AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಆಸ್ಪತ್ರೆಯಲ್ಲಿ ಬೆತ್ತಲೆ ಮಹಿಳೆಗೆ ವಾರ್ಡ್​ ಬಾಯ್​ನಿಂದ​ ಆಪರೇಷನ್; ವಾಟ್ಸಾಪ್​ನಲ್ಲಿ ಶೇರ್ ಆಯ್ತು ವಿಡಿಯೋ!

ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ತಾನು ಆಪರೇಷನ್ ಮಾಡಿದ ವೀಡಿಯೊವನ್ನು ಹಂಚಿಕೊಂಡಿದ್ದು, ಇದನ್ನು ಅನೇಕ ಜನರು ನೋಡಿದ್ದಾರೆ. ಬಳಿಕ, ಇದು ಭಾರೀ ಆಕ್ರೋಶಕ್ಕೆ ಕಾರಣವಾಯಿತು. ಈ ವಿಡಿಯೋ ನೋಡಿದವರು ಆರೋಗ್ಯ ಇಲಾಖೆ ಈ ವಿಷಯದ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಬೆತ್ತಲೆ ಮಹಿಳೆಗೆ ವಾರ್ಡ್​ ಬಾಯ್​ನಿಂದ​ ಆಪರೇಷನ್; ವಾಟ್ಸಾಪ್​ನಲ್ಲಿ ಶೇರ್ ಆಯ್ತು ವಿಡಿಯೋ!
ಖಾಸಗಿ ಆಸ್ಪತ್ರೆಯಲ್ಲಿ ಬೆತ್ತಲೆ ಮಹಿಳೆಗೆ ವಾರ್ಡ್​ ಬಾಯ್​ನಿಂದ​ ಆಪರೇಷನ್
ಸುಷ್ಮಾ ಚಕ್ರೆ
|

Updated on: Aug 15, 2024 | 8:16 PM

Share

ಬಸ್ತಿ: ಉತ್ತರ ಪ್ರದೇಶದ ಬಸ್ತಿಯಲ್ಲಿ ನಾಚಿಕೆಗೇಡಿನ ಘಟನೆಯೊಂದು ಬೆಳಕಿಗೆ ಬಂದಿದ್ದು, ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್ ಮಹಿಳೆಯೊಬ್ಬರನ್ನು ಬೆತ್ತಲೆಯಾಗಿ ಬೆಡ್ ಮೇಲೆ ಮಲಗಿಸಿ, ಆಪರೇಷನ್ ನಡೆಸುತ್ತಿರುವಾಗ ಅದನ್ನು ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾನೆ. ವಾರ್ಡ್ ಬಾಯ್ ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದು, ಇದನ್ನು ಅನೇಕ ಜನರು ನೋಡಿದ್ದಾರೆ ಮತ್ತು ಇದು ಆಕ್ರೋಶಕ್ಕೆ ಕಾರಣವಾಯಿತು ಮತ್ತು ನಂತರ ಆರೋಗ್ಯ ಇಲಾಖೆ ಈ ವಿಷಯದ ಬಗ್ಗೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಯಿತು.

ವಾರ್ಡ್ ಬಾಯ್ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರಿಗೆ ಸಹಾಯ ಮಾಡುತ್ತಿದ್ದು, ಮಹಿಳೆ ಆಪರೇಷನ್ ಥಿಯೇಟರ್‌ನಲ್ಲಿ ಬೆತ್ತಲೆಯಾಗಿ ಮಲಗಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ. ವಾರ್ಡ್ ಬಾಯ್ ತನ್ನ ಕಾರ್ಯವಿಧಾನದ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾನೆ ಮತ್ತು ಆ ವೀಡಿಯೊವನ್ನು ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾನೆ.

ಇದನ್ನೂ ಓದಿ: ದೇವಸ್ಥಾನದಲ್ಲಿ ಗಂಟೆ ಬಾರಿಸೋಕು ಮೊದಲು ಈ ವಿಡಿಯೋ ನೋಡಿ

ವೀಡಿಯೋ ನೋಡಿದ ಜನರು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ವಾರ್ಡ್ ಬಾಯ್‌ನ ನಾಚಿಕೆಗೇಡಿನ ಕೃತ್ಯಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಹಾರ್ದಿಯಾ ಮೂಲದ ಬಸ್ತಿ ಕೇರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕಣ್ಣಿನ ಕೇಂದ್ರದಲ್ಲಿ ಈ ಘಟನೆ ಸಂಭವಿಸಿದ್ದು, ಶಸ್ತ್ರಚಿಕಿತ್ಸೆಗಾಗಿ ಮಹಿಳೆಯನ್ನು ದಾಖಲಿಸಲಾಗಿತ್ತು.

ಇದನ್ನೂ ಓದಿ: ಬಿಹಾರದ ಬಾಬಾ ಸಿದ್ಧೇಶ್ವರನಾಥ ದೇವಸ್ಥಾನದಲ್ಲಿ ಕಾಲ್ತುಳಿತ; 7 ಮಂದಿಯನ್ನು ಬಲಿ ಪಡೆದ ವಿಡಿಯೋ ವೈರಲ್

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಬಸ್ತಿ ಕೇರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ನೇತ್ರ ಕೇಂದ್ರದ ನಿರ್ದೇಶಕ ಡಾ. ಸಂಜಯ್ ಕುಮಾರ್ ಅವರ ಸೂಚನೆ ಮೇರೆಗೆ ಮಹಿಳೆಗೆ ಶಸ್ತ್ರಚಿಕಿತ್ಸೆ ಮಾಡಿರುವುದಾಗಿ ವಾರ್ಡ್ ಬಾಯ್ ಹೇಳಿದ್ದಾನೆ. ಆದರೆ, ಅಲ್ಲಿನ ವೈದ್ಯರು ಈ ಬಗ್ಗೆ ನಮಗೆ ತಿಳಿದೇ ಇಲ್ಲ ಎಂದಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಆರೋಗ್ಯ ಇಲಾಖೆ ತಂಡ ರಚಿಸಿದ್ದು, ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು