AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೆಣ್ಣು ಸಿಂಹವನ್ನು ತೋಳಲ್ಲಿ ಹೊತ್ತು ನಡೆದ ಮಹಿಳೆ; ವಿಡಿಯೋ ನೋಡಿ ನೆಟ್ಟಿಗರು ಶಾಕ್

Shocking Video: ಎಲ್ಲರೂ ಬೆಕ್ಕು, ನಾಯಿ, ಹಸು, ಕೋಳಿ, ಕುರಿಗಳನ್ನು ಸಾಕಿದರೆ ಕುವೈತ್​ನ ಮಹಿಳೆ ತನ್ನ ಮನೆಯಲ್ಲಿ ಹೆಣ್ಣು ಸಿಂಹದ ಮರಿಯೊಂದನ್ನು ಸಾಕಿದ್ದಳು!

Viral Video: ಹೆಣ್ಣು ಸಿಂಹವನ್ನು ತೋಳಲ್ಲಿ ಹೊತ್ತು ನಡೆದ ಮಹಿಳೆ; ವಿಡಿಯೋ ನೋಡಿ ನೆಟ್ಟಿಗರು ಶಾಕ್
ಹೆಣ್ಣು ಸಿಂಹವನ್ನು ಕಂಕುಳಲ್ಲಿ ಹೊತ್ತು ನಡೆದ ಮಹಿಳೆ
TV9 Web
| Edited By: |

Updated on: Jan 05, 2022 | 1:52 PM

Share

ನಿಮ್ಮ ಮನೆಯಲ್ಲಿ ಸಾಕುಪ್ರಾಣಿ ಇದೆಯೇ? ನಿಮ್ಮ ಮುದ್ದಿನ ನಾಯಿ ಅಥವಾ ಬೆಕ್ಕು, ಹಸುಗಳು ನೀವು ಹೇಳಿದ ಮಾತನ್ನು ಕೇಳುವುದಿಲ್ಲವೇ? ನಿಮ್ಮ ಮನೆಯ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ, ನಿಮಗೆ ದಿನವೂ ತಲೆನೋವು ತಂದಿಡುತ್ತಾವೆಯೇ? ನಿಮ್ಮ ಉತ್ತರ ಹೌದು ಎಂದಾದರೆ ಕುವೈತ್​ನ ಈ ಮಹಿಳೆಯ ಕಷ್ಟ ನಿಮಗೆ ಖಂಡಿತವಾಗಿಯೂ ಅರ್ಥವಾಗುತ್ತದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರಲ್ಲಿ ಮಹಿಳೆಯೊಬ್ಬಳು ತನ್ನ ತೋಳುಗಳಲ್ಲಿ ಸಿಂಹಿಣಿಯನ್ನು ಹೊತ್ತಿರುವ ದೃಶ್ಯವನ್ನು ನೋಡಬಹುದು. ಈ ವಿಡಿಯೋ ಕ್ಲಿಪ್ ಖಂಡಿತವಾಗಿಯೂ ನಿಮ್ಮನ್ನು ದಿಗ್ಭ್ರಮೆಗೊಳಿಸುತ್ತದೆ. ಅಷ್ಟಕ್ಕೂ ಆಕೆ ಸಿಂಹವನ್ನು ತೋಳಲ್ಲಿ ಹೊತ್ತುಕೊಂಡು ರಸ್ತೆಯಲ್ಲಿ ನಡೆದಿದ್ದೇಕೆ?

ಎಲ್ಲರೂ ಬೆಕ್ಕು, ನಾಯಿ, ಹಸು, ಕೋಳಿ, ಕುರಿಗಳನ್ನು ಸಾಕಿದರೆ ಕುವೈತ್​ನ ಮಹಿಳೆ ತನ್ನ ಮನೆಯಲ್ಲಿ ಹೆಣ್ಣು ಸಿಂಹದ ಮರಿಯೊಂದನ್ನು ಸಾಕಿದ್ದಳು! ಆ ಸಿಂಹಿಣಿ ಮನೆಯಿಂದ ತಪ್ಪಿಸಿಕೊಂಡು ಹೋಗಿತ್ತು. ಕುವೈತ್ ನಗರದ ದಕ್ಷಿಣ ಭಾಗದಲ್ಲಿರುವ ಸಬಾಹಿಯಾ ಪ್ರದೇಶದಲ್ಲಿ ಸಿಂಹಿಣಿ ತಪ್ಪಿಸಿಕೊಂಡ ಘಟನೆ ಭಾನುವಾರ ನಡೆದಿತ್ತು. ಮನೆಯಿಂದ ತಪ್ಪಿಸಿಕೊಂಡು ರಸ್ತೆಯಲ್ಲಿ ಓಡಾಡುತ್ತಿದ್ದ ಸಿಂಹವನ್ನು ನೋಡಿ ಜನರು ಗಾಬರಿಗೊಂಡಿದ್ದರು. ತನ್ನ ಮನೆಯಿಂದ ತಪ್ಪಿಸಿಕೊಂಡಿದ್ದ ಆ ಹೆಣ್ಣು ಸಿಂಹವನ್ನು ತನ್ನ ತೋಳುಗಳಲ್ಲಿ ಹೊತ್ತುಕೊಂಡು ಆಕೆ ಮನೆಗೆ ಹೋಗಿದ್ದಾಳೆ.

ಅರ್ಲಾಂಗ್ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಸಿಂಹ ಆ ಮಹಿಳೆಯ ತೋಳುಗಳಿಂದ ಕೆಳಗೆ ಹಾರಲು ಹೆಣಗಾಡುತ್ತಿದೆ. ಕುವೈತ್ ಪತ್ರಿಕೆ ಅಲ್-ಅನ್ಬಾ ಪ್ರಕಾರ, ಸಿಂಹಿಣಿಯನ್ನು ವೀಡಿಯೊದಲ್ಲಿ ಮಹಿಳೆ ಮತ್ತು ಆಕೆಯ ತಂದೆ ಸಾಕುಪ್ರಾಣಿಯಾಗಿ ಇಟ್ಟುಕೊಂಡಿದ್ದರು. ಆ ಸಿಂಹ ಆಕಸ್ಮಿಕವಾಗಿ ತಪ್ಪಿಸಿಕೊಂಡು ಬೀದಿಗಳಲ್ಲಿ ಅಲೆದಾಡುತ್ತಿದ್ದಾಗ ನಿವಾಸಿಗಳನ್ನು ಭಯಭೀತಗೊಳಿಸಿತ್ತು. ಬಳಿಕ ಅದನ್ನು ಆ ಮಹಿಳೆ ತನ್ನ ಮನೆಗೆ ವಾಪಾಸ್ ತಂದಿದ್ದಾರೆ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ