AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹುಡುಗಿಯ ಕೊರಳಿಗೆ ಬೆಲ್ಟ್ ಕಟ್ಟಿಕೊಂಡು ನಾಯಿಯಂತೆ ಬೀದಿಗಿಳಿದ ಮಹಿಳೆ

ಕುತ್ತಿಗೆಗೆ ಬೆಲ್ಟ್ ಹಾಕಿಕೊಂಡಿರುವ ಯುವತಿ, ಕಪ್ಪು ಬಟ್ಟೆ ಧರಿಸಿ ಪ್ರಾಣಿಯಂತೆ ನಾಲ್ಕು ಕಾಲಿನಲ್ಲಿ ರಸ್ತೆಯಲ್ಲಿ ನಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.ಕೇವಲ 26 ಸೆಕೆಂಡ್‌ಗಳ ಈ ವಿಡಿಯೋಗೆ ಇದುವರೆಗೆ 16 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. 'ಮುಂಬೈಗೆ ಏನಾಯಿತು? ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಣೆಗಾಗಿ ಜನರು ಈ ಮಟ್ಟಕ್ಕೆ ಹೇಗೆ ಇಳಿಯುತ್ತಾರೆ?' ಎಂದು ಪೋಸ್ಟ್​​​ಗೆ ಕ್ಯಾಪ್ಷನ್​​ ಬರೆಯಲಾಗಿದೆ.

Viral Video: ಹುಡುಗಿಯ ಕೊರಳಿಗೆ ಬೆಲ್ಟ್ ಕಟ್ಟಿಕೊಂಡು ನಾಯಿಯಂತೆ ಬೀದಿಗಿಳಿದ ಮಹಿಳೆ
Viral Video
ಅಕ್ಷತಾ ವರ್ಕಾಡಿ
|

Updated on: Feb 18, 2024 | 6:01 PM

Share

ಯುವತಿಯೊಬ್ಬಳ ಕುತ್ತಿಗೆಗೆ ಮತ್ತೊಬ್ಬಳು ಯುವತಿ ಬೆಲ್ಟ್ ಹಾಕಿ ನಾಯಿಯಂತೆ ಬೀದಿಯಲ್ಲಿ ಸುತ್ತಾಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಈ ವಿಚಿತ್ರ ದೃಶ್ಯವನ್ನು ಕಂಡು ಸುಮ್ಮನಿದ್ದ ಸ್ಥಳೀಯರಿಗೆ ಹಾಗೂ ವಿಡಿಯೋ ತೆಗೆದವರ ಬಗ್ಗೆ ನೆಟ್ಟಿಗರು ಕಮೆಂಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆಘಾತಕಾರಿ ವಿಡಿಯೋ ಮುಂಬೈನದ್ದು ಎಂದು ತಿಳಿದುಬಂದಿದೆ. ಕುತ್ತಿಗೆಗೆ ಬೆಲ್ಟ್ ಹಾಕಿಕೊಂಡಿರುವ ಯುವತಿ, ಕಪ್ಪು ಬಟ್ಟೆ ಧರಿಸಿ ಪ್ರಾಣಿಯಂತೆ ನಾಲ್ಕು ಕಾಲಿನಲ್ಲಿ ರಸ್ತೆಯಲ್ಲಿ ನಡೆಯುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಈ ವೀಡಿಯೊವನ್ನು @mathrunner7 ಎಂಬ ಟ್ವಿಟರ್​​ ಖಾತೆಯಲ್ಲಿ ಫೆಬ್ರವರಿ 14ರಂದು ಹಂಚಿಕೊಳ್ಳಲಾಗಿದೆ. ‘ಮುಂಬೈಗೆ ಏನಾಯಿತು? ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಣೆಗಾಗಿ ಜನರು ಈ ಮಟ್ಟಕ್ಕೆ ಹೇಗೆ ಇಳಿಯುತ್ತಾರೆ?’ ಎಂದು ಪೋಸ್ಟ್​​​ಗೆ ಕ್ಯಾಪ್ಷನ್​​ ಬರೆದಿದ್ದಾರೆ. ಜೊತೆಗೆ ಪೋಸ್ಟ್ ಅನ್ನು ಮುಂಬೈ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಇಂತಹ ಕೃತ್ಯಕ್ಕೆ ಅವಕಾಶವಿದೆಯೇ ಎಂದು ಕೇಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕೈ ಹಿಡಿದು ಸುತ್ತುವುದು ಪ್ರೇಮವಲ್ಲ, ಜೀವನದ ಪ್ರತಿ ಹಂತದಲ್ಲೂ ಈ ರಿಯಲ್ ಜೋಡಿಯಂತಿರಬೇಕು

ಕೇವಲ 26 ಸೆಕೆಂಡ್‌ಗಳ ಈ ವಿಡಿಯೋಗೆ ಇದುವರೆಗೆ 16 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಈ ವೀಡಿಯೊಗೆ ಬಳಕೆದಾರರು ವಿವಿಧ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಬಳಕೆದಾರರೊಬ್ಬರು ಬರೆದು ನಮ್ಮ ಭಾರತ ಈಗ ಇದೇ ರೀತಿಯ ಕಾಯಿಲೆಗೆ ತುತ್ತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!