AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝೌಲಿ; ಜಗತ್ತಿನಲ್ಲಿಯೇ ಇದು ಅತ್ಯಂತ ಕಠಿಣ, ಅಸಾಧಾರಣವಾದ ನೃತ್ಯ ಪ್ರಕಾರ

African Dance : ಗುರೋ ಸಂಸ್ಕೃತಿಯಲ್ಲಿ ಶುಭಕಾರ್ಯ ಮತ್ತು ಅಂತ್ಯಕ್ರಿಯೆಯ ಸಂದರ್ಭದಲ್ಲಿ ಈ ನೃತ್ಯ ಪ್ರದರ್ಶಿಸಲಾಗುತ್ತದೆ. ಇದು ಅತ್ಯಂತ ಸಂಕೀರ್ಣವಾದ ಪಶ್ಚಿಮ ಆಫ್ರಿಕಾದ ಬುಡಕಟ್ಟು ನೃತ್ಯಪ್ರಕಾರ. ನೋಡಿ ವಿಡಿಯೋ.

ಝೌಲಿ; ಜಗತ್ತಿನಲ್ಲಿಯೇ ಇದು ಅತ್ಯಂತ ಕಠಿಣ, ಅಸಾಧಾರಣವಾದ ನೃತ್ಯ ಪ್ರಕಾರ
ಪಶ್ಚಿಮ ಆಫ್ರಿಕದ ಗುರೋ ಜನಾಂಗದ ಝೌಲಿ ನೃತ್ಯ
TV9 Web
| Edited By: ಶ್ರೀದೇವಿ ಕಳಸದ|

Updated on:Jan 13, 2023 | 5:35 PM

Share

Viral : ಝೌಲಿ ಈ ನೃತ್ಯ ಪ್ರಕಾರವು ಅತ್ಯಂತ ಚಮತ್ಕಾರಿಕ ಪ್ರಸ್ತುತಿಯಿಂದ ಕೂಡಿರುವ ಪ್ರದರ್ಶನ. ಜಗತ್ತಿನಲ್ಲಿಯೇ ಅತ್ಯಂತ ಕಠಿಣವಾದ ನೃತ್ಯ ಪ್ರಕಾರವೆಂದಾಗ ಸಾಮಾನ್ಯವಾಗಿ ಕಣ್ಣಮುಂದೆ ಬರುವುದು ಬ್ಯಾಲೆ ಅಥವಾ ಆಕ್ರೋ. ಆದರೆ ಇವೆರಡಕ್ಕಿಂತ ಪಶ್ಚಿಮ ಆಫ್ರಿಕಾದ ಐವರಿ ಕೋಸ್ಟ್​ನ ಗುರೋ ಬುಡಕಟ್ಟು ಜನಾಂಗವು ಪ್ರದರ್ಶಿಸುವ ಈ ಸಾಂಪ್ರದಾಯಿಕ ನೃತ್ಯ ಝೌಲಿ ಅಸಾಧಾರಣವಾದ ಪ್ರಕಾರ. ನೋಡಿ ವಿಡಿಯೋ. ಪರವಶಗೊಳಿಸದೇ ಇರದು.

ಇದನ್ನೂ ಓದಿ : ‘ಮೂಡ್​ ಬನಾಲಿಯಾ’ ಅಮೃತಾ ಫಡ್ನವೀಸ್​ ವಿಡಿಯೋ ವೈರಲ್

ಮದುವೆ, ಶುಭಕಾರ್ಯ, ದೀಕ್ಷೆ ಮತ್ತು ಅಂತ್ಯಕ್ರಿಯೆಯಂಥ ಸಂದರ್ಭದಲ್ಲಿ ಈ ನೃತ್ಯವನ್ನು ಪ್ರದರ್ಶಿಸಲಾಗುತ್ತದೆ. ಇದು ಅತ್ಯಂತ ಸಂಕೀರ್ಣವಾದಂಥ ನೃತ್ಯ ಎಂದು ನೆಟ್ಟಿಗರು ಬೆರಗಿನಿಂದ ನೋಡುತ್ತಿದ್ದಾರೆ. ಕಲಾವಿದರ ಹೆಜ್ಜೆಗಳ ಚಲನೆ ಅಷ್ಟೊಂದು ವಿಸ್ಮಯಕಾರಿಯಾಗಿವೆ. ಸಾಮಾನ್ಯವಾಗಿ ಈ ನೃತ್ಯವನ್ನು ಪುರುಷರು ಗುಂಪಿನಲ್ಲಿ ಪ್ರದರ್ಶಿಸುತ್ತಾರೆ. ಪ್ರಾಣಿ, ಪಕ್ಷಿಗಳ ಮರದ ಮುಖವಾಡ ಮತ್ತು ಚಿಪ್ಪು, ಗಂಟೆಗಳಿಂದ ಅಲಂಕರಿಸಿದ ವೇಷಭೂಷಣಗಳನ್ನು ಧರಿಸುತ್ತಾರೆ. ಈ ಎಲ್ಲ ವಿನ್ಯಾಸಗಳಿಗೂ ಅವುಗಳದೇ ಆದ ಅರ್ಥಗಳಿವೆ.

ಇದನ್ನೂ ಓದಿ : ವಧುವನ್ನು ಎತ್ತಿಕೊಂಡು ಮಂಟಪದಿಂದ ಇಳಿಯುತ್ತಿರುವಾಗ ಆಯತಪ್ಪಿ ಬಿದ್ದ ವರನ ವಿಡಿಯೋ ವೈರಲ್

ಗುರೋ ಸಂಸ್ಕೃತಿಯ ಬಹುಮುಖ್ಯ ಅಂಗವಾದ ಈ ಝೌಲಿ ನೃತ್ಯವನ್ನು ಪೀಳಿಗೆಯಿಂದ ಪೀಳಿಗೆಗೆ ರವಾನಿಸುವುದೇ ಈ ಜನಾಂಗದ ಉದ್ದೇಶ. ಅದಕ್ಕಾಗಿ ಕಠಿಣವಾದ ತರಬೇತಿಗೆ ನೃತ್ಯಗಾರರನ್ನು ಒಳಪಡಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ರಂಗಭೂಮಿ, ನೃತ್ಯ ಮತ್ತು ಸಮಕಾಲೀನ ಕಲಾಭಿವ್ಯಕ್ತಿಯಲ್ಲಿ ಈ ನೃತ್ಯಪ್ರಕಾರವನ್ನು ಅಳವಡಿಸಿಕೊಳ್ಳಾಗುತ್ತಿದೆ. ಗುರೋ ಜನಾಂಗದ ಸಂಸ್ಕೃತಿ ಇತಿಹಾಸದ ಬಗ್ಗೆ ಆಸಕ್ತರಿಗೆ ಕಲಿಸಲು ಶೈಕ್ಷಣಿಕವಾಗಿಯೂ ಅಳವಡಿಸುವ ಪ್ರಯತ್ನಗಳೂ ಯಶಸ್ವಿಯಾಗಿ ನಡೆಯುತ್ತಿವೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 5:25 pm, Fri, 13 January 23

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್