AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವನ್ನೆತ್ತಿಕೊಂಡು ಫೋನ್​ನಲ್ಲಿ ಮಾತಾಡುತ್ತಾ ರೈಲಿಗೆ ಸಿಲುಕಿದ ತಾಯಿ

ಸಾಮಾಜಿಕ ಜಾಲತಾಣದಲ್ಲಿ ಭಯಾನಕ ವಿಡಿಯೋವೊಂದು ಹರಿದಾಡುತ್ತಿದೆ. ಮೊಬೈಲ್​ನಲ್ಲಿ ಮಾತನಾಡುತ್ತಾ, ಸ್ನೇಹಿತರೊಂದಿಗೆ ನಡೆಯುತ್ತಾ ರೈಲ್ವೆ ಹಳಿ ದಾಟುತ್ತಿದ್ದ ಮಹಿಳೆ ರೈಲಿಗೆ ಸಿಲುಕಿದ್ದಾಳೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಆಕೆ ಪ್ಲಾಟ್​ಫಾರ್ಮ್ ಮೇಲೆ ಹಾರಿ ಬಿದ್ದಿದ್ದಾಳೆ. ಆಕೆಯ ತೋಳಿನಲ್ಲಿದ್ದ ಮಗು ಕೂಡ ಕೆಳಗೆ ಬಿದ್ದಿದೆ.

ಮಗುವನ್ನೆತ್ತಿಕೊಂಡು ಫೋನ್​ನಲ್ಲಿ ಮಾತಾಡುತ್ತಾ ರೈಲಿಗೆ ಸಿಲುಕಿದ ತಾಯಿ
ಮಗುವನ್ನೆತ್ತಿಕೊಂಡು ಫೋನ್​ನಲ್ಲಿ ಮಾತಾಡುತ್ತಾ ರೈಲಿಗೆ ಸಿಲುಕಿದ ತಾಯಿ
Follow us
ಸುಷ್ಮಾ ಚಕ್ರೆ
|

Updated on: Sep 18, 2024 | 6:47 PM

ರೈಲ್ವೆ ಪ್ಲಾಟ್‌ಫಾರ್ಮ್‌ಗಳಲ್ಲಿ ಚಲಿಸುವಾಗ ಎಷ್ಟು ಎಚ್ಚರಿಕೆಯನ್ನು ವಹಿಸಿದರೂ ಸಾಲದು. ನಮ್ಮ ಗಮನ ಸಂಪೂರ್ಣವಾಗಿ ರೈಲುಗಳ ಮೇಲೆ ಹಾಗೂ ರೈಲ್ವೆ ಪ್ಲಾಟ್​ಫಾರ್ಮ್​ಗಳ ಮೇಲೆ ಇರುವುದು ಬಹಳ ಅತ್ಯಗತ್ಯ. ಇದೀಗ ಶಾಕಿಂಗ್ ಘಟನೆಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈ ವಿಡಿಯೋ ತುಣುಕಿನಲ್ಲಿ ಮಹಿಳೆಯೊಬ್ಬಳು, ಮಗುವನ್ನು ತನ್ನ ತೋಳುಗಳಲ್ಲಿ ಹಿಡಿದುಕೊಂಡು, ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಫೋನ್ ಮಾಡುತ್ತಾ, ತನ್ನ ಸ್ನೇಹಿತರೊಂದಿಗೆ ನಡೆಯುತ್ತಿದ್ದಳು. ಮೊಬೈಲ್ ಸಂಭಾಷಣೆಯಲ್ಲಿ ನಿರತಳಾಗಿದ್ದ ಆಕೆ ಆಚೀಚೆ ನೋಡದೆ ರೈಲ್ವೆ ಹಳಿ ದಾಟಲು ಹೋಗುತ್ತಾಳೆ. ಆಗ ಹಿಂದಿನಿಂದ ಬಂದ ರೈಲು ಆಕೆಗೆ ಡಿಕ್ಕಿ ಹೊಡೆಯುತ್ತದೆ.

ಇದನ್ನೂ ಓದಿ: Viral News: ಚೀನಾದಲ್ಲಿ ಸಣ್ಣ ಹುಡುಗರ ಮೂತ್ರಕ್ಕಿದೆ ಭಾರೀ ಬೇಡಿಕೆ; ಶಾಕಿಂಗ್ ಕಾರಣ ಇಲ್ಲಿದೆ

ರೈಲು ಡಿಕ್ಕಿ ಹೊಡೆದ ರಭಸಕ್ಕೆ ಹಾರಿ ಹೋಗಿ ಪ್ಲಾಟ್​ಫಾರ್ಮ್ ಮೇಲೆ ಬಿದ್ದ ಆಕೆ ಹಾಗೂ ಆಕೆಯ ಕೈಲಿದ್ದ ಮಗು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಹಿಂದಿನಿಂದ ರೈಲು ತನ್ನ ಕಡೆಗೆ ಬರುತ್ತಿರುವುದು ಅರಿವಿಲ್ಲದ ನಡೆಯುತ್ತಿದ್ದ ಆಕೆಗೆ ರೈಲು ತನ್ನ ಹಿಂದೆಯೇ ಇದೆ ಎಂದು ಗೊತ್ತಾಗುವಷ್ಟರಲ್ಲಿ ಅಪಘಾತ ಉಂಟಾಗಿತ್ತು.

ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ನಡೆದ ಕೂಡಲೆ ಸುತ್ತಮುತ್ತಲಿನ ಜನರು ಸಹಾಯಕ್ಕೆ ಧಾವಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮಹಿಳೆ ಮತ್ತು ಮಗುವಿನ ಸ್ಥಿತಿ ಇನ್ನೂ ಪೂರ್ತಿಯಾಗಿ ತಿಳಿದುಬಂದಿಲ್ಲ.

ಇದನ್ನೂ ಓದಿ: ಇಲ್ಲಿ ಪೋಷಕರೇ ಹೆಣ್ಣು ಮಕ್ಕಳನ್ನು ಹರಾಜಿನಲ್ಲಿ ಮಾರಾಟ ಮಾಡ್ತಾರಂತೆ

ಹೀಗಾಗಿ, ರೈಲ್ವೆ ಪ್ಲಾಟ್‌ಫಾರ್ಮ್‌ಗಳಲ್ಲಿ ಅಥವಾ ರಸ್ತೆಗಳಲ್ಲಿ, ವಿಶೇಷವಾಗಿ ಮಕ್ಕಳೊಂದಿಗೆ ನಡೆಯುವಾಗ ಜಾಗರೂಕರಾಗಿರಬೇಕು. ಒಂದು ಅಜಾಗರೂಕ ನಡೆ ದುರಂತಕ್ಕೆ ಕಾರಣವಾಗಬಹುದು. ದಾಟುವ ಮೊದಲು ಮಾರ್ಗದಲ್ಲಿ ಯಾವುದೇ ವಾಹನ ಬರುತ್ತಿಲ್ಲ ಎಂದು ಎಚ್ಚರವಹಿಸಿ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
Daily Devotional: ಜಪ ಮಾಡುವುದರ ಹಿಂದಿನ ರಹಸ್ಯ ಹಾಗೂ ಉಪಯೋಗ ತಿಳಿಯಿರಿ
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ಈ ರಾಶಿಯವರ ಆದಾಯದಲ್ಲಿ ಏರಿಕೆ, ವಾಹನ ಖರೀದಿಸುವವರು ಎಚ್ಚರ!
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ