AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಸಮುದ್ರ ತೀರಕ್ಕೆ ಬಂದ ‘ಲಂಟಾನಾ ಆನೆಗಳು’! ನೋಡಿ ವೈರಲ್ ವಿಡಿಯೋ

Lantana : ಚೆನ್ನೈನ ಸಮುದ್ರ ತೀರದಲ್ಲಿ ಈ ಆನೆಗಳು, ಆನೆಮರಿಗಳ ಹಿಂಡು ನಿಮಗಾಗಿ ಕಾಯುತ್ತಿದೆ. ಅರೆ! ಆನೆಗಳು ಸಮುದ್ರ ತೀರದಲ್ಲಿ? ಅಚ್ಚರಿಯಾಗ್ತಿದೆಯಾ... ಇವುಗಳನ್ನು ಇಲ್ಲಿಗೆ ಕರೆತರುವಲ್ಲಿ 70 ಬುಡಕಟ್ಟು ಕಲಾವಿದರ ಶ್ರಮ ಇದೆ.

ತಮಿಳುನಾಡಿನ ಸಮುದ್ರ ತೀರಕ್ಕೆ ಬಂದ ‘ಲಂಟಾನಾ ಆನೆಗಳು’! ನೋಡಿ ವೈರಲ್ ವಿಡಿಯೋ
ಲಂಟಾನಾ ಗಿಡದಿಂದ ನಿರ್ಮಿಸಿದ ಆನೆಗಳು
TV9 Web
| Edited By: |

Updated on:Jan 16, 2023 | 12:46 PM

Share

Viral : ಜೀವವೈವಿಧ್ಯಕ್ಕೆ ವಿನಾಶಕಾರಿ ಎಂದೆನ್ನಿಸಿಕೊಂಡಿರುವ ಕಾಡಿನ ಕಳೆ ಲಂಟಾನಾ (Lantana) ಈಗ ಕಲಾಪ್ರಪಂಚದ ಮೂಲಕ ವಿಶ್ವದ ಗಮನ ಸೆಳೆಯುತ್ತ ಮತ್ತೆ ಸುದ್ದಿಯಲ್ಲಿದೆ. ಅದು ಹೇಗೆ ಎಂದು ಯೋಚಿಸುತ್ತಿದ್ದೀರಾ? ಚೆನ್ನೈನ ಸಮುದ್ರ ತೀರಕ್ಕೆ ಹೋದರೆ ಬೃಹದಾಕಾರದ ಆನೆಗಳು, ಆನೆಮರಿಗಳು ನಿಮ್ಮನ್ನು ಕೈಬೀಸಿ ಕರೆಯುತ್ತವೆ. ಅಷ್ಟೇ ಅಲ್ಲ, ಅದ್ಭುತ ಲೋಕಕ್ಕೆ ಕರೆದೊಯ್ಯುತ್ತವೆ. ಶಾಂತಿ ಮತ್ತು ಸೌಹಾರ್ದತೆಯ ದ್ಯೋತಕವಾಗಿ ಈ ಕಲಾಕೃತಿಗಳನ್ನು ನಿರ್ಮಿಸಲಾಗಿದೆ. ಈ ಕಲಾಕೃತಿಗಳ ವಿಶೇಷವನ್ನು ಈ ವಿಡಿಯೋ ನೋಡಿಯೇ ತಿಳಿದುಕೊಳ್ಳಿ.

ತಮಿಳುನಾಡಿನ ಮುದುಮಲೈನ ಸುಮಾರು 70 ಬುಡಕಟ್ಟು ಕಲಾವಿದರ ತಂಡವು ಲಂಟಾನಾ ಕಟ್ಟಿಗೆಗಳಿಂದ ಈ ಸುಂದರವಾದಂಥ ಆನೆಗಳನ್ನು ನಿರ್ಮಿಸಿದೆ. ಪರಿಣತ ಕಲಾತಜ್ಞರ ತಂಡವು ಈ ಕಲಾವಿದರಿಗೆ ಮಾರ್ಗದರ್ಶನ ಮಾಡಿದೆ. ಈತನಕ ಈ ವಿಡಿಯೋ ಅನ್ನು 77,000ಕ್ಕಿಂತಲೂ ಹೆಚ್ಚು ಜನರು ನೋಡಿದ್ದಾರೆ. 2,331 ಜನರು ಇಷ್ಟಪಟ್ಟಿದ್ಧಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಇಲ್ಲಿ ಕಚೋರಿ ತಿನ್ನಬೇಕೆಂದರೆ ರಸಾಯನಶಾಸ್ತ್ರ ಅಧ್ಯಯನ ಮಾಡುವುದು ಕಡ್ಡಾಯ!

ಇದು ಬಹಳ ಅದ್ಭುತವಾಗಿದೆ. ಈ ಪ್ರಯತ್ನ ನಿಜಕ್ಕೂ ಶ್ಲಾಘನಾರ್ಹ. ಈ ಕಲಾಕೃತಿಗಳನ್ನು ವಸ್ತುಸಂಗ್ರಹಾಲಯದಲ್ಲಿ ಸಂರಕ್ಷಿಸಿ ಇಡಬೇಕು. ಯುವಜನರಲ್ಲಿ ಕಲೆಯ ಬಗ್ಗೆ ಅಭಿರುಚಿ ತುಂಬಲು ಇವು ಸಹಕಾರಿಯಾಗಿವೆ. ಹಾಗೆಯೇ ಬುಡುಕಟ್ಟು ಜನರು ಈ ಕಲೆಯಲ್ಲಿ ಹೆಚ್ಚು ಪಾಲ್ಗೊಂಡಷ್ಟೂ ಅವರಿಗೆ ಇದು ಆದಾಯ ಮೂಲವೂ ಆಗಬಹುದು. ಹಾಗಾಗಿ ಕಲಾಶಾಲೆಗಳನ್ನು ಸ್ಥಾಪಿಸಿ ಎಂದು ಕೆಲವರು ಸಲಹೆ ನೀಡಿದ್ಧಾರೆ.

ಇದನ್ನೂ ಓದಿ : ಜಿಮ್​ಪ್ರಿಯೆ! ಮದುವೆಯಲ್ಲಿ ಪುಲ್​ಅಪ್ಸ್​ ತೆಗೆದ ವಧುವಿನ ವಿಡಿಯೋ ವೈರಲ್

ಐಎಸ್​ ಅಧಿಕಾರಿ ಸುಪ್ರಿಯಾ ಸಾಹು ಈ ವಿಡಿಯೋ ಅನ್ನು ಟ್ವೀಟ್ ಮಾಡಿದ್ದಾರೆ. ದೇಶದ ಅರಣ್ಯ ಸಂಪತ್ತಿಗೆ ಮಾರಕವಾಗಿ ಕಾಡುತ್ತಿರುವ ಈ ಲಂಟಾನಾ ಚೆನ್ನೈನಲ್ಲಿ ಕೂಡ ಸಾಕಷ್ಟು ಪ್ರಮಾಣದಲ್ಲಿ ಬೆಳೆದಿದೆ. ಈಗಾಗಲೇ 12,000 ಹೆಕ್ಟೇರ್​ ಪ್ರದೇಶದಲ್ಲಿ ಈ ಕಳೆಗಿಡವನ್ನು ನಾಶಮಾಡಲಾಗಿದೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:44 pm, Mon, 16 January 23

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು