AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಮಹಿಳೆ ಹಸಿವಾದಾಗಲೆಲ್ಲ ಮನೆಯ ಗೋಡೆಯನ್ನೇ ಕೊರೆದು ತಿನ್ನುತ್ತಾಳೆ

ಪ್ರಪಂಚದಲ್ಲಿ ಅನೇಕ ರೀತಿಯ ಆಹಾರಪ್ರೇಮಿಗಳನ್ನು ನೀವು ನೋಡಿರಬಹುದು, ಆದರೆ ಹಸಿವಾದಾಗಲೆಲ್ಲ ತನ್ನ ಮನೆಯ ಗೋಡೆಯನ್ನು ತಿನ್ನುವ ವ್ಯಕ್ತಿಯ ಬಗ್ಗೆ ಕೇಳಿದ್ದೀರಾ? ಅಂತಹ ಮಹಿಳೆಯ ಕಥೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಲ್ಲಿದೆ.

Viral Video: ಈ ಮಹಿಳೆ ಹಸಿವಾದಾಗಲೆಲ್ಲ ಮನೆಯ ಗೋಡೆಯನ್ನೇ ಕೊರೆದು ತಿನ್ನುತ್ತಾಳೆ
Viral
ಅಕ್ಷತಾ ವರ್ಕಾಡಿ
|

Updated on: Dec 08, 2023 | 12:38 PM

Share

ಪ್ರತಿದಿನವೂ ವಿವಿಧ ಬಗೆಯ ಆಹಾರವನ್ನು ಪ್ರಯತ್ನಿಸುವ ಅನೇಕ ಆಹಾರಪ್ರೇಮಿಗಳನ್ನು ನೀವು ನೋಡಿರಬಹುದು. ಆಹಾರಪ್ರೇಮಿಗಳದ್ದೇ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುತ್ತವೆ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ ವಿಚಿತ್ರ ಆಹಾರ ಕ್ರಮದಿಂದಲೇ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ. ಈ ಮಹಿಳೆ ತಾನು ಹಸಿವಾದಾಗಲೆಲ್ಲ ತನ್ನ ಮನೆಯ ಗೋಡೆಯನ್ನು ಕೊರೆದು ಕೊರೆದು ತಿನ್ನುತ್ತಾಳೆ. ಇದೀಗಾಗಲೇ ಅವಳ ಮನೆಯ ಅರ್ಧದಷ್ಟು ಗೋಡೆಯನ್ನು ತಿಂದಿದ್ದಾಳೆ. ಈಕೆಯ ಈ ವಿಚಿತ್ರ ಅಭ್ಯಾಸ ತಿಳಿದ ಅಕ್ಕ ಪಕ್ಕದ ಮನೆಯವರು ಆಕೆಯನ್ನು ತಮ್ಮ ಮನೆಯೊಳಗೆ ಬರದಂತೆ ವಿನಂತಿಸಿದ್ದಾರೆ.

ಅಮೆರಿಕದ ಮಿಚಿಗನ್ ನಿವಾಸಿಯಾಗಿರುವ ನಿಕೋಲ್ ಎಂಬಾಕೆಯೇ ಗೋಡೆ ತಿನ್ನುವ ಮಹಿಳೆ. ಈಕೆಗೆ ಯಾವುದೇ ಚೈನೀಸ್ ಅಥವಾ ಇಟಾಲಿಯನ್ ಆಹಾರ ಇಷ್ಟವಿಲ್ಲವಂತೆ. ತಾನು ಹಸಿವಾದಾಗಲೆಲ್ಲ ಮನೆಯ ಗೋಡೆಯನ್ನೇ ತಿನ್ನುತ್ತೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾಳೆ. ಇದಲ್ಲದೇ ಹೋದಲ್ಲೆಲ್ಲಾ ತನ್ನ ಮನೆಯ ಗೋಡೆ ಮಾತ್ರವಲ್ಲದೆ ಅವರಿವರ ಮನೆಗಳ ಗೋಡೆಗಳನ್ನೂ ತಿನ್ನುತ್ತಾಳೆ. ಇದರಿಂದಾಗಿ ಆಕೆಯ ಸಂಬಂಧಿಕರು ಮತ್ತು ಸ್ನೇಹಿತರು ಆಕೆ ಇನ್ನು ಮುಂದೆ ಮನೆಗೆ ಬರದಂತೆ ವಿನಂತಿಯನ್ನೂ ಮಾಡಿದ್ದಾರೆ.

ಇದನ್ನೂ ಓದಿ: ಈ ಯುವತಿಗೆ ದಿನಕ್ಕೆ 12 ಸಾವಿರ ಬಾರಿ ಸೀನು ಬರುತ್ತದೆ, ಏನಿದು ವಿಚಿತ್ರ ಕಾಯಿಲೆ?

ನಿಕೋಲ್​​​ನ ಈ ಅಭ್ಯಾಸದಿಂದ ಹೊರಬರದಿದ್ದರೆ ಕ್ಯಾನ್ಸರ್ ಬರುವ ಅಪಾಯವಿದೆ ಎಂದು ವೈದ್ಯರು ಆಕೆಗೆ ಎಚ್ಚರಿಸಿದ್ದಾರೆ. ಇದೀಗಾ ಈಕೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಂಡು ಬರುತ್ತಿದೆ ಎಂದು ವರದಿಯಿಂದ ತಿಳಿದುಬಂದಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​