AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮಂಟಪಕ್ಕೆ ನುಗ್ಗಿ ಪ್ರೇಯಸಿಯ ಹಣೆಗೆ ಸಿಂಧೂರವಿಟ್ಟ ಯುವಕ; ತಾಳಿ ಕಟ್ಟಲು ರೆಡಿಯಾಗಿದ್ದ ವರ ಶಾಕ್!

Shocking Video: ಮದುವೆಯ ಸಮಯದಲ್ಲಿ ವಧು-ವರರು ಹೂವಿನ ಹಾರಗಳನ್ನು ಹಿಡಿದುಕೊಂಡು ಇನ್ನೇನು ಹಾರ ಬದಲಾಯಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಮದುವೆ ಮಂಟಪದೊಳಗೆ ಓಡಿಬಂದ ಯುವಕ ವಧುವಿನ ಹಣೆಗೆ ಸಿಂಧೂರ ಇಟ್ಟಿದ್ದಾನೆ.

Viral Video: ಮದುವೆ ಮಂಟಪಕ್ಕೆ ನುಗ್ಗಿ ಪ್ರೇಯಸಿಯ ಹಣೆಗೆ ಸಿಂಧೂರವಿಟ್ಟ ಯುವಕ; ತಾಳಿ ಕಟ್ಟಲು ರೆಡಿಯಾಗಿದ್ದ ವರ ಶಾಕ್!
ಮದುವೆ ಮಂಟಪದಲ್ಲಿ ಯುವಕನ ಹುಚ್ಚಾಟ
TV9 Web
| Edited By: |

Updated on: Dec 06, 2021 | 6:54 PM

Share

ಲಕ್ನೋ: ಸಿನಿಮಾದಲ್ಲಿ ತೋರಿಸುವುದೆಲ್ಲ ಕಾಲ್ಪನಿಕ ಕತೆಗಳಾದರೂ ಸಿನಿಮಾದಲ್ಲಿ ತೋರಿಸುವ ರೀತಿಯಲ್ಲೇ ನಿಜ ಜೀವನದಲ್ಲೂ ಕೆಲವೊಮ್ಮೆ ಸಿನಿಮೀಯ ಘಟನೆಗಳು ನಡೆದುಬಿಡುತ್ತವೆ. ಇನ್ನು ಕೆಲವೊಮ್ಮೆ ನಿಜ ಜೀವನದ ಘಟನೆಗಳು ಚಲನಚಿತ್ರಗಳಲ್ಲಿ ತೋರಿಸುವ ಘಟನೆಗಳನ್ನು ಕೂಡ ಮೀರಿಸುತ್ತವೆ. ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದ ಒಂದು ವಿಚಿತ್ರವಾದ ಮದುವೆ ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಮದುವೆಯ ಸಮಯದಲ್ಲಿ ವಧು-ವರರು ಹೂವಿನ ಹಾರಗಳನ್ನು ಹಿಡಿದುಕೊಂಡು ಇನ್ನೇನು ಹಾರ ಬದಲಾಯಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಮದುವೆ ಮಂಟಪದೊಳಗೆ ಓಡಿಬಂದ ಯುವಕ ಅಲ್ಲಿದ್ದ ವಧುವಿನ ಹಣೆಗೆ ಸಿಂಧೂರ ಇಟ್ಟಿದ್ದಾನೆ. ಇದನ್ನು ನೋಡಿದ ವರ ಆಘಾತಕ್ಕೊಳಗಾಗಿದ್ದಾನೆ.

ಆ ಮದುವೆಮನೆಗೆ ಬಂದಿದ್ದ ವ್ಯಕ್ತಿಯೊಬ್ಬರು ಅಲ್ಲಿ ನಡೆದ ಸಂಪೂರ್ಣ ಘಟನೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಗೋರಖ್‌ಪುರದ ಬುಧಾತ್‌ನ ಹರ್‌ಪುರದಲ್ಲಿ ನಡೆದ ಮದುವೆ ಈ ರೀತಿಯ ಸಿನಿಮೀಯ ಘಟನೆಗೆ ಸಾಕ್ಷಿಯಾಗಿದೆ. ವರನು ವಧುವಿಗೆ ಹೂಮಾಲೆ ಹಾಕಬೇಕು ಎನ್ನುವಷ್ಟರಲ್ಲಿ ಮುಖನ್ನು ಸ್ಕಾರ್ಫ್​ನಲ್ಲಿ ಮುಚ್ಚಿಕೊಂಡ ಯುವಕನೊಬ್ಬ ಮಂಟಪದೊಳಗೆ ಬಂದು ವಧುವಿನ ಹಣೆಗೆ ಸಿಂಧೂರ ಇಡುತ್ತಾನೆ. ಅದನ್ನು ವಿರೋಧಿಸುವ ಆಕೆ ತನ್ನ ಮುಖವನ್ನು ಮುಚ್ಚಿಕೊಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಬಿಡದ ಆತ ಆಕೆಗೆ ಸಿಂಧೂರ ಇಡುತ್ತಾನೆ.

ಹಾಗೆ ಸಿಂಧೂರವನ್ನಿಟ್ಟ ವ್ಯಕ್ತಿ ವಧುವಿನ ಮಾಜಿ ಪ್ರೇಮಿಯಾಗಿದ್ದು, ಆತನ ಜೊತೆ ಆಕೆ ಬ್ರೇಕಪ್ ಮಾಡಿಕೊಂಡಿದ್ದಳು. ಆತ ಕೆಲವು ತಿಂಗಳ ಹಿಂದೆ ಕೆಲಸದ ನಿಮಿತ್ತ ಊರಿನಿಂದ ಹೊರಗೆ ಹೋಗಿದ್ದ. ಈ ಮಧ್ಯೆ, ಆ ಹುಡುಗಿಯ ಮದುವೆಯನ್ನು ಬೇರೆಯವರ ಜೊತೆ ಮಾಡಲು ನಿರ್ಧರಿಸಲಾಯಿತು. ಆ ವ್ಯಕ್ತಿಗೆ ವಿಷಯ ತಿಳಿದಾಗ, ಅವನು ತನ್ನ ಪ್ರೀತಿಯನ್ನು ಸಿನಿಮೀಯವಾಗಿ ಎಲ್ಲರೆದುರು ಹೇಳಿಕೊಳ್ಳಲು ಬಯಸಿದ.

ಹೀಗಾಗಿ, ಡಿಸೆಂಬರ್ 1ರಂದು ಮದುವೆ ನಡೆಯುತ್ತಿದ್ದಾಗ ಅಲ್ಲಿಗೆ ಬಂದ ಆತ ಬಲವಂತವಾಗಿ ಆಕೆಯ ಹಣೆಗೆ ಸಿಂಧೂರವನ್ನಿಟ್ಟಿದ್ದಾನೆ. ಆಕೆಯ ಮಾಜಿ ಪ್ರೇಮಿಯಿಂದ ಮದುವೆ ಮಂಟಪದಲ್ಲಿ ಗಲಾಟೆ ಸೃಷ್ಟಿಯಾದಾಗ ಕೆಲವು ಕುಟುಂಬ ಸದಸ್ಯರು 112ಗೆ ಕರೆ ಮಾಡಿದರು. ಪೊಲೀಸರಿಗೆ ದೂರನ್ನೂ ನೀಡಿದರು.

ಆತ ಸಿಂಧೂರ ಇಟ್ಟ ಮಾತ್ರಕ್ಕೆ ಆತನೊಂದಿಗೆ ಆ ವಧುವಿನ ಮದುವೆಯಾಗಲಿಲ್ಲ. ಪೊಲೀಸರು ಆ ಯುವಕನನ್ನು ವಶಕ್ಕೆ ಪಡೆದ ಬಳಿಕ ಮಾರನೇ ದಿನ ಬೆಳಗ್ಗೆ ಆ ಯುವತಿ ತನ್ನ ಮನೆಯವರು ನೋಡಿದ ಹುಡುಗನನ್ನೇ ಮದುವೆಯಾಗಿದ್ದಾಳೆ. ಅದೇ ದಿನ ಆ ಯುವಕನನ್ನು ಕೂಡ ಪೊಲೀಸರು ಮನೆಗೆ ಕಳುಹಿಸಿದರು.

ಇದನ್ನೂ ಓದಿ: Shocking News: ಹೋಂ ವರ್ಕ್ ಮಾಡದ ಮಗನ ಕೈ-ಕಾಲು ಕಟ್ಟಿ ಫ್ಯಾನ್​ಗೆ ನೇತು ಹಾಕಿದ ಅಪ್ಪ!

Viral News: ಕೃಷ್ಣನ ವಿಗ್ರಹದ ಮುರಿದ ಕೈಗೆ ಬ್ಯಾಂಡೇಜ್ ಹಾಕಿ; ಅರ್ಚಕನ ಬೇಡಿಕೆಗೆ ವೈದ್ಯರು ಶಾಕ್!

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್