16 ದೋಸೆ ಪ್ಲೇಟ್​ ಒಂದೇ ಕೈಯಲ್ಲಿ; ವಿದ್ಯಾರ್ಥಿ ಭವನದ ಸರ್ವರ್ ಕೌಶಲಕ್ಕೆ ಆನಂದ ಮಹೀಂದ್ರಾ ಮೆಚ್ಚುಗೆ

Masala Dosa : ಸರ್ವರ್ ಕೌಶಲವನ್ನು ಮೆಚ್ಚುವಂಥದ್ಧೇ. ಆದರೆ ಒಂದರ ಮೇಲೊಂದು ಪ್ಲೇಟ್​ ಇಟ್ಟಾಗ ದೋಸೆ ಶುಚಿಯಾಗಿರುತ್ತವೆಯೇ? ಎಂದು ಕೇಳಿದ್ಧಾರೆ ಕೆಲವರು. ಇನ್ನೂ ಕೆಲವರು ಅದ್ಭುತ ಎಂದಿದ್ದಾರೆ.

16 ದೋಸೆ ಪ್ಲೇಟ್​ ಒಂದೇ ಕೈಯಲ್ಲಿ; ವಿದ್ಯಾರ್ಥಿ ಭವನದ ಸರ್ವರ್ ಕೌಶಲಕ್ಕೆ ಆನಂದ ಮಹೀಂದ್ರಾ ಮೆಚ್ಚುಗೆ
ವಿದ್ಯಾರ್ಥಿ ಭವನದ ದೋಸೆ
Follow us
|

Updated on: Feb 01, 2023 | 4:05 PM

Viral News : ಕೆಲಸವನ್ನು ಕೆಲಸವಂತಷ್ಟೇ ಮಾಡಿದರೆ ಇದೆಲ್ಲ ಸಾಧ್ಯವಾಗದು. ಕೆಲಸದ ಬಗ್ಗೆ ಪ್ರೀತಿ ಇದ್ಧಾಗ ಕೌಶಲ ತಂತಾನೇ ಹುಟ್ಟಿಕೊಳ್ಳುತ್ತದೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಈ ಸರ್ವರ್​ 16 ದೋಸೆಯ ಪ್ಲೇಟ್​ಗಳನ್ನು ಬ್ಯಾಲೆನ್ಸ್​ ಮಾಡುವ ರೀತಿ ನೋಡಿದ ಯಾರಿಗೂ ಅಚ್ಚರಿ ಮೂಡಿಸುತ್ತದೆ. ಆನಂದ ಮಹೀಂದ್ರಾ ಈತನ ಕೌಶಲಕ್ಕೆ ಮಾರುಹೋಗಿ ಈ ಟ್ವೀಟ್​ ಮಾಡಿದ್ದಾರೆ.

ಹೋಟೆಲುಗಳಿಗೆ ಹೋದಾಗ ನೀವು ಗಮನಿಸಿರುತ್ತೀರಿ. ಹತ್ತು ಜನ ಸರ್ವರ್​​ಗಳಲ್ಲಿ ಒಬ್ಬರಾದರೂ ನಿಮ್ಮ ಗಮನ ಸೆಳೆದಿರುತ್ತಾರೆ. ತಿಂಡಿಗಳ ಲಿಸ್ಟ್ ಹೇಳುವ ರೀತಿ ಇರಬಹುದು. ಅಡುಗೆಮನೆಗೆ ಆರ್ಡರ್​ ಮಾಡುವ ರೀತಿ ಇರಬಹುದು ಹೀಗೆ. ಆದರೆ 16 ದೋಸೆ ತಟ್ಟೆಗಳನ್ನು ಹೀಗೆ ಒಂದೇ ಏಟಿಗೆ ತಂದು ಗ್ರಾಹಕರಿಗೆ ಕೊಡುವುದೆಂದರೆ? ಆಶ್ಚರ್ಯವೇ ತಾನೆ?

ಇದನ್ನೂ ಓದಿ : ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್

ಈ ವಿಡಿಯೋ ಅನ್ನು ಈಗಾಗಲೇ 1.5 ಮಿಲಿಯನ್​ ಜನರು ನೋಡಿದ್ದಾರೆ. ಸರ್ವರ್​​ಗಳು ಹುಟ್ಟಿನಿಂದಲೇ ಎಂಜಿನಿಯರ್​ ಸರ್​. ಅವರಿಗೆ ಅರಿವಿಲ್ಲದೆಯೇ ವಿಜ್ಞಾನ ಅವರೊಳಗೆ ಇಳಿದಿರುತ್ತದೆ. ಸುಡುವ ತಟ್ಟೆಗಳನ್ನು ನಿಭಾಯಿಸುವುದು ಅವರಿಗೆ ಗೊತ್ತಿದೆ ಎಂದು ಒಬ್ಬರು ಹೇಳಿದ್ದಾರೆ. ಬಹುಶಃ ದೇವರು ಇವನಿಗೆಂದೇ ಉದ್ದನೆಯ ಕೈಗಳನ್ನು ರೂಪಿಸಿರಬಹುದು ಎಂದಿದ್ದಾರೆ ಇನ್ನೊಬ್ಬರು.

ಇದನ್ನೂ ಓದಿ : ಎಲ್ಲವನ್ನೂ ಮಾರಿದ! ದೊಡ್ಡ ವಾಟರ್ ಟ್ಯಾಂಕೊಂದನ್ನು ಐಷಾರಾಮಿ ಮನೆಯನ್ನಾಗಿಸಲು

ಇವರ ಕೌಶಲ ತಂತ್ರವ ಎಲ್ಲವೂ ಮೆಚ್ಚುವಂಥದ್ದು. ಆದರೆ ಒಂದರ ಮೇಲೊಂದ ಪ್ಲೇಟ್​ ಇಟ್ಟಾಗ ದೋಸೆ ಶುಚಿಯಾಗಿರುತ್ತದೆ ಎನ್ನಲು ಏನು ಗ್ಯಾರಂಟಿ ಎಂದು ಕೇಳಿದ್ದಾರೆ ಮತ್ತೊಬ್ಬರು. ಓಹೋ ಇದು ಬೆಂಗಳೂರಿನ ಗಾಂಧೀಬಜಾರ್​ದಲ್ಲಿರುವ ವಿದ್ಯಾರ್ಥಿ ಭವನ ಹೋಟೆಲ್ ಎಂದಿದ್ದಾರೆ ಮಗದೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್