AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಡಿನ ಮಧ್ಯೆ ಸಂಚರಿಸುತ್ತಿದ್ದ ರೈಲನ್ನು ಸುತ್ತುವರಿದ ಕಾಡ್ಗಿಚ್ಚು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಝಮೊರಾ ವಾಯುವ್ಯ ಪ್ರಾಂತ್ಯದ ಟ್ರ್ಯಾಕ್ ಬಳಿ ಕಾಡಿಗೆ ಬೆಂಕಿ ಹತ್ತಿಕೊಂಡಿದ್ದು, ಮ್ಯಾಡ್ರಿಡ್‌ನಿಂದ ಫೆರೋಲ್‌ಗೆ ಹೋಗುತ್ತಿದ್ದ ರೈಲು ಕಾಡಿನ ಮಧ್ಯೆ ಸಿಲುಕಿಕೊಂಡಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಕಾಡಿನ ಮಧ್ಯೆ ಸಂಚರಿಸುತ್ತಿದ್ದ ರೈಲನ್ನು ಸುತ್ತುವರಿದ ಕಾಡ್ಗಿಚ್ಚು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ರೈಲನ್ನು ಸುತ್ತುವರಿದ ಕಾಡ್ಗಿಚ್ಚು
TV9 Web
| Edited By: |

Updated on:Jul 19, 2022 | 12:16 PM

Share

ಜನರು ಅರಾಮವಾಗಿ ಪ್ರಯಾಣ ಮಾಡುತ್ತಿದ್ದ ರೈಲು ಅರಣ್ಯ ಪ್ರದೇಶವೊಂದರಲ್ಲಿ ನಿಲ್ಲಿಸಿದೆ. ಜನರು ಏನಾಯ್ತು ಎಂದು ಹೊರನೋಡಿದಾಗ ಇಡೀ ಕಾಡಿಗೇ ಕಾಡು ಧಗಧಗ ಎಂದು ಹೊತ್ತಿ ಉರಿಯುತ್ತಿತ್ತು. ಇದನ್ನು ಕಂಡ ಪ್ರಯಾಣಿಕರು ಗಾಬರಿಗೊಂದಿದ್ದಾರೆ. ಈ ದೃಶ್ಯಾವಳಿಯಲ್ಲಿ ಮೊಬೈಲ್​ ಕ್ಯಾಮರಾದ ಮೂಲಕ ಸೆರೆಹಿಡಿಯಲಾಗಿದ್ದು, ಸದ್ಯ ಕಾಡು ಬೆಂಕಿಗೆ ಆಹುತಿಯಾಗುತ್ತಿರುವ ವಿಡಿಯೋ ಸಾಮಾಜಿಕ ಜಾಳತಾಣದಲ್ಲಿ ವೈರಲ್ ಆಗುತ್ತಿದೆ. ರೈಲಿನ ಒಳಗಿಂದ ಜನರು ಕಾಡಿಗೆ ಬೆಂಕಿ ಹತ್ತಿಕೊಂಡಿರುವುದನ್ನು ನೋಡಿ ಗಾಬರಿಗೊಂಡಿರುವುದನ್ನು ವೈರಲ್ ವಿಡಿಯೋ (Viral Video) ತೋರಿಸುತ್ತದೆ.

ಝಮೊರಾ ವಾಯುವ್ಯ ಪ್ರಾಂತ್ಯದ ಟ್ರ್ಯಾಕ್ ಬಳಿ ಕಾಡಿಗೆ ಬೆಂಕಿ ಹತ್ತಿಕೊಂಡು ಬೆಂಕಿಯ ಜ್ವಾಲೆ ಮೇಲಕ್ಕೆ ಚಿಮ್ಮಿದೆ. ಈ ವೇಳೆ ಮ್ಯಾಡ್ರಿಡ್‌ನಿಂದ ಫೆರೋಲ್‌ಗೆ ಹೋಗುತ್ತಿದ್ದ ರೈಲು ಕಾಡಿನ ಮಧ್ಯೆ ಸಿಲುಕಿಕೊಂಡಿದ್ದು, ಕಾಡ್ಗಿಚ್ಚು ರೈಲನ್ನು ಸುತ್ತುವರಿದಿರುವುದನ್ನು ನೋಡಿ ಪ್ರಯಾಣಿಕರು ಗಾಬರಿಗೊಂಡರು. ಕೆಲವರು ಉದ್ವಿಗ್ನ ಕ್ಷಣದ ದೃಶ್ಯಾವಳಿಗಳನ್ನು ಮೊಬೈಲ್ ಮೂಲಕ ಸೆರೆಹಿಡಿದರು.

ವೈರಲ್ ವಿಡಿಯೋದಲ್ಲಿ ಇರುವಂತೆ, ಕ್ಯಾಮರಾವನ್ನು ಬಲಭಾಗಕ್ಕೆ ಕೊಂಡೊಯ್ದಾಗ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದೆ. ಅದೇ ಕ್ಯಾಮರಾವನ್ನು ಎಡಭಾಗಕ್ಕೆ ಕೊಂಡೊಯ್ದಾಗಲೂ ಅದೇ ಮಾದರಿಯಲ್ಲಿ ಬೆಂಕಿ ಹತ್ತಿಕೊಂಡು ಹೊತ್ತಿ ಉರಿಯುವುದನ್ನು ಕಾಣಬಹುದು.

ಘಟನೆ ಬಗ್ಗೆ ಅರಿತ ರೈಲ್ವೇ ಇಲಾಖೆ, ಬೆಂಕಿಯ ಕುರಿತು ಎಚ್ಚರಿಕೆಯನ್ನು ನೀಡಿದ್ದಾರೆ. ಇದರ ಜೊತೆಗೆ ಒಟೆರೊ ಡಿ ಬೋಡಾಸ್ ಮತ್ತು ಝಮೊರಾ ನಡುವಿನ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸೂಚಿಸಲಾಗಿದೆ. ಮುಂದಿನ ಸೂಚನೆ ಬರುವವರೆಗೂ ಎಲ್ಲಾ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಮೂಲ ನಿಲ್ದಾಣಗಳಿಂದ ಈಗಾಗಲೇ ನಿರ್ಗಮಿಸಿದ ರೈಲು ಪ್ರಯಾಣಿಕರಿಗಾಗಿ ಝಮೊರಾ ಮತ್ತು ಸನಾಬ್ರಿಯಾ AV ನಿಲ್ದಾಣಗಳ ನಡುವೆ ಪರ್ಯಾಯ ರಸ್ತೆ ಸಾರಿಗೆ ಸೇವೆಯನ್ನು ಆಯೋಜಿಸಿದೆ ಎಂದು ರೆನ್ಫೆ ಟ್ವೀಟ್ ಮಾಡಿದೆ.

ಉತ್ತರ ಭಾರತ, ಪಾಕಿಸ್ತಾನವನ್ನು ಕಾಡಿದ್ದ ಶಾಖದ ಅಲೆ ಯುರೋಪ್​ಗೂ ಕಾಲಿಟ್ಟಿದ್ದು, ಫ್ರಾನ್ಸ್​, ಪೋರ್ಚುಗಲ್, ಸ್ಪೇನ್ ಮತ್ತು ಗ್ರೀಸ್​ನಲ್ಲಿ ಕಾಡಿಗೆ ಬೆಂಕಿ ಹತ್ತಿಕೊಂಡಿದೆ. ಕಾಡ್ಗಿಚ್ಚಿಗೆ ಸಾವಿರಾರು ಹೆಕ್ಟೇರ್ ಅರಣ್ಯ ಪ್ರದೇಶಗಳು ನಾಶವಾಗಿವೆ. ಬೆಂಕಿ ನಂದಿಸುವ ವೇಳೆ ಅಗ್ನಿಶಾಮಕ ದಳದ ಹಲವು ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಹವಾಮಾನ ಬದಲಾವಣೆಯೇ ಈ ದುರ್ಘಟನೆಗೆ ಕಾರಣ ಎಂದು ವಿಜ್ಞಾನಿಗಳು ಹೇಳಿದ್ದು, ಪರಿಸ್ಥಿತಿ ಮತ್ತಷ್ಟು ಅಪಾಯಕಾರಿಯಾಗುವ ಬಗ್ಗೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಸ್ಪೇನ್​ನಲ್ಲಿ 40 ಡಿಗ್ರಿ ಸೆಲ್ಸಿಯಸ್​ಗಿಂತ ಹೆಚ್ಚನ ತಾಪಮಾನ ದಾಖಲಾಗಿದ್ದು, ಶಾಖದ ಅಲೆಯಿಂದಾಗಿ ಕನಿಷ್ಠ 360 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸರ್ಕಾರಿ ಕಾರ್ಲೋಸ್ ಹೆಲ್ತ್ ಇನ್ಸ್ಟಿಟ್ಯೂಟ್ ಅನ್ನು ಉಲ್ಲೇಖಿಸಿ ಲಾ ವ್ಯಾನ್​ಗಾರ್ಡಿಯಾ ಪತ್ರಿಕೆ ವರದಿ ಮಾಡಿದೆ.

Published On - 12:16 pm, Tue, 19 July 22

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ