AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬಾ ಧೈರ್ಯವೇ! ಚಿರತೆ ಜೊತೆ ಸೆಲ್ಫಿ ತೆಗೆಯುತ್ತಿರುವ ಯುವಕ, ವಿಡಿಯೋ ವೈರಲ್

ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ವ್ಯಕ್ತಿಯೊಬ್ಬ ಬಯಲಿನಲ್ಲಿ ನಿಂತುಕೊಂಡು ಚಿರತೆ ಜೊತೆ ಸೆಲ್ಫಿ ತೆಗೆಯುತ್ತಿರುವ ದೃಶ್ಯವಿದೆ. ಇದನ್ನು ನೋಡಿ ನೆಟ್ಟಿಗರು ಹೌಹಾರಿದ್ದಾರೆ. ಇನ್ನೊಂದಷ್ಟು ಮಂದಿ ವಿಡಿಯೋ ಪೋಸ್ಟ್ ಮಾಡಿದವರ ಕಾಲೆಳೆದಿದ್ದಾರೆ. ನಾಯಿಗೆ ಬಣ್ಣ ಕೊಡಲಾಗಿದೆಯೇ ಎಂದು ಕೆಲವರು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಅಬ್ಬಾ ಧೈರ್ಯವೇ! ಚಿರತೆ ಜೊತೆ ಸೆಲ್ಫಿ ತೆಗೆಯುತ್ತಿರುವ ಯುವಕ, ವಿಡಿಯೋ ವೈರಲ್
ಚಿರತೆ ಜೊತೆ ಸೆಲ್ಫಿ ತೆಗೆಯುತ್ತಿರುವ ಯುವಕ, ವಿಡಿಯೋ ವೈರಲ್
ಗಣಪತಿ ಶರ್ಮಾ
|

Updated on: Apr 08, 2024 | 7:13 AM

Share

ಏಕಾಏಕಿ ಫೇಮಸ್ ಆಗುವ ಹುಚ್ಚಿನಲ್ಲಿ ಜನ ಏನೇನೋ ಗಿಮಿಕ್​​ಗಳನ್ನು ಮಾಡುತ್ತಿರುತ್ತಾರೆ. ಸೆಲ್ಫಿ, ರೀಲ್ಸ್ ಮಾಡಿ ಸಾಮಾಜಿಕ ಮಾಧ್ಯಮಗಳ (Socail Media) ಮೂಲಕ ಗಮನ ಸೆಳೆಯಲು ಯತ್ನಿಸುತ್ತಿರುತ್ತಾರೆ. ಯುವಕನೊಬ್ಬ ಚಿರತೆ (Cheetah) ಜೊತೆ ಸೆಲ್ಫಿ ತೆಗೆಯುತ್ತಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣಗಳಾದ ಇನ್​​ಸ್ಟಾಗ್ರಾಮ್, ಫೇಸ್ಬುಕ್ ಹಾಗೂ ಟ್ವಿಟ್ಟರ್​​ಗಳಲ್ಲಿ ವೈರಲ್ ಆಗುತ್ತಿದೆ. ಅನೇಕರು ಸಿಂಹ, ಹುಲಿ ಇತ್ಯಾದಿ ಪ್ರಾಣಿಗಳ ಜೊತೆ ಫೋಟೋ ಕ್ಲಿಕ್ ಮಾಡಲು ಮೃಗಾಲಯಕ್ಕೆ ಹೋದರೆ ಈ ವ್ಯಕ್ತಿ ಬಯಲೊಂದರಲ್ಲಿ ಚಿರತೆಯ ಸಮೀಪದಲ್ಲಿ ನಿಂತುಕೊಂಡು ಸೆಲ್ಫಿ ಕ್ಲಿಕ್ ಮಾಡಿದ್ದಾನೆ.

ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ವ್ಯಕ್ತಿಯೊಬ್ಬ ಬಯಲಿನಲ್ಲಿ ನಿಂತುಕೊಂಡು ಚಿರತೆ ಜೊತೆ ಸೆಲ್ಫಿ ತೆಗೆಯುತ್ತಿರುವ ದೃಶ್ಯವಿದೆ. ಆದರೆ ಈ ಚಿರತೆ ಆಲಸ್ಯದಿಂದ ಇದ್ದಂತೆ ಇದೆ. ಅದು ಸಂಪೂರ್ಣ ಆರೋಗ್ಯಕರವಾಗಿ ಇದೆಯೇ ಅಥವಾ ಏನಾದರೂ ಸಮಸ್ಯೆ ಎಂದು ಬಳಲುತ್ತಿದೆಯೇ ಎಂಬುದು ಖಚಿತವಾಗಿಲ್ಲ.

ಚಿರತೆ ಜೊತೆ ಸೆಲ್ಫಿ: ವಿಡಿಯೋ ಇಲ್ಲಿ ನೋಡಿ

View this post on Instagram

A post shared by ghantaa (@ghantaa)

ಈ ವೀಡಿಯೊವನ್ನು ಇನ್​​ಸ್ಟಾಗ್ರಾಮ್​​ನಲ್ಲಿ ಹಂಚಿಕೊಳ್ಳಲಾಗಿದ್ದು, ಶೇರ್ ಆದ ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ಜನ ಅದನ್ನು ವೀಕ್ಷಿಸಿದ್ದಾರೆ. ಅದು ನಿಜವಾಗಿಯೂ ಚಿರತೆಯೇ ಅಥವಾ ನಾಯಿಗೆ ಬಣ್ಣ ಕೊಡಲಾಗಿದೆಯೇ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿದ್ರೆ ನೀವು ಶಾಕ್ ಆಗುವುದಂತೂ ಖಂಡಿತ.

ಇದನ್ನೂ ಓದಿ: ಎಣ್ಣೆಯ ಬದಲಿಗೆ ತಪ್ಪಾಗಿ ಶವರ್ ಜೆಲ್ ಬಳಸಿ ಚಿಕನ್​​ ಕರಿ ತಯಾರಿಸಿದ ಮಹಿಳೆ

ಅಂದಹಾಗೆ, ಈ ಘಟನೆ ನಡೆದಿರುವುದು ಎಲ್ಲಿ? ಚಿರತೆ ಜೊತೆ ಸೆಲ್ಫಿ ತೆಗೆದ ವ್ಯಕ್ತಿ ಯಾರು? ಇತ್ಯಾದಿ ಯಾವ ವಿವರಗಳನ್ನೂ ವಿಡಿಯೋದ ಜೊತೆ ಹಂಚಿಕೊಳ್ಳಲಾಗಿಲ್ಲ.

ಮತ್ತಷ್ಟು ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ