AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಾ ಧೈರ್ಯವೇ! ಚಿರತೆ ಜೊತೆ ಸೆಲ್ಫಿ ತೆಗೆಯುತ್ತಿರುವ ಯುವಕ, ವಿಡಿಯೋ ವೈರಲ್

ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ವ್ಯಕ್ತಿಯೊಬ್ಬ ಬಯಲಿನಲ್ಲಿ ನಿಂತುಕೊಂಡು ಚಿರತೆ ಜೊತೆ ಸೆಲ್ಫಿ ತೆಗೆಯುತ್ತಿರುವ ದೃಶ್ಯವಿದೆ. ಇದನ್ನು ನೋಡಿ ನೆಟ್ಟಿಗರು ಹೌಹಾರಿದ್ದಾರೆ. ಇನ್ನೊಂದಷ್ಟು ಮಂದಿ ವಿಡಿಯೋ ಪೋಸ್ಟ್ ಮಾಡಿದವರ ಕಾಲೆಳೆದಿದ್ದಾರೆ. ನಾಯಿಗೆ ಬಣ್ಣ ಕೊಡಲಾಗಿದೆಯೇ ಎಂದು ಕೆಲವರು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಅಬ್ಬಾ ಧೈರ್ಯವೇ! ಚಿರತೆ ಜೊತೆ ಸೆಲ್ಫಿ ತೆಗೆಯುತ್ತಿರುವ ಯುವಕ, ವಿಡಿಯೋ ವೈರಲ್
ಚಿರತೆ ಜೊತೆ ಸೆಲ್ಫಿ ತೆಗೆಯುತ್ತಿರುವ ಯುವಕ, ವಿಡಿಯೋ ವೈರಲ್
Follow us
Ganapathi Sharma
|

Updated on: Apr 08, 2024 | 7:13 AM

ಏಕಾಏಕಿ ಫೇಮಸ್ ಆಗುವ ಹುಚ್ಚಿನಲ್ಲಿ ಜನ ಏನೇನೋ ಗಿಮಿಕ್​​ಗಳನ್ನು ಮಾಡುತ್ತಿರುತ್ತಾರೆ. ಸೆಲ್ಫಿ, ರೀಲ್ಸ್ ಮಾಡಿ ಸಾಮಾಜಿಕ ಮಾಧ್ಯಮಗಳ (Socail Media) ಮೂಲಕ ಗಮನ ಸೆಳೆಯಲು ಯತ್ನಿಸುತ್ತಿರುತ್ತಾರೆ. ಯುವಕನೊಬ್ಬ ಚಿರತೆ (Cheetah) ಜೊತೆ ಸೆಲ್ಫಿ ತೆಗೆಯುತ್ತಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣಗಳಾದ ಇನ್​​ಸ್ಟಾಗ್ರಾಮ್, ಫೇಸ್ಬುಕ್ ಹಾಗೂ ಟ್ವಿಟ್ಟರ್​​ಗಳಲ್ಲಿ ವೈರಲ್ ಆಗುತ್ತಿದೆ. ಅನೇಕರು ಸಿಂಹ, ಹುಲಿ ಇತ್ಯಾದಿ ಪ್ರಾಣಿಗಳ ಜೊತೆ ಫೋಟೋ ಕ್ಲಿಕ್ ಮಾಡಲು ಮೃಗಾಲಯಕ್ಕೆ ಹೋದರೆ ಈ ವ್ಯಕ್ತಿ ಬಯಲೊಂದರಲ್ಲಿ ಚಿರತೆಯ ಸಮೀಪದಲ್ಲಿ ನಿಂತುಕೊಂಡು ಸೆಲ್ಫಿ ಕ್ಲಿಕ್ ಮಾಡಿದ್ದಾನೆ.

ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ವ್ಯಕ್ತಿಯೊಬ್ಬ ಬಯಲಿನಲ್ಲಿ ನಿಂತುಕೊಂಡು ಚಿರತೆ ಜೊತೆ ಸೆಲ್ಫಿ ತೆಗೆಯುತ್ತಿರುವ ದೃಶ್ಯವಿದೆ. ಆದರೆ ಈ ಚಿರತೆ ಆಲಸ್ಯದಿಂದ ಇದ್ದಂತೆ ಇದೆ. ಅದು ಸಂಪೂರ್ಣ ಆರೋಗ್ಯಕರವಾಗಿ ಇದೆಯೇ ಅಥವಾ ಏನಾದರೂ ಸಮಸ್ಯೆ ಎಂದು ಬಳಲುತ್ತಿದೆಯೇ ಎಂಬುದು ಖಚಿತವಾಗಿಲ್ಲ.

ಚಿರತೆ ಜೊತೆ ಸೆಲ್ಫಿ: ವಿಡಿಯೋ ಇಲ್ಲಿ ನೋಡಿ

View this post on Instagram

A post shared by ghantaa (@ghantaa)

ಈ ವೀಡಿಯೊವನ್ನು ಇನ್​​ಸ್ಟಾಗ್ರಾಮ್​​ನಲ್ಲಿ ಹಂಚಿಕೊಳ್ಳಲಾಗಿದ್ದು, ಶೇರ್ ಆದ ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ಜನ ಅದನ್ನು ವೀಕ್ಷಿಸಿದ್ದಾರೆ. ಅದು ನಿಜವಾಗಿಯೂ ಚಿರತೆಯೇ ಅಥವಾ ನಾಯಿಗೆ ಬಣ್ಣ ಕೊಡಲಾಗಿದೆಯೇ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿದ್ರೆ ನೀವು ಶಾಕ್ ಆಗುವುದಂತೂ ಖಂಡಿತ.

ಇದನ್ನೂ ಓದಿ: ಎಣ್ಣೆಯ ಬದಲಿಗೆ ತಪ್ಪಾಗಿ ಶವರ್ ಜೆಲ್ ಬಳಸಿ ಚಿಕನ್​​ ಕರಿ ತಯಾರಿಸಿದ ಮಹಿಳೆ

ಅಂದಹಾಗೆ, ಈ ಘಟನೆ ನಡೆದಿರುವುದು ಎಲ್ಲಿ? ಚಿರತೆ ಜೊತೆ ಸೆಲ್ಫಿ ತೆಗೆದ ವ್ಯಕ್ತಿ ಯಾರು? ಇತ್ಯಾದಿ ಯಾವ ವಿವರಗಳನ್ನೂ ವಿಡಿಯೋದ ಜೊತೆ ಹಂಚಿಕೊಳ್ಳಲಾಗಿಲ್ಲ.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್