AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೆಣ್ಣು ಸಿಂಹವನ್ನು ತೋಳಲ್ಲಿ ಹೊತ್ತು ನಡೆದ ಮಹಿಳೆ; ವಿಡಿಯೋ ನೋಡಿ ನೆಟ್ಟಿಗರು ಶಾಕ್

Shocking Video: ಎಲ್ಲರೂ ಬೆಕ್ಕು, ನಾಯಿ, ಹಸು, ಕೋಳಿ, ಕುರಿಗಳನ್ನು ಸಾಕಿದರೆ ಕುವೈತ್​ನ ಮಹಿಳೆ ತನ್ನ ಮನೆಯಲ್ಲಿ ಹೆಣ್ಣು ಸಿಂಹದ ಮರಿಯೊಂದನ್ನು ಸಾಕಿದ್ದಳು!

Viral Video: ಹೆಣ್ಣು ಸಿಂಹವನ್ನು ತೋಳಲ್ಲಿ ಹೊತ್ತು ನಡೆದ ಮಹಿಳೆ; ವಿಡಿಯೋ ನೋಡಿ ನೆಟ್ಟಿಗರು ಶಾಕ್
ಹೆಣ್ಣು ಸಿಂಹವನ್ನು ಕಂಕುಳಲ್ಲಿ ಹೊತ್ತು ನಡೆದ ಮಹಿಳೆ
TV9 Web
| Edited By: |

Updated on: Jan 05, 2022 | 1:52 PM

Share

ನಿಮ್ಮ ಮನೆಯಲ್ಲಿ ಸಾಕುಪ್ರಾಣಿ ಇದೆಯೇ? ನಿಮ್ಮ ಮುದ್ದಿನ ನಾಯಿ ಅಥವಾ ಬೆಕ್ಕು, ಹಸುಗಳು ನೀವು ಹೇಳಿದ ಮಾತನ್ನು ಕೇಳುವುದಿಲ್ಲವೇ? ನಿಮ್ಮ ಮನೆಯ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ, ನಿಮಗೆ ದಿನವೂ ತಲೆನೋವು ತಂದಿಡುತ್ತಾವೆಯೇ? ನಿಮ್ಮ ಉತ್ತರ ಹೌದು ಎಂದಾದರೆ ಕುವೈತ್​ನ ಈ ಮಹಿಳೆಯ ಕಷ್ಟ ನಿಮಗೆ ಖಂಡಿತವಾಗಿಯೂ ಅರ್ಥವಾಗುತ್ತದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರಲ್ಲಿ ಮಹಿಳೆಯೊಬ್ಬಳು ತನ್ನ ತೋಳುಗಳಲ್ಲಿ ಸಿಂಹಿಣಿಯನ್ನು ಹೊತ್ತಿರುವ ದೃಶ್ಯವನ್ನು ನೋಡಬಹುದು. ಈ ವಿಡಿಯೋ ಕ್ಲಿಪ್ ಖಂಡಿತವಾಗಿಯೂ ನಿಮ್ಮನ್ನು ದಿಗ್ಭ್ರಮೆಗೊಳಿಸುತ್ತದೆ. ಅಷ್ಟಕ್ಕೂ ಆಕೆ ಸಿಂಹವನ್ನು ತೋಳಲ್ಲಿ ಹೊತ್ತುಕೊಂಡು ರಸ್ತೆಯಲ್ಲಿ ನಡೆದಿದ್ದೇಕೆ?

ಎಲ್ಲರೂ ಬೆಕ್ಕು, ನಾಯಿ, ಹಸು, ಕೋಳಿ, ಕುರಿಗಳನ್ನು ಸಾಕಿದರೆ ಕುವೈತ್​ನ ಮಹಿಳೆ ತನ್ನ ಮನೆಯಲ್ಲಿ ಹೆಣ್ಣು ಸಿಂಹದ ಮರಿಯೊಂದನ್ನು ಸಾಕಿದ್ದಳು! ಆ ಸಿಂಹಿಣಿ ಮನೆಯಿಂದ ತಪ್ಪಿಸಿಕೊಂಡು ಹೋಗಿತ್ತು. ಕುವೈತ್ ನಗರದ ದಕ್ಷಿಣ ಭಾಗದಲ್ಲಿರುವ ಸಬಾಹಿಯಾ ಪ್ರದೇಶದಲ್ಲಿ ಸಿಂಹಿಣಿ ತಪ್ಪಿಸಿಕೊಂಡ ಘಟನೆ ಭಾನುವಾರ ನಡೆದಿತ್ತು. ಮನೆಯಿಂದ ತಪ್ಪಿಸಿಕೊಂಡು ರಸ್ತೆಯಲ್ಲಿ ಓಡಾಡುತ್ತಿದ್ದ ಸಿಂಹವನ್ನು ನೋಡಿ ಜನರು ಗಾಬರಿಗೊಂಡಿದ್ದರು. ತನ್ನ ಮನೆಯಿಂದ ತಪ್ಪಿಸಿಕೊಂಡಿದ್ದ ಆ ಹೆಣ್ಣು ಸಿಂಹವನ್ನು ತನ್ನ ತೋಳುಗಳಲ್ಲಿ ಹೊತ್ತುಕೊಂಡು ಆಕೆ ಮನೆಗೆ ಹೋಗಿದ್ದಾಳೆ.

ಅರ್ಲಾಂಗ್ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಸಿಂಹ ಆ ಮಹಿಳೆಯ ತೋಳುಗಳಿಂದ ಕೆಳಗೆ ಹಾರಲು ಹೆಣಗಾಡುತ್ತಿದೆ. ಕುವೈತ್ ಪತ್ರಿಕೆ ಅಲ್-ಅನ್ಬಾ ಪ್ರಕಾರ, ಸಿಂಹಿಣಿಯನ್ನು ವೀಡಿಯೊದಲ್ಲಿ ಮಹಿಳೆ ಮತ್ತು ಆಕೆಯ ತಂದೆ ಸಾಕುಪ್ರಾಣಿಯಾಗಿ ಇಟ್ಟುಕೊಂಡಿದ್ದರು. ಆ ಸಿಂಹ ಆಕಸ್ಮಿಕವಾಗಿ ತಪ್ಪಿಸಿಕೊಂಡು ಬೀದಿಗಳಲ್ಲಿ ಅಲೆದಾಡುತ್ತಿದ್ದಾಗ ನಿವಾಸಿಗಳನ್ನು ಭಯಭೀತಗೊಳಿಸಿತ್ತು. ಬಳಿಕ ಅದನ್ನು ಆ ಮಹಿಳೆ ತನ್ನ ಮನೆಗೆ ವಾಪಾಸ್ ತಂದಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್