AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಬ್​ನಲ್ಲಿ ಬಂದು ಸೇತುವೆ ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ ಕಾರು ಚಾಲಕ

ಕ್ಯಾಬ್​​ನಲ್ಲಿ ಬಂದಿದ್ದ ಮಹಿಳೆಯ ಆತಂಕಕಾರಿ ವರ್ತನೆಯನ್ನು ಗಮನಿಸಿದ ಚಾಲಕ ತಕ್ಷಣವೇ ಪೊಲೀಸರಿಗೆ ಕರೆ ಮಾಡಿದ್ದಾನೆ. ಬಳಿಕ ಮಹಿಳೆ ಅಟಲ್ ಸೇತುವಿನ ಬಳಿ ಕಾರು ನಿಲ್ಲಿಸಲು ಹೇಳಿದ್ದು, ಮಹಿಳೆ ಇದ್ದಕ್ಕಿದ್ದಂತೆ ಸಮುದ್ರಕ್ಕೆ ಹಾರಲು ಮುಂದಾಗಿದ್ದಾಳೆ. ಈ ವೇಳೆ ಅಲ್ಲಿದ್ದ ಕ್ಯಾಬ್​ ಡ್ರೈವರ್​​​ ಮಹಿಳೆಯ ಜುಟ್ಟು ಹಿಡಿದು ಎಳೆದಿದ್ದು, ಪೊಲೀಸರು ಸೇರಿ ಮಹಿಳೆಯನ್ನು ಸುರಕ್ಷಿತವಾಗಿ ಹೊರತಂದಿದ್ದಾರೆ.

ಕ್ಯಾಬ್​ನಲ್ಲಿ ಬಂದು ಸೇತುವೆ ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ ಕಾರು ಚಾಲಕ
ಅಕ್ಷತಾ ವರ್ಕಾಡಿ
|

Updated on:Aug 17, 2024 | 3:44 PM

Share

ಮುಂಬೈ: ಸೇತುವೆಯಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಮಹಿಳೆಯನ್ನು ರೀಮಾ ಮುಖೇಶ್ ಪಟೇಲ್(56) ಎಂದು ಗುರುತಿಸಲಾಗಿದ್ದು, ಇವರು ಅಟಲ್ ಸೇತು ಎಂದೂ ಕರೆಯಲ್ಪಡುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‍ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಲು ಯತ್ನಿಸಿದ್ದಾರೆ. ಆದರೆ ಮಹಿಳೆಯನ್ನು ಕ್ಯಾಬ್ ಡ್ರೈವರ್​​ ಮತ್ತು ಪೊಲೀಸ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಆ.16ರಂದು ಸಂಜೆ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳೀಯ ಅಧಿಕಾರಿಗಳು ಈ ವಿಡಿಯೋವನ್ನು ಬಿಡುಗಡೆ ಮಾಡಿದ್ದಾನೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಸಿಸಿಟಿವಿ ವೀಡಿಯೋದಲ್ಲಿ ಅಟಲ್ ಸೇತುವಿನ ಸುರಕ್ಷತಾ ತಡೆಗೋಡೆಯ ಮೇಲೆ ಮಹಿಳೆ ಕುಳಿತಿರುವುದು ಕಂಡುಬಂದಿದೆ. ಕ್ಯಾಬ್​​ನಲ್ಲಿ ಬಂದಿದ್ದ ಮಹಿಳೆಯ ಆತಂಕಕಾರಿ ವರ್ತನೆಯನ್ನು ಗಮನಿಸಿದ ಚಾಲಕ ತಕ್ಷಣವೇ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾನೆ. ಮಹಿಳೆ ಇದ್ದಕ್ಕಿದ್ದಂತೆ ಸಮುದ್ರಕ್ಕೆ ಹಾರಲು ಮುಂದಾಗಿದ್ದು, ಈ ವೇಳೆ ಅಲ್ಲಿದ್ದ ಕ್ಯಾಬ್​ ಡ್ರೈವರ್​​​ ಆಕೆಯನ್ನು ಹಿಡಿದುಕೊಂಡಿದ್ದಾನೆ. ಬಳಿಕ ಪೊಲೀಸರು ಸೇರಿ ಮಹಿಳೆಯನ್ನು ಸುರಕ್ಷಿತವಾಗಿ ಎಳೆದೊಯ್ಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ‌Richard Lugner: 2 ತಿಂಗಳ ಹಿಂದಷ್ಟೇ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯನೇರ್ ನಿಧನ

ಮಹಿಳೆಯ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? ಎಂಬುದರ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. @CPMumbaiPolice ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಇಂದು (ಆ.17) ಬೆಳಗ್ಗೆ 1.47ಕ್ಕೆ ಹಂಚಿಕೊಂಡಿರುವ ವಿಡಿಯೋ ಇದೀಗಾಗಲೇ 3ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:43 pm, Sat, 17 August 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು