AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಹಿಳೆಯೊಬ್ಬಳ ಐಡಿಯಾಕ್ಕೆ ಮತ್ತೊಬ್ಬ ಮಹಿಳೆ ಆಸ್ಪತ್ರೆಗೆ ದಾಖಲು!

ಮಹಿಳೆಯೊಬ್ಬರು ತಮ್ಮ ಮನಸ್ಸಿಗೆ ಹೊಳೆದ ಐಡಿಯಾವನ್ನು ಎಸ್ಕಲೇಟರ್​ನಲ್ಲಿ ಪ್ರಯೋಗಿಸಿದ ಪರಿಣಾಮ ಎಸ್ಕಲೇಟರ್​ ಮೂಲಕ ಕೆಳಗಡೆಗೆ ಹೋಗುತ್ತಿದ್ದ ಮಹಿಳೆ ನೇರವಾಗಿ ಆಸ್ಪತ್ರೆಗೆ ಹೋಗುವಂತಾಗಿದೆ.

Viral Video: ಮಹಿಳೆಯೊಬ್ಬಳ ಐಡಿಯಾಕ್ಕೆ ಮತ್ತೊಬ್ಬ ಮಹಿಳೆ ಆಸ್ಪತ್ರೆಗೆ ದಾಖಲು!
ಮಹಿಳೆಯೊಬ್ಬಳ ಐಡಿಯಾಕ್ಕೆ ಮತ್ತೊಬ್ಬ ಮಹಿಳೆ ಆಸ್ಪತ್ರೆಗೆ ದಾಖಲು
TV9 Web
| Edited By: Rakesh Nayak Manchi|

Updated on:Sep 04, 2022 | 5:23 PM

Share

ಕೆಲವರ ಐಡಿಯಾಗಳಿಂದ ಸಂಭವಿಸುವ ಅವಘಡಗಳಿಗೆ ಮತ್ತೊಬ್ಬರು ಬಲಿಯಾಗುವುದು ಅಪರೂಪಕ್ಕೊಂದು ಅಲ್ಲೊಂದು ಇಲ್ಲೊಂದು ನಡೆಯುತ್ತಿರುತ್ತದೆ. ಇದೀಗ ಮಹಿಳೆಯೊಬ್ಬರು ತಮ್ಮ ಮನಸ್ಸಿಗೆ ಹೊಳೆದ ಐಡಿಯಾವನ್ನು ಎಸ್ಕಲೇಟರ್​ನಲ್ಲಿ ಪ್ರಯೋಗಿಸಿದ ಪರಿಣಾಮ ಎಸ್ಕಲೇಟರ್​ ಮೂಲಕ ಕೆಳಗಡೆಗೆ ಹೋಗುತ್ತಿದ್ದ ಮಹಿಳೆ ನೇರವಾಗಿ ಆಸ್ಪತ್ರೆಗೆ ಹೋಗುವಂತಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.

ಇಬ್ಬರು ಮಹಿಳೆಯರು ಲಗೇಜ್​ಗಳನ್ನು ಹಿಡಿದುಕೊಂಡು ಕೆಳಗಿನ ಮಹಡಿಗೆ ಹೋಗಲು ಮುಂದಾಗಿದ್ದಾರೆ. ಇದನ್ನು ಹಿಡಿದುಕೊಂಡು ಹೋಗಲು ಸಾಧ್ಯವಾಗದ ಹಿನ್ನೆಲೆ ಮಹಿಳೆಯೊಬ್ಬರು ತಮ್ಮ ಸೂಟ್ಕೇಸ್ ಅನ್ನು ಎಸ್ಕಲೇಟರ್​ನಲ್ಲಿ ಇಟ್ಟು ಸಾಗಿಸುವ ಪ್ರಯತ್ನ ಮಾಡಿದ್ದಾರೆ. ಕಳಮುಖವಾಗಿ ಹೋಗುತ್ತಿದ್ದ ಹಿನ್ನೆಲೆ ಬ್ಯಾಗ್ ಪಲ್ಟಿ ಹೊಡೆದುಕೊಂಡೇ ವೇಗವಾಗಿ ಕೆಳಗಡೆ ಹೋಗಿದೆ. ಈ ವೇಳೆ ಅದೇ ಎಸ್ಕಲೇಟರ್​ನಲ್ಲಿ ಹೋಗುತ್ತಿದ್ದ ಮಹಿಳೆಗೆ ಗುದ್ದಿ ಆಕೆ ಜಾರಿ ಬೀಳುವಂತೆ ಮಾಡಿದೆ. ಘಟನೆಯಲ್ಲಿ ಮಹಿಳೆತೀವ್ರ ಗಾಯಗೊಂಡಂತೆ ವಿಡಿಯೋದಲ್ಲಿ ಕಾಣುತ್ತಿದ್ದು, ಆಕೆಯ ನೆರವಿಗೆ ಬಂದ ಒಂದಷ್ಟು ಮಂದಿ ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ.

ವಿಡಿಯೋವನ್ನು Tansu YEGEN ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಕೇವಲ 14 ಸೆಕೆಂಡ್​ಗಳಿರುವ ಈ ವಿಡಿಯೋ ಇದುವರೆಗೆ 1.28 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದಿದ್ದು, 2 ಸಾವಿರಕ್ಕೂ ಹೆಚ್ಚು ಲೈಕ್​ಗಳು ಬಂದಿವೆ. ವಿಡಿಯೋ ನೋಡಿದ ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಣೆ ಮಾಡಲು ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Sun, 4 September 22

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು