Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ದೋಸೆ ಪ್ಲೇಟ್​ ಒಂದೇ ಕೈಯಲ್ಲಿ; ವಿದ್ಯಾರ್ಥಿ ಭವನದ ಸರ್ವರ್ ಕೌಶಲಕ್ಕೆ ಆನಂದ ಮಹೀಂದ್ರಾ ಮೆಚ್ಚುಗೆ

Masala Dosa : ಸರ್ವರ್ ಕೌಶಲವನ್ನು ಮೆಚ್ಚುವಂಥದ್ಧೇ. ಆದರೆ ಒಂದರ ಮೇಲೊಂದು ಪ್ಲೇಟ್​ ಇಟ್ಟಾಗ ದೋಸೆ ಶುಚಿಯಾಗಿರುತ್ತವೆಯೇ? ಎಂದು ಕೇಳಿದ್ಧಾರೆ ಕೆಲವರು. ಇನ್ನೂ ಕೆಲವರು ಅದ್ಭುತ ಎಂದಿದ್ದಾರೆ.

16 ದೋಸೆ ಪ್ಲೇಟ್​ ಒಂದೇ ಕೈಯಲ್ಲಿ; ವಿದ್ಯಾರ್ಥಿ ಭವನದ ಸರ್ವರ್ ಕೌಶಲಕ್ಕೆ ಆನಂದ ಮಹೀಂದ್ರಾ ಮೆಚ್ಚುಗೆ
ವಿದ್ಯಾರ್ಥಿ ಭವನದ ದೋಸೆ
Follow us
ಶ್ರೀದೇವಿ ಕಳಸದ
|

Updated on: Feb 01, 2023 | 4:05 PM

Viral News : ಕೆಲಸವನ್ನು ಕೆಲಸವಂತಷ್ಟೇ ಮಾಡಿದರೆ ಇದೆಲ್ಲ ಸಾಧ್ಯವಾಗದು. ಕೆಲಸದ ಬಗ್ಗೆ ಪ್ರೀತಿ ಇದ್ಧಾಗ ಕೌಶಲ ತಂತಾನೇ ಹುಟ್ಟಿಕೊಳ್ಳುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಈ ಸರ್ವರ್​ 16 ದೋಸೆಯ ಪ್ಲೇಟ್​ಗಳನ್ನು ಬ್ಯಾಲೆನ್ಸ್​ ಮಾಡುವ ರೀತಿ ನೋಡಿದ ಯಾರಿಗೂ ಅಚ್ಚರಿ ಮೂಡಿಸುತ್ತದೆ. ಆನಂದ ಮಹೀಂದ್ರಾ ಈತನ ಕೌಶಲಕ್ಕೆ ಮಾರುಹೋಗಿ ಈ ಟ್ವೀಟ್​ ಮಾಡಿದ್ದಾರೆ.

ಹೋಟೆಲುಗಳಿಗೆ ಹೋದಾಗ ನೀವು ಗಮನಿಸಿರುತ್ತೀರಿ. ಹತ್ತು ಜನ ಸರ್ವರ್​​ಗಳಲ್ಲಿ ಒಬ್ಬರಾದರೂ ನಿಮ್ಮ ಗಮನ ಸೆಳೆದಿರುತ್ತಾರೆ. ತಿಂಡಿಗಳ ಲಿಸ್ಟ್ ಹೇಳುವ ರೀತಿ ಇರಬಹುದು. ಅಡುಗೆಮನೆಗೆ ಆರ್ಡರ್​ ಮಾಡುವ ರೀತಿ ಇರಬಹುದು ಹೀಗೆ. ಆದರೆ 16 ದೋಸೆ ತಟ್ಟೆಗಳನ್ನು ಹೀಗೆ ಒಂದೇ ಏಟಿಗೆ ತಂದು ಗ್ರಾಹಕರಿಗೆ ಕೊಡುವುದೆಂದರೆ? ಆಶ್ಚರ್ಯವೇ ತಾನೆ?

ಇದನ್ನೂ ಓದಿ : ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್

ಈ ವಿಡಿಯೋ ಅನ್ನು ಈಗಾಗಲೇ 1.5 ಮಿಲಿಯನ್​ ಜನರು ನೋಡಿದ್ದಾರೆ. ಸರ್ವರ್​​ಗಳು ಹುಟ್ಟಿನಿಂದಲೇ ಎಂಜಿನಿಯರ್​ ಸರ್​. ಅವರಿಗೆ ಅರಿವಿಲ್ಲದೆಯೇ ವಿಜ್ಞಾನ ಅವರೊಳಗೆ ಇಳಿದಿರುತ್ತದೆ. ಸುಡುವ ತಟ್ಟೆಗಳನ್ನು ನಿಭಾಯಿಸುವುದು ಅವರಿಗೆ ಗೊತ್ತಿದೆ ಎಂದು ಒಬ್ಬರು ಹೇಳಿದ್ದಾರೆ. ಬಹುಶಃ ದೇವರು ಇವನಿಗೆಂದೇ ಉದ್ದನೆಯ ಕೈಗಳನ್ನು ರೂಪಿಸಿರಬಹುದು ಎಂದಿದ್ದಾರೆ ಇನ್ನೊಬ್ಬರು.

ಇದನ್ನೂ ಓದಿ : ಎಲ್ಲವನ್ನೂ ಮಾರಿದ! ದೊಡ್ಡ ವಾಟರ್ ಟ್ಯಾಂಕೊಂದನ್ನು ಐಷಾರಾಮಿ ಮನೆಯನ್ನಾಗಿಸಲು

ಇವರ ಕೌಶಲ ತಂತ್ರವ ಎಲ್ಲವೂ ಮೆಚ್ಚುವಂಥದ್ದು. ಆದರೆ ಒಂದರ ಮೇಲೊಂದ ಪ್ಲೇಟ್​ ಇಟ್ಟಾಗ ದೋಸೆ ಶುಚಿಯಾಗಿರುತ್ತದೆ ಎನ್ನಲು ಏನು ಗ್ಯಾರಂಟಿ ಎಂದು ಕೇಳಿದ್ದಾರೆ ಮತ್ತೊಬ್ಬರು. ಓಹೋ ಇದು ಬೆಂಗಳೂರಿನ ಗಾಂಧೀಬಜಾರ್​ದಲ್ಲಿರುವ ವಿದ್ಯಾರ್ಥಿ ಭವನ ಹೋಟೆಲ್ ಎಂದಿದ್ದಾರೆ ಮಗದೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Daily Horoscope: ಕರ್ಮಕಾರಕ ಶನಿ ಕುಂಭದಿಂದ ಮೀನ ರಾಶಿಯತ್ತ ಪ್ರವೇಶ
Daily Horoscope: ಕರ್ಮಕಾರಕ ಶನಿ ಕುಂಭದಿಂದ ಮೀನ ರಾಶಿಯತ್ತ ಪ್ರವೇಶ
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?