Viral Video: ಹೀಗೊಂದು ಟ್ವಿಸ್ಟ್​ ಈ ವಿಡಿಯೋಗಿರಬಹುದು ಎಂದು ನೀವು ಊಹಿಸಲಾರಿರಿ

Creative Idea : ನಿಮ್ಮ ತಲೆಗೆ, ಕಲೆಗೆ ಭಾರೀ ಬೇಡಿಕೆ ಇದೆ. ಎಷ್ಟು ಸೃಜನಾತ್ಮಕವಾಗಿ ಯೋಚಿಸುತ್ತೀರಿ ಎನ್ನುವುದರ ಮೇಲೆ ನಿಮ್ಮ ಭವಿಷ್ಯ ರೂಪುಗೊಳ್ಳುವ ಕಾಲ ಇದಾಗಿದೆ. ಅಪ್ಪಟ ಸೃಜನಶೀಲತೆಗೆ ಈ ವಿಡಿಯೋ ಉತ್ತಮ ಉದಾಹರಣೆ.

Viral Video: ಹೀಗೊಂದು ಟ್ವಿಸ್ಟ್​ ಈ ವಿಡಿಯೋಗಿರಬಹುದು ಎಂದು ನೀವು ಊಹಿಸಲಾರಿರಿ
ನಾಳೆ ಅತಿಥಿಗಳು ಬರುವವರಿದ್ದಾರೆ ಒಂದು ಲೀಟರ್ ಜಾಸ್ತಿ ಕೊಡಿ ಅಣ್ಣಾ
Follow us
| Edited By: ಶ್ರೀದೇವಿ ಕಳಸದ

Updated on:Jun 01, 2023 | 10:31 AM

Scarcity : ಅಣ್ಣಾ, ನಾಳೆಯಿಂದ ಒಂದು ಲೀಟರ್ ಜಾಸ್ತಿ ಕೊಡಿ ಮನೆಗೆ ಅತಿಥಿಗಳು ಬರುವವರಿದ್ದಾರೆ ಎಂದು ಮನೆಯೊಡತಿ ಹೇಳಿದಾಗ, ಆಯ್ತು ಎಂದು ಹೇಳುತ್ತಾನೆ. ತುಂಬಿದ ಪಾತ್ರೆಯನ್ನು ತಂದು ಗ್ಯಾಸ್​ ಕಟ್ಟೆಯ ಮೇಲೆ ಇಡುವ ಹೊತ್ತಿಗೆ ಮಗು ಅಳುವ ಶಬ್ದ ಆಕೆ ಕೋಣೆಗೆ ಹೋಗುತ್ತಾಳೆ. ಕಿಟಕಿಯಿಂದ ಬಂದ ಬೆಕ್ಕು ಪಾತ್ರೆಯೊಳಗೆ ಇಣುಕುತ್ತದೆ. ಆದರೆ ಕುಡಿಯುವುದಿಲ್ಲ. ಯಾಕೆ? ಈ ವಿಡಿಯೋ ನೋಡಿ ಹಾಗಿದ್ದರೆ.

ನೀರನ್ನು ಉಳಿಸಿ ಇಲ್ಲವಾದರೆ ಭವಿಷ್ಯದಲ್ಲಿ ಇಂಥ ದಿನಗಳೂ ಬರಬಹದು ಎಂಬ ಹಿನ್ನೆಲೆ ಧ್ವನಿಯೊಂದಿಗೆ ಈ ಪುಟ್ಟ ವಿಡಿಯೋ ಸಂಪನ್ನಗೊಳ್ಳುತ್ತದೆ. ಕೊನೆಯ ತನಕ ನೀವು ಹಾಲು ಎಂದೇ ತಿಳಿದುಕೊಂಡಿರುತ್ತೀರಿ ಅಲ್ಲವೆ? ಮುಂದೊಂದು ದಿನ ಹಾಲು, ಪೆಟ್ರೋಲ್, ಎಣ್ಣೆ, ತುಪ್ಪದಂತೆ ನೀರನ್ನು ಬಳಸುವಂಥ ಕಷ್ಟವನ್ನು ತಂದುಕೊಳ್ಳದಂತೆ ಜವಾಬ್ದಾರಿಯಿಂದ ನಡೆದುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎನ್ನವು ಸಂದೇಶವನ್ನು ಇದು ಸಾರುತ್ತದೆ.

ಇದನ್ನೂ ಓದಿ : Viral: ಎಲಾನ್​ ಮಸ್ಕ್​ ಭಾರತದ ಅಳಿಯನಾಗಲಿದ್ದಾರೆಯೇ?!

ಡಿಜಿಟಲ್​ ಕಂಟೆಂಟ್​ ಕ್ರಿಯೇಷನ್​ ಎನ್ನುವುದು ಈವತ್ತು ದೊಡ್ಡ ಉದ್ಯಮವಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ನಿಮ್ಮ ತಲೆಗೆ, ಕಲೆಗೆ ಭಾರೀ ಬೇಡಿಕೆ ಇದೆ. ಎಷ್ಟು ಸೃಜನಾತ್ಮಕವಾಗಿ ಯೋಚಿಸುತ್ತೀರಿ, ಬರೆಯುತ್ತೀರಿ, ವಿಡಿಯೋ ಕಂಟೆಂಟ್​ ಸೃಷ್ಟಿಸುತ್ತೀರಿ ಎನ್ನುವುದರ ಮೇಲೆ ಭವಿಷ್ಯ ರೂಪುಗೊಳ್ಳುತ್ತದೆ. ಜಾಹೀರಾತು ಕಂಪೆನಿಗಳು, ಡಿಜಿಟಲ್​ ಏಜೆನ್ಸಿಗಳು ನಿಮ್ಮಂಥವರಿಗಾಗಿ ಕಾಯುತ್ತಿರುತ್ತವೆ.

ಇದನ್ನೂ ಓದಿ : Viral Video: 22 ವರ್ಷಗಳ ನಂತರ ಒಡಹುಟ್ಟಿದವರ ಪುನರ್ಮಿಲನ

ತುಂಬಾ ಬುದ್ಧಿವಂತಿಕೆಯಿಂದ ಕೂಡಿದ ಐಡಿಯಾ ಇದಾಗಿದೆ ಆದರೆ ಕೊನೆಯಲ್ಲಿ ಈ ಕಂಪೆನಿಯ ಹೆಸರು ಬರಬಾರದಿತ್ತು ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಕಂಪೆನಿಯ ಜಾಹೀರಾತು ಎಂದು ನೋಡದೆ ಇದನ್ನು ಸೃಜನಶೀಲವಾಗಿ ಮತ್ತು ಸಂದೇಶಾತ್ಮಕವಾಗಿ ನೋಡಿದರೆ ಸಾಕು ಎಂದೂ ಕೆಲವರು ಹೇಳುತ್ತಿದ್ದಾರೆ.

ಕೊನೇತನಕ ಇಂಥದೊಂದು ಟ್ವಿಸ್ಟ್​ ಈ ವಿಡಿಯೋಗೆ ಇರಬಹುದು ಎಂಬ ಕಿಂಚಿತ್​ ಸುಳಿವೂ ನಿಮಗಿರಲಿಲ್ಲ ಅಲ್ಲವೇ, ಏನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

 

Published On - 10:19 am, Thu, 1 June 23

ತಾಜಾ ಸುದ್ದಿ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ
ಯಡಿಯೂರಪ್ಪರನ್ನು ಟೀಕಿಸುವ ನೈತಿಕತೆ ಬಸನಗೌಡ ಪಾಟೀಲ್ ಗಿಲ್ಲ: ರೇಣುಕಾಚಾರ್ಯ