Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮದುವೆ ಮೆರವಣಿಗೆಯಲ್ಲಿ ಸಾಹಸ ಮಾಡಲು ಹೋಗಿ ಬೆಂಕಿ ಹತ್ತಿಸಿಕೊಂಡ ಯುವಕ

ಬೆಂಕಿ ಮುಖವೆಲ್ಲಾ ಆವರಿಸಿಕೊಂಡಿದ್ದು, ಸದ್ಯ ಪಕ್ಕದಲ್ಲಿದ್ದವರು ಬೆಂಕಿನಿಂದ ಯುವಕನನ್ನು ರಕ್ಷಿಸಿದ್ದಾರೆ. ಯುವಕ ಹರ್ಷಲ್​​ನ ಬಾಯಿ ಮತ್ತು ಗಲ್ಲದ ಮೇಲೆ ಸುಟ್ಟ ಗಾಯಗಳಾಗಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.

Video Viral: ಮದುವೆ ಮೆರವಣಿಗೆಯಲ್ಲಿ ಸಾಹಸ ಮಾಡಲು ಹೋಗಿ ಬೆಂಕಿ ಹತ್ತಿಸಿಕೊಂಡ ಯುವಕ
Follow us
ಅಕ್ಷತಾ ವರ್ಕಾಡಿ
|

Updated on:Apr 23, 2024 | 11:15 AM

ಉತ್ತರಪ್ರದೇಶ: ಮದುವೆ ದಿಬ್ಬಣದ ಮೆರವಣಿಗೆಯಲ್ಲಿ ಬೆಂಕಿ ಉಗುಳುತ್ತಾ ಸಾಹಸ ಪ್ರದರ್ಶಿಸಿದ ಯುವಕನ ಮುಖ ತುಂಬೆಲ್ಲಾ ಬೆಂಕಿ ಹೊತ್ತಿಕೊಂಡಿರುವ ಘಟನೆ ಉತ್ತರಪ್ರದೇಶದ ಬಿಜ್ನೋರ್ ಸಂಭವಿಸಿದೆ. ಬೆಂಕಿ ಉಗುಳುತ್ತಾ ಸಾಹಸ ಪ್ರದರ್ಶಿಸುವ ವೇಳೆ ಯುವಕನ ಮುಖ ತುಂಬೆಲ್ಲಾ ಬೆಂಕಿ ಹೊತ್ತಿಕೊಂಡಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಯುವಕನ ಅಂಗೈ, ಬಾಯಿ ಮತ್ತು ಗಲ್ಲದ ಮೇಲೆ ಸುಟ್ಟಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿಜ್ನೋರ್‌ನ ಶಿಶ್‌ಗ್ರಾನ್‌ನ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಶಾಹಪುರ್‌ನ ಹರ್ಷಲ್ ಚೌಧರಿ ಎಂದು ಗುರುತಿಸಲಾದ ಯುವಕ ತನ್ನ ಬಾಯಿಗೆ ಪೆಟ್ರೋಲ್ ತುಂಬಿಸಿಕೊಂಡು, ಬೆಂಕಿ ಹಚ್ಚಿ ಸಾಹಸ ಪ್ರದರ್ಶನ ಮಾಡಿದ ಯುವಕ ಎಂದು ತಿಳಿದುಬಂದಿದೆ. ಬೆಂಕಿ ಮುಖವೆಲ್ಲಾ ಆವರಿಸಿಕೊಂಡಿದ್ದು, ಸದ್ಯ ಪಕ್ಕದಲ್ಲಿದ್ದವರು ಬೆಂಕಿನಿಂದ ಯುವಕನನ್ನು ರಕ್ಷಿಸಿದ್ದಾರೆ. ಯುವಕ ಹರ್ಷಲ್​​ನ ಬಾಯಿ ಮತ್ತು ಗಲ್ಲದ ಮೇಲೆ ಸುಟ್ಟ ಗಾಯಗಳಾಗಿದ್ದು, ತಕ್ಷಣ ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹುಬ್ಬು ಸುಂದರವಾಗಿಸಲು ಬ್ಯೂಟಿ ಪಾರ್ಲರ್​​ ಹೋದ ಮಹಿಳೆಯ ಮುಖ ಹೇಗಾಯಿತು ನೋಡಿ

@SachinGuptaUP ಎಂಬ ಟ್ವಿಟರ್​​ ಖಾತೆಯಲ್ಲಿ ಇಂದು (ಏ.23) ರಂದು ಹಂಚಿಕೊಳ್ಳಲಾಗಿದ್ದು, ವಿಡಿಯೋ ಹಂಚಿಕೊಂಡ ಕೇವಲ 3 ಗಂಟೆಗಳಲ್ಲಿ ಮೂರು ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:52 am, Tue, 23 April 24

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ