸಂಸ್ಕೃತಿಯ ಪ್ರತೀಕವಾಗಿರುವ ಸಾಂಪ್ರದಾಯಿಕ ಉಡುಗೆಯನ್ನು ಪ್ರತಿನಿಧಿಸುವ ಸಲುವಾಗಿ ಒಡಿಯಾ ಮಹಿಳೆ 42.5 ಕಿ.ಮೀ ಮ್ಯಾರಥಾನ್​​ನಲ್ಲಿ ಓಡಿ ಎಲ್ಲರ ಗಮನ ಸೆಳೆದಿದ್ದಾರೆ.

ಯುಕೆ ಮ್ಯಾರಥಾನ್‌ನಲ್ಲಿ ಸೀರೆಯುಟ್ಟು ಓಡಿದ ಒಡಿಯಾ ಮಹಿಳೆ; ವಿಡಿಯೋ ವೈರಲ್​​​​
Image Credit source: Twitter
Follow us
ಅಕ್ಷತಾ ವರ್ಕಾಡಿ
|

Updated on:Apr 19, 2023 | 12:24 PM

ವಿದೇಶದಲ್ಲಿ ಮಹಿಳೆಯೊಬ್ಬರು ಒರಿಸ್ಸಾ ಕೈ ಮಗ್ಗದ ಸಂಬಲ್ಪುರಿ  ಸೀರೆಯಲ್ಲಿ ಮ್ಯಾರಥಾನ್‌ನಲ್ಲಿ ಓಡಿರುವುದು ಇದೀಗಾ ಭಾರೀ ವೈರಲ್​​ ಆಗಿದೆ. ಹೌದು ಒಡಿಯಾ ಮಹಿಳೆ 42.5 ಕಿ.ಮೀ ಮ್ಯಾರಥಾನ್​​ನಲ್ಲಿ ಓಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಧುಸ್ಮಿತಾ ಜೆನಾ ದಾಸ್(41) 4 ಗಂಟೆ 50 ನಿಮಿಷಗಳಲ್ಲಿ ಮ್ಯಾರಥಾನ್ ಪೂರ್ಣಗೊಳಿಸಿದ್ದಾರೆ. ಸುಂದರವಾದ ಕೆಂಪು ಸೀರೆ ಮತ್ತು ಕಿತ್ತಳೆ ಬಣ್ಣದ ಸ್ನೀಕರ್ಸ್ ಧರಿಸಿ ಮ್ಯಾರಥಾನ್‌ನಲ್ಲಿ ಎಲ್ಲರ ಗಮನ ಸೆಳೆದ್ದಿದ್ದಾರೆ.

@FISI_UK ಟ್ವಿಟರ್​​ ಖಾತೆಯಿಂದ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಸೀರೆಯಲ್ಲಿ ಆರಾಮವಾಗಿ ಓಡುತ್ತಿರುವಾಗ ಆಕೆಯ ಸ್ನೇಹಿತರು ಆಕೆಗಾಗಿ ಹುರಿದುಂಬಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.

ಇದನ್ನೂ ಓದಿ: ನವಿಲಿನ ಮೊಟ್ಟೆ ಕದಿಯಲು ಬಂದವರಿಗೆ ತಾಯಿ ನವಿಲು ಮಾಡಿದ್ದೇನು ನೋಡಿ; ವಿಡಿಯೋ ವೈರಲ್

ಯುಕೆಯ ಮ್ಯಾಂಚೆಸ್ಟರ್‌ನಲ್ಲಿ ವಾಸಿಸುತ್ತಿರುವ ಭಾರತೀಯ ಮೂಲದವರಾದ ಮಧುಸ್ಮಿತಾ ಭಾರತೀಯ ಸಂಸ್ಕೃತಿಯ ಬಗ್ಗೆ ಅಪಾರ ಹೆಮ್ಮೆಯನ್ನು ಹೊಂದಿದ್ದಾರೆ. ಮೂಲತಃ ಒರಿಸ್ಸಾದ ಮೂಲದವರಾದ ಇವರು ವಿದೇಶದಲ್ಲಿ ನೆಲೆಸಿದ್ದಾರೆ. ಇತ್ತೀಚೆಗಷ್ಟೇ 2023ರ ಮ್ಯಾಂಚೆಸ್ಟರ್‌ ಮ್ಯಾರಥಾನ್‌ ಭಾಗಿಯಾಗಿದ್ದು, ತನ್ನ ಭಾರತ ಸಂಸ್ಕೃತಿಯನ್ನು ಪ್ರತಿನಿಧಿಸುವ ಹಿನ್ನೆಯಲ್ಲಿ ಕೈ ಮಗ್ಗದದಿಂದ ವಿನ್ಯಾಸಗೊಳಿಸಲಾದ ಒರಿಸ್ಸಾದ ಸಂಬಲ್ಪುರಿ ಸೀರೆಯುಟ್ಟು ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಭಾರೀ ಪ್ರತಿಕ್ರಿಯೆಗಳು ವ್ಯಕ್ತವಾಗಿದೆ. ನಮ್ಮ ಭಾರತದ ಗರಿಮೆಯನ್ನು ವಿದೇಶದಲ್ಲಿಯೂ ಬಿತ್ತರಿಸಿರುವುದು ಹೆಮ್ಮೆಯ ವಿಷಯ ಒಂದು ಬಳಕೆದಾರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:23 pm, Wed, 19 April 23

ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್