AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೆಣ್ಣು ಸಿಂಹವನ್ನು ತೋಳಲ್ಲಿ ಹೊತ್ತು ನಡೆದ ಮಹಿಳೆ; ವಿಡಿಯೋ ನೋಡಿ ನೆಟ್ಟಿಗರು ಶಾಕ್

Shocking Video: ಎಲ್ಲರೂ ಬೆಕ್ಕು, ನಾಯಿ, ಹಸು, ಕೋಳಿ, ಕುರಿಗಳನ್ನು ಸಾಕಿದರೆ ಕುವೈತ್​ನ ಮಹಿಳೆ ತನ್ನ ಮನೆಯಲ್ಲಿ ಹೆಣ್ಣು ಸಿಂಹದ ಮರಿಯೊಂದನ್ನು ಸಾಕಿದ್ದಳು!

Viral Video: ಹೆಣ್ಣು ಸಿಂಹವನ್ನು ತೋಳಲ್ಲಿ ಹೊತ್ತು ನಡೆದ ಮಹಿಳೆ; ವಿಡಿಯೋ ನೋಡಿ ನೆಟ್ಟಿಗರು ಶಾಕ್
ಹೆಣ್ಣು ಸಿಂಹವನ್ನು ಕಂಕುಳಲ್ಲಿ ಹೊತ್ತು ನಡೆದ ಮಹಿಳೆ
TV9 Web
| Edited By: |

Updated on: Jan 05, 2022 | 1:52 PM

Share

ನಿಮ್ಮ ಮನೆಯಲ್ಲಿ ಸಾಕುಪ್ರಾಣಿ ಇದೆಯೇ? ನಿಮ್ಮ ಮುದ್ದಿನ ನಾಯಿ ಅಥವಾ ಬೆಕ್ಕು, ಹಸುಗಳು ನೀವು ಹೇಳಿದ ಮಾತನ್ನು ಕೇಳುವುದಿಲ್ಲವೇ? ನಿಮ್ಮ ಮನೆಯ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ, ನಿಮಗೆ ದಿನವೂ ತಲೆನೋವು ತಂದಿಡುತ್ತಾವೆಯೇ? ನಿಮ್ಮ ಉತ್ತರ ಹೌದು ಎಂದಾದರೆ ಕುವೈತ್​ನ ಈ ಮಹಿಳೆಯ ಕಷ್ಟ ನಿಮಗೆ ಖಂಡಿತವಾಗಿಯೂ ಅರ್ಥವಾಗುತ್ತದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರಲ್ಲಿ ಮಹಿಳೆಯೊಬ್ಬಳು ತನ್ನ ತೋಳುಗಳಲ್ಲಿ ಸಿಂಹಿಣಿಯನ್ನು ಹೊತ್ತಿರುವ ದೃಶ್ಯವನ್ನು ನೋಡಬಹುದು. ಈ ವಿಡಿಯೋ ಕ್ಲಿಪ್ ಖಂಡಿತವಾಗಿಯೂ ನಿಮ್ಮನ್ನು ದಿಗ್ಭ್ರಮೆಗೊಳಿಸುತ್ತದೆ. ಅಷ್ಟಕ್ಕೂ ಆಕೆ ಸಿಂಹವನ್ನು ತೋಳಲ್ಲಿ ಹೊತ್ತುಕೊಂಡು ರಸ್ತೆಯಲ್ಲಿ ನಡೆದಿದ್ದೇಕೆ?

ಎಲ್ಲರೂ ಬೆಕ್ಕು, ನಾಯಿ, ಹಸು, ಕೋಳಿ, ಕುರಿಗಳನ್ನು ಸಾಕಿದರೆ ಕುವೈತ್​ನ ಮಹಿಳೆ ತನ್ನ ಮನೆಯಲ್ಲಿ ಹೆಣ್ಣು ಸಿಂಹದ ಮರಿಯೊಂದನ್ನು ಸಾಕಿದ್ದಳು! ಆ ಸಿಂಹಿಣಿ ಮನೆಯಿಂದ ತಪ್ಪಿಸಿಕೊಂಡು ಹೋಗಿತ್ತು. ಕುವೈತ್ ನಗರದ ದಕ್ಷಿಣ ಭಾಗದಲ್ಲಿರುವ ಸಬಾಹಿಯಾ ಪ್ರದೇಶದಲ್ಲಿ ಸಿಂಹಿಣಿ ತಪ್ಪಿಸಿಕೊಂಡ ಘಟನೆ ಭಾನುವಾರ ನಡೆದಿತ್ತು. ಮನೆಯಿಂದ ತಪ್ಪಿಸಿಕೊಂಡು ರಸ್ತೆಯಲ್ಲಿ ಓಡಾಡುತ್ತಿದ್ದ ಸಿಂಹವನ್ನು ನೋಡಿ ಜನರು ಗಾಬರಿಗೊಂಡಿದ್ದರು. ತನ್ನ ಮನೆಯಿಂದ ತಪ್ಪಿಸಿಕೊಂಡಿದ್ದ ಆ ಹೆಣ್ಣು ಸಿಂಹವನ್ನು ತನ್ನ ತೋಳುಗಳಲ್ಲಿ ಹೊತ್ತುಕೊಂಡು ಆಕೆ ಮನೆಗೆ ಹೋಗಿದ್ದಾಳೆ.

ಅರ್ಲಾಂಗ್ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಸಿಂಹ ಆ ಮಹಿಳೆಯ ತೋಳುಗಳಿಂದ ಕೆಳಗೆ ಹಾರಲು ಹೆಣಗಾಡುತ್ತಿದೆ. ಕುವೈತ್ ಪತ್ರಿಕೆ ಅಲ್-ಅನ್ಬಾ ಪ್ರಕಾರ, ಸಿಂಹಿಣಿಯನ್ನು ವೀಡಿಯೊದಲ್ಲಿ ಮಹಿಳೆ ಮತ್ತು ಆಕೆಯ ತಂದೆ ಸಾಕುಪ್ರಾಣಿಯಾಗಿ ಇಟ್ಟುಕೊಂಡಿದ್ದರು. ಆ ಸಿಂಹ ಆಕಸ್ಮಿಕವಾಗಿ ತಪ್ಪಿಸಿಕೊಂಡು ಬೀದಿಗಳಲ್ಲಿ ಅಲೆದಾಡುತ್ತಿದ್ದಾಗ ನಿವಾಸಿಗಳನ್ನು ಭಯಭೀತಗೊಳಿಸಿತ್ತು. ಬಳಿಕ ಅದನ್ನು ಆ ಮಹಿಳೆ ತನ್ನ ಮನೆಗೆ ವಾಪಾಸ್ ತಂದಿದ್ದಾರೆ.

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!