AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಶ್ರೂಮ್ ಸೂಪ್​ನಲ್ಲಿ ಜೀವಂತ ಇಲಿಯನ್ನು ನೋಡಿ ಕಂಗಾಲಾದ ಗ್ರಾಹಕ

ಸೂಪ್ ಆರ್ಡರ್ ಮಾಡಿದ್ದ ಗ್ರಾಹ ದೊಡ್ಡ ಅಣಬೆ ಇರಬೇಕೆಂದುಕೊಂಡು ಸೂಪ್ ಕುಡಿಯಲು ಆರಂಭಿಸಿದ್ದಾರೆ. ಆಗ ಅವರಿಗೆ ಆ ವಸ್ತು ಅಲುಗಾಡುತ್ತಿರುವುದು ಕಂಡಿದೆ. ಇದರಿಂದ ಅನುಮಾನಗೊಂಡು ಪರಿಶೀಲಿಸಿದಾಗ ಇಲಿಮರಿ ಎಂಬುದು ಗೊತ್ತಾಗಿದೆ.

ಮಶ್ರೂಮ್ ಸೂಪ್​ನಲ್ಲಿ ಜೀವಂತ ಇಲಿಯನ್ನು ನೋಡಿ ಕಂಗಾಲಾದ ಗ್ರಾಹಕ
ಸೂಪ್‌
ಸುಷ್ಮಾ ಚಕ್ರೆ
|

Updated on: Sep 05, 2023 | 6:43 PM

Share

ರೆಸ್ಟೋರೆಂಟ್​​ನಲ್ಲಿ ಊಟ ಮಾಡುವಾಗ ಜಿರಲೆ ಸಿಗುವುದು, ನೊಣ, ಕೀಟಗಳು ಸಿಗುವುದು ಇಂತಹ ಕೆಲವು ಘಟನೆಗಳು ಆಗಾಗ ಬೆಳಕಿಗೆ ಬರುತ್ತಿರುತ್ತವೆ. ಆದರೆ, ಸ್ಯಾಮ್ ಹೇವರ್ಡ್ ಎಂಬ ಇಂಗ್ಲೆಂಡ್ ನಿವಾಸಿಯೊಬ್ಬರು ತಾವು ಆರ್ಡರ್ ಮಾಡಿದ್ದ ಚೈನೀಸ್ ಸೂಪ್‌ನಲ್ಲಿ ಜೀವಂತವಾಗಿದ್ದ ಇಲಿಮರಿಯೊಂದನ್ನು ಕಂಡು ಶಾಕ್ ಆಗಿದ್ದಾರೆ. ಮಶ್ರೂಮ್ ನೂಡಲ್ ಸೂಪ್‌ ಹೋಂ ಡೆಲಿವರಿಗೆ ಆರ್ಡರ್ ಮಾಡಿದ್ದ ಅವರು ಮನೆಗೆ ಬಂದ ಸೂಪ್​ನಲ್ಲಿ ಇಲಿ ಬಿದ್ದಿರುವುದನ್ನು ಕಂಡು ಕಂಗಾಲಾಗಿದ್ದಾರೆ.

ಆರಂಭದಲ್ಲಿ ಅವರಿಗೆ ಸೂಪ್​ನಲ್ಲಿ ಇಲಿ ಇರುವುದು ತಿಳಿದಿಲ್ಲ. ದೊಡ್ಡ ಅಣಬೆ ಇರಬೇಕೆಂದುಕೊಂಡು ಸೂಪ್ ಕುಡಿಯಲು ಆರಂಭಿಸಿದ ಅವರಿಗೆ ಆ ವಸ್ತು ಅಲುಗಾಡುತ್ತಿರುವುದು ಕಂಡಿದೆ. ಇದರಿಂದ ಅನುಮಾನಗೊಂಡು ಪರಿಶೀಲಿಸಿದ್ದಾರೆ. ಆಗ ಸೂಪ್​ನಲ್ಲಿ ಬಾಲ ಕಾಣಿಸಿದೆ. ಅದನ್ನು ಹಿಡಿದು ಮೇಲೆತ್ತಿದಾಗ ಇಲಿಮರಿ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: Viral Video: ಮೊದಲ ಬಾರಿಗೆ ಭಾರತೀಯ ಶೈಲಿಯ ಆಹಾರ ತಿಂದು ಬಾಯಿ ಚಪ್ಪರಿಸಿದ ವಿದೇಶಿ ಮಹಿಳೆ

ಇದರಿಂದ ದಿಗ್ಭ್ರಮೆಗೊಂಡ ಹೇವರ್ಡ್ ಸೂಪ್​ನಲ್ಲಿದ್ದ ಆ ಇಲಿಯ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ಬಳಿಕ ಆ ರೆಸ್ಟೋರೆಂಟ್ ಅನ್ನು ಸಂಪರ್ಕಿಸಿದ್ದಾರೆ. ಸೂಪ್​ನಲ್ಲಿ ಇಲಿ ಸಿಕ್ಕ ವಿಷಯವನ್ನು ಅವರಿಗೆ ತಿಳಿಸಿದ್ದಾರೆ. ಆದರೆ, ಆ ರೆಸ್ಟೋರೆಂಟ್ ಅದಕ್ಕೆ ನಾವು ಜವಾಬ್ದಾರರಲ್ಲ ಎಂದು ಹೇಳಿತು. ಅಲ್ಲದೆ, ಹಣವನ್ನು ಮರುಪಾವತಿ ಮಾಡಲು ನಿರಾಕರಿಸಿತು.

ಇದನ್ನೂ ಓದಿ: Winter Soups: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಟ್ಟು, ರೋಗಗಳಿಂದ ನಿಮ್ಮನ್ನು ರಕ್ಷಿಸುವ ಈ ಸೂಪ್​ಗಳನ್ನು ಒಮ್ಮೆ ಟ್ರೈ ಮಾಡಿ

ಅವರು ಕ್ಯಾಶ್ ಆನ್ ಡೆಲಿವರಿ ಆಯ್ಕೆ ಮಾಡಿಕೊಂಡಿದ್ದರಿಂದ ಆನ್​ಲೈನ್​ನಲ್ಲಿ ಹಣ ಪಾವತಿಸಿದ ದಾಖಲೆ ಇರಲಿಲ್ಲ. ಅವರ ಬಳಿ ರಶೀದಿ ಕೂಡ ಇರಲಿಲ್ಲ. ಇದರಿಂದಾಗಿ ಅವರಿಗೆ ಅವರು ಪಾವತಿ ಮಾಡಿದ ಹಣ ವಾಪಾಸ್ ಸಿಗಲಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್