AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಾಡಾನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆಯಲು ಹೋದ ಯುವಕರು, ಮುಂದೇನಾಯಿತು?; ವಿಡಿಯೋ ವೈರಲ್​​

ಲಖಿಂಪುರದ ದುಧ್ವಾ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ. ಡಾ.ಅಹ್ತೇಷಾಮ್ ಸಿದ್ದಿಕ್​ ಎಂಬ ಟ್ವಿಟರ್​​​ ಬಳಕೆದಾರರು ಜುಲೈ 4ರಂದು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

Viral Video: ಕಾಡಾನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆಯಲು ಹೋದ ಯುವಕರು, ಮುಂದೇನಾಯಿತು?; ವಿಡಿಯೋ ವೈರಲ್​​
ಕಾಡಾನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆಯಲು ಹೋದ ಯುವಕರುImage Credit source: twitter
ಅಕ್ಷತಾ ವರ್ಕಾಡಿ
|

Updated on: Jul 06, 2023 | 4:01 PM

Share

ಉತ್ತರ ಪ್ರದೇಶ: ದುಧ್ವಾ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡಾನೆಗಳ ಹಿಂಡಿನ ಮುಂದೆ ಯುವಕರ ಗುಂಪೊಂದು ಸೆಲ್ಫಿ ತೆಗೆಯಲು ಹೋಗಿದ್ದಾರೆ. ಆದರೆ ಈ ವೇಳೆ ಆನೆಗಳು ಏಕಾಏಕಿ ಕೋಪಗೊಂಡು ಯುವಕರ ಮೇಲೆ ದಾಳಿ ಮಾಡಲು ಮುಂದಾಗಿದೆ. ತಕ್ಷಣ ಭಯಭೀತರಾದ ಯವಕರು ಅಲ್ಲಿಂದ ಓಡಾಲಾರಂಭಿಸಿದ್ದಾರೆ. ಪ್ರಾಣ ಉಳಿಸಿಕೊಂಡು ಓಡಿ ಬರುತ್ತಿರುವುದು ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ಇದೀಗಾ ಎಲ್ಲೆಡೆ ಭಾರೀ ವೈರಲ್​​​ ಆಗಿದೆ.

ಪ್ರಾಣ ಉಳಿಸಿಕೊಳ್ಳಲು ಓಡಿಕೊಂಡು ಬರುತ್ತಿರುವ ವೈರಲ್​ ವಿಡಿಯೋ:

ಇದನ್ನೂ ಓದಿ: ಹಚ್ಚೆಯ ಹುಚ್ಚು; ‘ಶೌಚಾಲಯ ಸ್ವಚ್ಛಗೊಳಿಸುವ ಕೆಲಸವೂ ಸಿಗುತ್ತಿಲ್ಲ’ ಲಂಡನ್​ ಮಹಿಳೆಯ ಅಳಲು

ಲಖಿಂಪುರದ ದುಧ್ವಾ ರಾಷ್ಟ್ರೀಯ ಉದ್ಯಾನವನದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಡಾ.ಅಹ್ತೇಷಾಮ್ ಸಿದ್ದಿಕ್​ ಎಂಬ ಟ್ವಿಟರ್​​​ ಬಳಕೆದಾರರು ಜುಲೈ 4ರಂದು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ದುಧ್ವಾ ಹುಲಿ ಸಂರಕ್ಷಿತ ಪ್ರದೇಶದ ಪಾಲಿಯಾ ಗೌರಿಫಾಂತ ಮಾರ್ಗದಲ್ಲಿ ಸುಮಾರು 50 ಆನೆಗಳ ಹಿಂಡು ರಸ್ತೆಯಲ್ಲಿ ನಿಂತಿದ್ದವು. ಇಲ್ಲಿ ಅದೇ ವೇಳೆಗೆ ಮೂವರು ಯುವಕರು ಆನೆಗಳ ಸಮೀಪಕ್ಕೆ ಸೆಲ್ಫಿ ತೆಗೆಯಲು ಬಂದಿದ್ದಾರೆ. ಯುವಕರು ಆನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಆರಂಭಿಸಿದ ವೇಳೆ ಆನೆಗಳು ಆಕ್ರೋಶಗೊಂಡು ಯುವಕರನ್ನು ಓಡಿಸಿಕೊಂಡು ಬಂದಿದೆ. ಆನೆಗಳು ಬರುತ್ತಿರುವುದನ್ನು ಕಂಡು ಮೂವರು ಯುವಕರು ಭಯಗೊಂಡು ಓಡಲು ಪ್ರಾರಂಭಿಸಿದ್ದಾರೆ. ಓಡುವಾಗ ಯುವಕನೊಬ್ಬ ರಸ್ತೆಗೆ ಬಿದ್ದಿದ್ದಾನೆ. ದೂರದಲ್ಲಿ ನಿಂತಿದ್ದ ದಾರಿಹೋಕರು ಗಲಾಟೆ ಮಾಡಲಾರಂಭಿಸಿದಾಗ ಆನೆಗಳು ತಿರುಗಿ ಕಾಡಿಗೆ ಓಡಿ ಹೋಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ