AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಷ್ಯಾದ ಹಸುಗಳ ಕಣ್ಣಿಗೆ ವಿಆರ್ ಗ್ಲಾಸ್; ಹಾಲು ನೀಡುವ ಸಾಮರ್ಥ್ಯದಲ್ಲಿ ಶೇ. 40ರಷ್ಟು ಹೆಚ್ಚಳ

ಮೈಂಡ್‌ಸೆಟ್ ಎಚ್2 ಎಂಬ ಬಳಕೆದಾರರು ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ, ಹಸುಗಳಿಗೆ ವಿಆರ್ ಗ್ಲಾಸ್‌ಗಳನ್ನು ತೊಡಿಸಿರುವುದನ್ನು ಕಾಣಬಹುದು. ವಿ ಆರ್​​ ಕನ್ನಡಕದಲ್ಲಿ ಹಚ್ಚ ಹಸುರಾದ ಸುಂದರ ಬಯಲಿನ ದೃಶ್ಯವನ್ನು ಪ್ಲೇ ಮಾಡಲಾಗುತ್ತದೆ. ಇದರಿಂದಾಗಿ ಹಸುಗಳಿಗೆ ತಾವು ಹಚ್ಚ ಹಸಿರಿನ ಸುಂದರ ಬಯಲಿನಲ್ಲಿ ವಾಸಿಸುತ್ತಿದ್ದೇವೆ ಎಂಬ ಭ್ರಮೆಯನ್ನು ನೀಡುತ್ತದೆ.

Viral Video: ರಷ್ಯಾದ ಹಸುಗಳ ಕಣ್ಣಿಗೆ ವಿಆರ್ ಗ್ಲಾಸ್; ಹಾಲು ನೀಡುವ ಸಾಮರ್ಥ್ಯದಲ್ಲಿ ಶೇ. 40ರಷ್ಟು ಹೆಚ್ಚಳ
VR glasses are worn on Russian cowsImage Credit source: instagram
ಅಕ್ಷತಾ ವರ್ಕಾಡಿ
|

Updated on:Jan 13, 2024 | 11:07 AM

Share

ವಿ ಆರ್​​ ಕನ್ನಡಕವನ್ನು ಸಾಮಾನ್ಯವಾಗಿ ವಿಡಿಯೋ ಗೇಮ್​​​​​ ಸಮಯದಲ್ಲಿ ಅಥವಾ ಮನರಂಜನೆಗಾಗಿ ಬಳಸಲಾಗುತ್ತದೆ. ಆದರೆ ರಷ್ಯಾದ ಕೃಷಿ ಇಲಾಖೆಯು ಅದರ ವಿಶಿಷ್ಟ ಬಳಕೆಯನ್ನು ತೋರಿಸಿದೆ. ರಷ್ಯಾದ ಕೃಷಿ ಇಲಾಖೆಯ ಪ್ರಕಾರ, ಹಸುವಿಗೆ ವಿಆರ್ ಕನ್ನಡಕವನ್ನು ಹಾಕುವುದರಿಂದ , ಹಾಲು ನೀಡುವ ಸಾಮರ್ಥ್ಯವು ಶೇಕಡಾ 40ರಷ್ಟು ಹೆಚ್ಚಾಗುತ್ತದೆ ಎಂದು ತಿಳಿದುಬಂದಿದೆ.

ವಿಆರ್ ಕನ್ನಡಕದ ಪ್ರಯೋಜನವೇನು?

ಮೈಂಡ್‌ಸೆಟ್ ಎಚ್2 ಎಂಬ ಬಳಕೆದಾರರು ಅಪ್‌ಲೋಡ್ ಮಾಡಿದ ವೀಡಿಯೊದಲ್ಲಿ, ಹಸುಗಳಿಗೆ ವಿಆರ್ ಗ್ಲಾಸ್‌ಗಳನ್ನು ತೊಡಿಸಿರುವುದನ್ನು ಕಾಣಬಹುದು. ಇದರಿಂದಾಗಿ ಹಸುಗಳಿಗೆ ತಾವು ಹಚ್ಚ ಹಸಿರಿನ ಸುಂದರ ಬಯಲಿನಲ್ಲಿ ವಾಸಿಸುತ್ತಿದ್ದೇವೆ ಎಂಬ ಭ್ರಮೆಯನ್ನು ನೀಡುತ್ತದೆ. ಇದರಿಂದಾಗಿ ಹಸುಗಳ ಮನಸ್ಥಿತಿಯನ್ನು ಸುಧಾರಿಸುತ್ತದೆ. ಜೊತೆಗೆ ಹಾಲು ನೀಡುವ ಸಾಮರ್ಥ್ಯವು ಶೇಕಡಾ 40ರಷ್ಟು ಹೆಚ್ಚಾಗುತ್ತದೆ ಎಂದು ರಷ್ಯಾದ ಕೃಷಿ ಇಲಾಖೆಯ ಸಂಶೋಧಕರು ತಿಳಿಸಿದ್ದಾರೆ. ವಿ ಆರ್​​ ಕನ್ನಡಕದಲ್ಲಿ ಹಚ್ಚ ಹಸುರಾದ ಸುಂದರ ಬಯಲಿನ ದೃಶ್ಯವನ್ನು ಪ್ಲೇ ಮಾಡಲಾಗುತ್ತದೆ.

View this post on Instagram

A post shared by MindSet H2 (@mindset_h2)

ಇದನ್ನೂ ಓದಿ: 3 ಲಕ್ಷಕ್ಕೂ ಹೆಚ್ಚು ನಗದು ಹೊಂದಿದ್ದ ನೋಟಿನ ಕಂತನ್ನು ಹರಿದು ತಿಂದ ಸಾಕು ನಾಯಿ

ವಿಆರ್ ಸೆಟ್ ಏಕೆ ಬೇಕಿತ್ತು?

ರಷ್ಯಾದಲ್ಲಿ ಇದು ತುಂಬಾ ಶೀತ ವಾತಾವರಣವಾಗಿರುವುದರಿಂದ ಹಸುಗಳು ಹೆಚ್ಚಿನ ಶಾಖ ಅಥವಾ ಅತಿಯಾದ ಶೀತವನ್ನು ಸಹಿಸುವುದಿಲ್ಲ. ಈ ಕಾರಣಕ್ಕಾಗಿ, ರಷ್ಯಾದಲ್ಲಿ ಹಸುಗಳಿಗೆ ವಿಆರ್ ಕನ್ನಡಕವನ್ನು ಧರಿಸುವಂತೆ ಮಾಡಲಾಗುತ್ತಿದೆ. ಇದರಿಂದ ಅವು ಹುಲ್ಲು ಮತ್ತು ತೆರೆದ ಮೈದಾನದಲ್ಲಿವೆ ಮತ್ತು ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ ಎಂಬ ಭ್ರಮೆಯಲ್ಲಿರುತ್ತವೆ. ಈ ಸಂಪೂರ್ಣ ಪ್ರಕ್ರಿಯೆಯು ಹಸುಗಳನ್ನು ಸುರಕ್ಷಿತವಾಗಿರಿಸುತ್ತದೆ ಮತ್ತು ಅವುಗಳ ಹಾಲು ನೀಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:05 am, Sat, 13 January 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ