AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಬ್​ನಲ್ಲಿ ಬಂದು ಸೇತುವೆ ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ ಕಾರು ಚಾಲಕ

ಕ್ಯಾಬ್​​ನಲ್ಲಿ ಬಂದಿದ್ದ ಮಹಿಳೆಯ ಆತಂಕಕಾರಿ ವರ್ತನೆಯನ್ನು ಗಮನಿಸಿದ ಚಾಲಕ ತಕ್ಷಣವೇ ಪೊಲೀಸರಿಗೆ ಕರೆ ಮಾಡಿದ್ದಾನೆ. ಬಳಿಕ ಮಹಿಳೆ ಅಟಲ್ ಸೇತುವಿನ ಬಳಿ ಕಾರು ನಿಲ್ಲಿಸಲು ಹೇಳಿದ್ದು, ಮಹಿಳೆ ಇದ್ದಕ್ಕಿದ್ದಂತೆ ಸಮುದ್ರಕ್ಕೆ ಹಾರಲು ಮುಂದಾಗಿದ್ದಾಳೆ. ಈ ವೇಳೆ ಅಲ್ಲಿದ್ದ ಕ್ಯಾಬ್​ ಡ್ರೈವರ್​​​ ಮಹಿಳೆಯ ಜುಟ್ಟು ಹಿಡಿದು ಎಳೆದಿದ್ದು, ಪೊಲೀಸರು ಸೇರಿ ಮಹಿಳೆಯನ್ನು ಸುರಕ್ಷಿತವಾಗಿ ಹೊರತಂದಿದ್ದಾರೆ.

ಕ್ಯಾಬ್​ನಲ್ಲಿ ಬಂದು ಸೇತುವೆ ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ ಕಾರು ಚಾಲಕ
ಅಕ್ಷತಾ ವರ್ಕಾಡಿ
|

Updated on:Aug 17, 2024 | 3:44 PM

Share

ಮುಂಬೈ: ಸೇತುವೆಯಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಮಹಿಳೆಯನ್ನು ರೀಮಾ ಮುಖೇಶ್ ಪಟೇಲ್(56) ಎಂದು ಗುರುತಿಸಲಾಗಿದ್ದು, ಇವರು ಅಟಲ್ ಸೇತು ಎಂದೂ ಕರೆಯಲ್ಪಡುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‍ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಲು ಯತ್ನಿಸಿದ್ದಾರೆ. ಆದರೆ ಮಹಿಳೆಯನ್ನು ಕ್ಯಾಬ್ ಡ್ರೈವರ್​​ ಮತ್ತು ಪೊಲೀಸ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಆ.16ರಂದು ಸಂಜೆ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳೀಯ ಅಧಿಕಾರಿಗಳು ಈ ವಿಡಿಯೋವನ್ನು ಬಿಡುಗಡೆ ಮಾಡಿದ್ದಾನೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಸಿಸಿಟಿವಿ ವೀಡಿಯೋದಲ್ಲಿ ಅಟಲ್ ಸೇತುವಿನ ಸುರಕ್ಷತಾ ತಡೆಗೋಡೆಯ ಮೇಲೆ ಮಹಿಳೆ ಕುಳಿತಿರುವುದು ಕಂಡುಬಂದಿದೆ. ಕ್ಯಾಬ್​​ನಲ್ಲಿ ಬಂದಿದ್ದ ಮಹಿಳೆಯ ಆತಂಕಕಾರಿ ವರ್ತನೆಯನ್ನು ಗಮನಿಸಿದ ಚಾಲಕ ತಕ್ಷಣವೇ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾನೆ. ಮಹಿಳೆ ಇದ್ದಕ್ಕಿದ್ದಂತೆ ಸಮುದ್ರಕ್ಕೆ ಹಾರಲು ಮುಂದಾಗಿದ್ದು, ಈ ವೇಳೆ ಅಲ್ಲಿದ್ದ ಕ್ಯಾಬ್​ ಡ್ರೈವರ್​​​ ಆಕೆಯನ್ನು ಹಿಡಿದುಕೊಂಡಿದ್ದಾನೆ. ಬಳಿಕ ಪೊಲೀಸರು ಸೇರಿ ಮಹಿಳೆಯನ್ನು ಸುರಕ್ಷಿತವಾಗಿ ಎಳೆದೊಯ್ಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ‌Richard Lugner: 2 ತಿಂಗಳ ಹಿಂದಷ್ಟೇ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯನೇರ್ ನಿಧನ

ಮಹಿಳೆಯ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? ಎಂಬುದರ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. @CPMumbaiPolice ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಇಂದು (ಆ.17) ಬೆಳಗ್ಗೆ 1.47ಕ್ಕೆ ಹಂಚಿಕೊಂಡಿರುವ ವಿಡಿಯೋ ಇದೀಗಾಗಲೇ 3ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:43 pm, Sat, 17 August 24

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!