AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಅಂಗಡಿಯ ಶಟರ್‌ಗೆ ಸಿಲುಕಿದ ಮಹಿಳೆಯ ಶರ್ಟ್​​​​; ಮುಂದೆ ಆಗಿದ್ದೇನು ನೋಡಿ

ಮಹಿಳೆ ಅಂಗಡಿಯ ಮುಂದೆ ಸ್ವಚ್ಛಗೊಳಿಸುತ್ತಿರುವ ವೇಳೆ ಆಕಸ್ಮಿಕವಾಗಿ ಮಹಿಳೆಯ ಬಟ್ಟೆ ಅಂಗಡಿಯ ಶಟರ್‌ಗೆ ಸಿಲುಕಿದೆ. ಅಂಗಡಿಯ ಹೊರಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

Video Viral: ಅಂಗಡಿಯ ಶಟರ್‌ಗೆ ಸಿಲುಕಿದ ಮಹಿಳೆಯ ಶರ್ಟ್​​​​; ಮುಂದೆ ಆಗಿದ್ದೇನು ನೋಡಿ
ಅಂಗಡಿಯ ಶಟರ್‌ಗೆ ಸಿಲುಕಿದ ಮಹಿಳೆಯ ಶರ್ಟ್Image Credit source: Twitter
Follow us
ಅಕ್ಷತಾ ವರ್ಕಾಡಿ
|

Updated on: Mar 08, 2024 | 10:53 AM

ಆಸ್ಟ್ರೇಲಿಯದ ಸೌತ್ ವೇಲ್ಸ್‌ನ ಪಾಂಟಿಪ್ರಿಡ್‌ನಲ್ಲಿರುವ ಬೆಸ್ಟ್ ಒನ್ ಆಫ್-ಲೈಸೆನ್ಸ್‌ನಲ್ಲಿ ಅನ್ನಿ ಹ್ಯೂಸ್ (71) ಎಂಬ ಮಹಿಳೆ ಅಂಗಡಿಯ ಮುಂದೆ ಸ್ವಚ್ಛಗೊಳಿಸುತ್ತಿರುವ ವೇಳೆ ಆಕಸ್ಮಿಕವಾಗಿ ಮಹಿಳೆಯ ಬಟ್ಟೆ ಅಂಗಡಿಯ ಶಟರ್‌ಗೆ ಸಿಲುಕಿದೆ. ಅದೇ ಸಮಯದಲ್ಲಿ ಶಟರ್ ಮಿಷನ್ ಅಂಗಡಿ ತೆರೆಯಲು ಆನ್​​ ಆಗಿದ್ದು, ಮಹಿಳೆಯ ಸಮೇತ ಶಟರ್​​ ಮೇಲೆ ಹೋಗಿದೆ. ಮಹಿಳೆ ಶಟರ್​​ಹೆ ಸಿಲುಕಿ ನೇತಾಡುತ್ತಿರುವುದು ಅಂಗಡಿಯ ಮುಂಭಾಗದಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೋಮವಾರ(ಮಾ.08) ಬೆಳಗ್ಗೆ 8ಗಂಟೆಯ ವೇಳೆಗೆ ನಡೆದಿದೆ.

ತಕ್ಷಣ ಮಹಿಳೆಯ ಕಿರುಚಾಟದ ಸದ್ದು ಕೇಳಿ ಅಂಗಡಿಯ ಮಾಲೀಕ ಅಮೆದ್ ಅಕ್ರಂ (44) ಓಡೋಡಿ ಬಂದು ಮಹಿಳೆಯನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಬಳಿಕ ಅಂಗಡಿಯ ಮಾಲೀಕ ಶಟರ್​​ ಅನ್ನು ಕೆಳಗಡೆ ಎಳೆದಿದ್ದಾರೆ. ಬಳಿಕ ಮಹಿಳೆಯನ್ನು ಎತ್ತಿ ಕೆಳಗೆ ಇಳಿಸಲಾಗಿದೆ.

ಇದನ್ನೂ ಓದಿ: ಮದುವೆಗೆ ಯಾಕೆ ಕರೆದಿಲ್ಲ?; ಮುಕೇಶ್‌ ಅಂಬಾನಿಯನ್ನು ಪ್ರಶ್ನಿಸಿದ ರಾಖಿ ಸಾವಂತ್‌

ವೈರಲ್​​​​  ವಿಡಿಯೋ ಇಲ್ಲಿದೆ ನೋಡಿ:

ಅದೃಷ್ಟವಶಾತ್ ಘಟನೆಯಲ್ಲಿ ಆಕೆಗೆ ಯಾವುದೇ ಗಾಯಗಳಾಗಿಲ್ಲ. ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.ಅಂಗಡಿಯ ಹೊರಗೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆ ಸೆರೆಯಾಗಿದೆ. @crazednet ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ