AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗೋಮಾಂಸ ಸಾಗಿಸುತ್ತಿದ್ದ ಆರೋಪ; ವ್ಯಾನ್ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು

ಮಥುರಾದಲ್ಲಿ ವ್ಯಾನ್​ನಲ್ಲಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ ಗ್ರಾಮಸ್ಥರು ರಸ್ತೆ ತಡೆ ನಡೆಸಿದ್ದಾರೆ. ವ್ಯಾನ್ ಚಾಲಕನನ್ನು ಬಿಡುವಂತೆ ಪೊಲೀಸರು ಮನವಿ ಮಾಡಿದರೂ ಕೇಳದೆ ಆತನನ್ನು ಹೊಡೆದು, ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದ್ದಾರೆ.

Viral Video: ಗೋಮಾಂಸ ಸಾಗಿಸುತ್ತಿದ್ದ ಆರೋಪ; ವ್ಯಾನ್ ಚಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 22, 2022 | 5:20 PM

ಮಥುರಾ: ಗೋಮಾಂಸವನ್ನು (Beef) ಸಾಗಿಸುತ್ತಿದ್ದಾನೆ ಎಂಬ ಆರೋಪದಲ್ಲಿ ವ್ಯಾನ್ ಚಾಲಕನನ್ನು ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿ, ಅಮಾನವೀಯವಾಗಿ ವರ್ತಿಸಿರುವ ಆಘಾತಕಾರಿ ಘಟನೆ (Shocking News) ಮಥುರಾದ ಖುಷಿಪುರ ತಿರಹಾ ಗ್ರಾಮದಲ್ಲಿ ನಡೆದಿದೆ. ಮಥುರಾದ ಖುಷಿಪುರ ತಿರಾಹಾ ಬಳಿಯ ಛಟಿಕಾರ ರಾಧಾಕುಂಡ್ ರಸ್ತೆಯಲ್ಲಿ ಪ್ರಾಣಿಗಳ ಮೃತದೇಹಗಳನ್ನು ಸಾಗಿಸುತ್ತಿದ್ದ ವ್ಯಾನ್ ಪಲ್ಟಿಯಾಗಿತ್ತು. ಆಗ ಅದರೊಳಗಿದ್ದ ಪ್ರಾಣಿಗಳ ಹೆಣಗಳು ಹೊರಗೆ ಬಿದ್ದಿದ್ದವು. ಅದನ್ನು ನೋಡಿದ ಸ್ಥಳೀಯರು ಅದು ದನದ ಮಾಂಸ ಎಂದುಕೊಂಡು ವ್ಯಾನ್ ಚಾಲಕನಿಗೆ ಮನಬಂದಂತೆ ಹೊಡೆದಿದ್ದಾರೆ.

ವ್ಯಾನ್​ನಲ್ಲಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ ಗ್ರಾಮಸ್ಥರು ರಸ್ತೆ ತಡೆ ನಡೆಸಿದ್ದಾರೆ. ಆ ಚಾಲಕನನ್ನು ಬಿಡುವಂತೆ ಪೊಲೀಸರು ಮನವಿ ಮಾಡಿದರೂ ಕೇಳದೆ ಆತನನ್ನು ಹೊಡೆದು, ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದ್ದಾರೆ. ಈ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದ್ದರಿಂದ ಆತಂಕಗೊಂಡ ಆ ವ್ಯಾನ್​ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಆದರೆ, ಅವರಲ್ಲಿ ಒಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ.

ಸ್ಥಳೀಯರ ಪ್ರಕಾರ, ವ್ಯಾನ್​ನ ಮುಂದೆ ಚಲಿಸುತ್ತಿದ್ದ ಎಸ್‌ಯುವಿ ಕಾರೊಂದರ ನಿರ್ದೇಶನದಂತೆ ಆ ವ್ಯಾನ್​ ಅನ್ನು ಯಾವುದೋ ಸ್ಥಳಕ್ಕೆ ತೆಗೆದುಕೊಂಡು ಹೋಗಲಾಗುತ್ತಿತ್ತು. ಆದರೆ, ವ್ಯಾನ್ ಪಲ್ಟಿ ಹೊಡೆಯುತ್ತಿದ್ದಂತೆ ಆ ಕಾರು ವೇಗವಾಗಿ ಮುಂದೆ ಹೋಗಿ ನಾಪತ್ತೆಯಾಯಿತು. ಆದರೆ, ಚಾಲಕ ಇದರಲ್ಲಿ ತನ್ನದೇನೂ ತಪ್ಪಿಲ್ಲ ಎಂದು ಹೇಳಿದ್ದು, ಗೋವರ್ಧನ್‌ನ ನೀಮ್‌ಗಾಂವ್‌ನಿಂದ ಸಹರಾನ್‌ಪುರಕ್ಕೆ ಶವಗಳನ್ನು ತೆಗೆದುಕೊಂಡು ಹೋಗುತ್ತಿದ್ದೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ. ರಸ್ತೆಯಲ್ಲಿ ಬಿದ್ದಿದ್ದ ಪ್ರಾಣಿಗಳ ಶವಗಳನ್ನು ತೆಗೆದುಕೊಂಡು ಹೋಗಲಾಗಿದೆ. ಬಂಧಿತ ವ್ಯಕ್ತಿಯನ್ನು ವಿಚಾರಣೆ ನಡೆಸಲಾಗುತ್ತಿದೆ. ಅದು ಯಾವ ಪ್ರಾಣಿಯ ಶವ ಎಂಬುದು ತನಿಖೆ ವೇಳೆ ಸಾಬೀತಾಗಲಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Shocking News: ಹೆಂಡತಿ ಮಟನ್ ಕರಿ ಮಾಡದಿದ್ದಕ್ಕೆ 6 ಬಾರಿ ಪೊಲೀಸರಿಗೆ ಫೋನ್ ಮಾಡಿ ಕಾಟ ಕೊಟ್ಟ ಗಂಡ!

Shocking Video: ಕೆಳಗೆ ಬಿದ್ದ ಬಟ್ಟೆ ತರಲು ಮಗನನ್ನು ಸೀರೆಗೆ ಕಟ್ಟಿ 10ನೇ ಮಹಡಿಯಿಂದ ನೇತಾಡಿಸಿದ ತಾಯಿ!

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್