AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಾಕಶಾಲೆಯ ಗ್ರೇವಿಯಲ್ಲಿ ಕುಸ್ತಿಯಾಡುವುದರನ್ನು ಎಂದಾದರೂ ನೋಡಿದ್ದೀರಾ? ಇಲ್ಲಿದೆ ನೋಡಿ ವಿಡಿಯೋ

ಕ್ರೇಜಿಯೆಸ್ಟ್ ಪಾಕಶಾಲೆಯ ಸ್ಪರ್ಧೆಗಳಲ್ಲಿ ವಿಶ್ವ ಗ್ರೇವಿ ವ್ರೆಸ್ಲಿಂಗ್ ಚಾಂಪಿಯನ್‌ಶಿಪ್ ಒಂದಾಗಿದೆ. ಗ್ರೇವಿಯಲ್ಲಿ ಯುವಕ ಯುವತಿಯರು ಕುಸ್ತಿಯಾಡುವ ವಿಡಿಯೋ ವೈರಲ್ ಆಗುತ್ತಿದೆ. ಆ ವಿಡಿಯೋ ಇಲ್ಲಿದೆ ನೋಡಿ.

Viral Video: ಪಾಕಶಾಲೆಯ ಗ್ರೇವಿಯಲ್ಲಿ ಕುಸ್ತಿಯಾಡುವುದರನ್ನು ಎಂದಾದರೂ ನೋಡಿದ್ದೀರಾ? ಇಲ್ಲಿದೆ ನೋಡಿ ವಿಡಿಯೋ
ವಿಶ್ವ ಗ್ರೇವಿ ಕುಸ್ತಿ ಚಾಂಪಿಯನ್‌ಶಿಪ್ ವಿಡಿಯೋ ವೈರಲ್
TV9 Web
| Edited By: Rakesh Nayak Manchi|

Updated on: Sep 04, 2022 | 1:53 PM

Share

ನೀವು ಎಂದಾದರೂ ವಿಶ್ವ ಗ್ರೇವಿ ಕುಸ್ತಿ ಚಾಂಪಿಯನ್‌ಶಿಪ್ ಬಗ್ಗೆ ಕೇಳಿದ್ದೀರಾ? ಹೆಸರೇ ಸೂಚಿಸುವಂತೆ ಸ್ಪರ್ಧೆಯು ಅಕ್ಷರಶಃ ಪಾಕಶಾಲೆಯ ಗ್ರೇವಿಯಲ್ಲಿ ಕುಸ್ತಿಯಾಡುವುದಾಗಿದೆ. ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನವೂ ಇದೆ. ಈ ವಾರ್ಷಿಕ ಸ್ಪರ್ಧೆಯನ್ನು ಇಂಗ್ಲೆಂಡ್​ನಲ್ಲಿ ಸ್ಥಳೀಯ ಚಾರಿಟಿಗಾಗಿ ಹಣವನ್ನು ಸಂಗ್ರಹಿಸಲು ಆಯೋಜಿಸಲಾಗುತ್ತದೆ. ಪಂದ್ಯದಲ್ಲಿ ಪುರುಷರು ಮತ್ತು ಮಹಿಳೆಯರಿಗಾಗಿ ಪ್ರತ್ಯೇಕ ಕುಸ್ತಿಗಳಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಾಳುಗಳು ಭಾಗಿಯಾಗುತ್ತಾರೆ.

ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಈ ಸ್ಪರ್ಧೆಯನ್ನು ಆಗಸ್ಟ್ 29ರಂದು ನಡೆಸಲಾಯಿತು. ಲಂಕಾಷೈರ್‌ನ ರೊಸೆಂಡೇಲ್‌ನಲ್ಲಿರುವ ರೋಸ್ ‘ಎನ್’ ಬೌಲ್ ಪಬ್‌ನ ಹೊರಗೆ ನಡೆದ ವಾರ್ಷಿಕ ಈವೆಂಟ್‌ನಲ್ಲಿ ಅನೇಕ ಕುಸ್ತಿಪಟುಗಳು ಭಾಗವಹಿಸಿದರು. ಸ್ಪರ್ಧೆಯ ನಿಯಮಗಳ ಪ್ರಕಾರ, ಎಲ್ಲಾ ಕುಸ್ತಿಪಟುಗಳು 2 ನಿಮಿಷ ಗ್ರೇವಿಯ ಕೊಳದಲ್ಲಿ ಪರಸ್ಪರ ಹಿಡಿತ ಸಾಧಿಸಬೇಕು.

ವರದಿಯ ಪ್ರಕಾರ, 12ನೇ ವಿಶ್ವ ಗ್ರೇವಿ ವ್ರೆಸ್ಲಿಂಗ್ ಚಾಂಪಿಯನ್‌ಶಿಪ್‌ನ ಪುರುಷರ ಸ್ಪರ್ಧೆಯನ್ನು ಲಾಯ್ಡ್ ಕ್ಲಾರ್ಕ್ಸನ್ ಗೆದ್ದಿದ್ದು, ಮಹಿಳಾ ವಿಭಾಗದಲ್ಲಿ ಇಮೋಜೆನ್ ಯಂಗ್ ಎಂಬವರು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು. ಸದ್ಯ ಈ ಪಂದ್ಯದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ನೌ ದಿಸ್ ನ್ಯೂಸ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, 1.18 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಸಂಗ್ರಹಿಸಿದ್ದು, 50ಸಾವಿರಕ್ಕೂ ಹೆಚ್ಚು ಲೈಕ್​ಗಳನ್ನು ಗಳಿಸಿದೆ.

View this post on Instagram

A post shared by NowThis (@nowthisnews)

ಮತ್ತಷ್ಟು ವೈರಲ್ ವಿಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!