AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೀಗೊಂದು ಟ್ವಿಸ್ಟ್​ ಈ ವಿಡಿಯೋಗಿರಬಹುದು ಎಂದು ನೀವು ಊಹಿಸಲಾರಿರಿ

Creative Idea : ನಿಮ್ಮ ತಲೆಗೆ, ಕಲೆಗೆ ಭಾರೀ ಬೇಡಿಕೆ ಇದೆ. ಎಷ್ಟು ಸೃಜನಾತ್ಮಕವಾಗಿ ಯೋಚಿಸುತ್ತೀರಿ ಎನ್ನುವುದರ ಮೇಲೆ ನಿಮ್ಮ ಭವಿಷ್ಯ ರೂಪುಗೊಳ್ಳುವ ಕಾಲ ಇದಾಗಿದೆ. ಅಪ್ಪಟ ಸೃಜನಶೀಲತೆಗೆ ಈ ವಿಡಿಯೋ ಉತ್ತಮ ಉದಾಹರಣೆ.

Viral Video: ಹೀಗೊಂದು ಟ್ವಿಸ್ಟ್​ ಈ ವಿಡಿಯೋಗಿರಬಹುದು ಎಂದು ನೀವು ಊಹಿಸಲಾರಿರಿ
ನಾಳೆ ಅತಿಥಿಗಳು ಬರುವವರಿದ್ದಾರೆ ಒಂದು ಲೀಟರ್ ಜಾಸ್ತಿ ಕೊಡಿ ಅಣ್ಣಾ
TV9 Web
| Edited By: |

Updated on:Jun 01, 2023 | 10:31 AM

Share

Scarcity : ಅಣ್ಣಾ, ನಾಳೆಯಿಂದ ಒಂದು ಲೀಟರ್ ಜಾಸ್ತಿ ಕೊಡಿ ಮನೆಗೆ ಅತಿಥಿಗಳು ಬರುವವರಿದ್ದಾರೆ ಎಂದು ಮನೆಯೊಡತಿ ಹೇಳಿದಾಗ, ಆಯ್ತು ಎಂದು ಹೇಳುತ್ತಾನೆ. ತುಂಬಿದ ಪಾತ್ರೆಯನ್ನು ತಂದು ಗ್ಯಾಸ್​ ಕಟ್ಟೆಯ ಮೇಲೆ ಇಡುವ ಹೊತ್ತಿಗೆ ಮಗು ಅಳುವ ಶಬ್ದ ಆಕೆ ಕೋಣೆಗೆ ಹೋಗುತ್ತಾಳೆ. ಕಿಟಕಿಯಿಂದ ಬಂದ ಬೆಕ್ಕು ಪಾತ್ರೆಯೊಳಗೆ ಇಣುಕುತ್ತದೆ. ಆದರೆ ಕುಡಿಯುವುದಿಲ್ಲ. ಯಾಕೆ? ಈ ವಿಡಿಯೋ ನೋಡಿ ಹಾಗಿದ್ದರೆ.

ನೀರನ್ನು ಉಳಿಸಿ ಇಲ್ಲವಾದರೆ ಭವಿಷ್ಯದಲ್ಲಿ ಇಂಥ ದಿನಗಳೂ ಬರಬಹದು ಎಂಬ ಹಿನ್ನೆಲೆ ಧ್ವನಿಯೊಂದಿಗೆ ಈ ಪುಟ್ಟ ವಿಡಿಯೋ ಸಂಪನ್ನಗೊಳ್ಳುತ್ತದೆ. ಕೊನೆಯ ತನಕ ನೀವು ಹಾಲು ಎಂದೇ ತಿಳಿದುಕೊಂಡಿರುತ್ತೀರಿ ಅಲ್ಲವೆ? ಮುಂದೊಂದು ದಿನ ಹಾಲು, ಪೆಟ್ರೋಲ್, ಎಣ್ಣೆ, ತುಪ್ಪದಂತೆ ನೀರನ್ನು ಬಳಸುವಂಥ ಕಷ್ಟವನ್ನು ತಂದುಕೊಳ್ಳದಂತೆ ಜವಾಬ್ದಾರಿಯಿಂದ ನಡೆದುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎನ್ನವು ಸಂದೇಶವನ್ನು ಇದು ಸಾರುತ್ತದೆ.

ಇದನ್ನೂ ಓದಿ : Viral: ಎಲಾನ್​ ಮಸ್ಕ್​ ಭಾರತದ ಅಳಿಯನಾಗಲಿದ್ದಾರೆಯೇ?!

ಡಿಜಿಟಲ್​ ಕಂಟೆಂಟ್​ ಕ್ರಿಯೇಷನ್​ ಎನ್ನುವುದು ಈವತ್ತು ದೊಡ್ಡ ಉದ್ಯಮವಾಗಿ ಪರಿಣಮಿಸಿರುವ ಹಿನ್ನೆಲೆಯಲ್ಲಿ ನಿಮ್ಮ ತಲೆಗೆ, ಕಲೆಗೆ ಭಾರೀ ಬೇಡಿಕೆ ಇದೆ. ಎಷ್ಟು ಸೃಜನಾತ್ಮಕವಾಗಿ ಯೋಚಿಸುತ್ತೀರಿ, ಬರೆಯುತ್ತೀರಿ, ವಿಡಿಯೋ ಕಂಟೆಂಟ್​ ಸೃಷ್ಟಿಸುತ್ತೀರಿ ಎನ್ನುವುದರ ಮೇಲೆ ಭವಿಷ್ಯ ರೂಪುಗೊಳ್ಳುತ್ತದೆ. ಜಾಹೀರಾತು ಕಂಪೆನಿಗಳು, ಡಿಜಿಟಲ್​ ಏಜೆನ್ಸಿಗಳು ನಿಮ್ಮಂಥವರಿಗಾಗಿ ಕಾಯುತ್ತಿರುತ್ತವೆ.

ಇದನ್ನೂ ಓದಿ : Viral Video: 22 ವರ್ಷಗಳ ನಂತರ ಒಡಹುಟ್ಟಿದವರ ಪುನರ್ಮಿಲನ

ತುಂಬಾ ಬುದ್ಧಿವಂತಿಕೆಯಿಂದ ಕೂಡಿದ ಐಡಿಯಾ ಇದಾಗಿದೆ ಆದರೆ ಕೊನೆಯಲ್ಲಿ ಈ ಕಂಪೆನಿಯ ಹೆಸರು ಬರಬಾರದಿತ್ತು ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಕಂಪೆನಿಯ ಜಾಹೀರಾತು ಎಂದು ನೋಡದೆ ಇದನ್ನು ಸೃಜನಶೀಲವಾಗಿ ಮತ್ತು ಸಂದೇಶಾತ್ಮಕವಾಗಿ ನೋಡಿದರೆ ಸಾಕು ಎಂದೂ ಕೆಲವರು ಹೇಳುತ್ತಿದ್ದಾರೆ.

ಕೊನೇತನಕ ಇಂಥದೊಂದು ಟ್ವಿಸ್ಟ್​ ಈ ವಿಡಿಯೋಗೆ ಇರಬಹುದು ಎಂಬ ಕಿಂಚಿತ್​ ಸುಳಿವೂ ನಿಮಗಿರಲಿಲ್ಲ ಅಲ್ಲವೇ, ಏನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

 

Published On - 10:19 am, Thu, 1 June 23

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?