AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಬ್​ನಲ್ಲಿ ಬಂದು ಸೇತುವೆ ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ ಕಾರು ಚಾಲಕ

ಕ್ಯಾಬ್​​ನಲ್ಲಿ ಬಂದಿದ್ದ ಮಹಿಳೆಯ ಆತಂಕಕಾರಿ ವರ್ತನೆಯನ್ನು ಗಮನಿಸಿದ ಚಾಲಕ ತಕ್ಷಣವೇ ಪೊಲೀಸರಿಗೆ ಕರೆ ಮಾಡಿದ್ದಾನೆ. ಬಳಿಕ ಮಹಿಳೆ ಅಟಲ್ ಸೇತುವಿನ ಬಳಿ ಕಾರು ನಿಲ್ಲಿಸಲು ಹೇಳಿದ್ದು, ಮಹಿಳೆ ಇದ್ದಕ್ಕಿದ್ದಂತೆ ಸಮುದ್ರಕ್ಕೆ ಹಾರಲು ಮುಂದಾಗಿದ್ದಾಳೆ. ಈ ವೇಳೆ ಅಲ್ಲಿದ್ದ ಕ್ಯಾಬ್​ ಡ್ರೈವರ್​​​ ಮಹಿಳೆಯ ಜುಟ್ಟು ಹಿಡಿದು ಎಳೆದಿದ್ದು, ಪೊಲೀಸರು ಸೇರಿ ಮಹಿಳೆಯನ್ನು ಸುರಕ್ಷಿತವಾಗಿ ಹೊರತಂದಿದ್ದಾರೆ.

ಕ್ಯಾಬ್​ನಲ್ಲಿ ಬಂದು ಸೇತುವೆ ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ ಕಾರು ಚಾಲಕ
ಅಕ್ಷತಾ ವರ್ಕಾಡಿ
|

Updated on:Aug 17, 2024 | 3:44 PM

Share

ಮುಂಬೈ: ಸೇತುವೆಯಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಮಹಿಳೆಯನ್ನು ರೀಮಾ ಮುಖೇಶ್ ಪಟೇಲ್(56) ಎಂದು ಗುರುತಿಸಲಾಗಿದ್ದು, ಇವರು ಅಟಲ್ ಸೇತು ಎಂದೂ ಕರೆಯಲ್ಪಡುವ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‍ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಲು ಯತ್ನಿಸಿದ್ದಾರೆ. ಆದರೆ ಮಹಿಳೆಯನ್ನು ಕ್ಯಾಬ್ ಡ್ರೈವರ್​​ ಮತ್ತು ಪೊಲೀಸ್ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಆ.16ರಂದು ಸಂಜೆ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳೀಯ ಅಧಿಕಾರಿಗಳು ಈ ವಿಡಿಯೋವನ್ನು ಬಿಡುಗಡೆ ಮಾಡಿದ್ದಾನೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಸಿಸಿಟಿವಿ ವೀಡಿಯೋದಲ್ಲಿ ಅಟಲ್ ಸೇತುವಿನ ಸುರಕ್ಷತಾ ತಡೆಗೋಡೆಯ ಮೇಲೆ ಮಹಿಳೆ ಕುಳಿತಿರುವುದು ಕಂಡುಬಂದಿದೆ. ಕ್ಯಾಬ್​​ನಲ್ಲಿ ಬಂದಿದ್ದ ಮಹಿಳೆಯ ಆತಂಕಕಾರಿ ವರ್ತನೆಯನ್ನು ಗಮನಿಸಿದ ಚಾಲಕ ತಕ್ಷಣವೇ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾನೆ. ಮಹಿಳೆ ಇದ್ದಕ್ಕಿದ್ದಂತೆ ಸಮುದ್ರಕ್ಕೆ ಹಾರಲು ಮುಂದಾಗಿದ್ದು, ಈ ವೇಳೆ ಅಲ್ಲಿದ್ದ ಕ್ಯಾಬ್​ ಡ್ರೈವರ್​​​ ಆಕೆಯನ್ನು ಹಿಡಿದುಕೊಂಡಿದ್ದಾನೆ. ಬಳಿಕ ಪೊಲೀಸರು ಸೇರಿ ಮಹಿಳೆಯನ್ನು ಸುರಕ್ಷಿತವಾಗಿ ಎಳೆದೊಯ್ಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ‌Richard Lugner: 2 ತಿಂಗಳ ಹಿಂದಷ್ಟೇ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯನೇರ್ ನಿಧನ

ಮಹಿಳೆಯ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? ಎಂಬುದರ ಬಗ್ಗೆ ಹೆಚ್ಚಿನ ವಿವರಗಳಿಗಾಗಿ ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. @CPMumbaiPolice ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಇಂದು (ಆ.17) ಬೆಳಗ್ಗೆ 1.47ಕ್ಕೆ ಹಂಚಿಕೊಂಡಿರುವ ವಿಡಿಯೋ ಇದೀಗಾಗಲೇ 3ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:43 pm, Sat, 17 August 24

Follow Us
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ